ಮೈಸೂರು: ಒಂದು ಶವ ಹುಡುಕುತ್ತಿದ್ದರೆ, ಸಿಕ್ಕಿದ್ದು ಮೂರು ಶವ!
Recommended Video

ಮೈಸೂರು, ನವೆಂಬರ್ 21: ಮೈಸೂರಿನ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮ ಸಮೀಪದ ಅಂಕನಹಳ್ಳಿ ಕೆರೆಯಲ್ಲಿ ಸಿಕ್ಕ ಅಪರಿಚಿತ ಶವಗಳು ಯಾರದ್ದು ಎಂಬ ಪ್ರಶ್ನೆ ಇದೀಗ ಪೊಲೀಸರು ಸೇರಿದಂತೆ ಗ್ರಾಮಸ್ಥರನ್ನು ಕಾಡತೊಡಗಿದೆ. ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದ ಮಹಿಳೆಯ ಶವದ ಹುಡುಕಾಟ ನಡೆಸಿದಾಗ ಪೊಲೀಸರಿಗೆ ಮತ್ತೆರಡು ಕೊಳೆತ ಶವ ದೊರೆತಿರುವುದು ಅಚ್ಚರಿಗೆ ಕಾರಣವಾಗಿದೆ.
ಸಾಲಿಗ್ರಾಮ ಸಮೀಪದ ಲಕ್ಷ್ಮೀಪುರ ಗ್ರಾಮದ ಮಹೇಶ್ ಅವರ ಪತ್ನಿ ಪುಟ್ಟಗೌರಮ್ಮ (26) ಎಂಬಾಕೆ ನ.17ರಂದು ಬಟ್ಟೆತೊಳೆಯುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದರು. ಈ ಬಗ್ಗೆ ಪತಿ ಮಹೇಶ್ ನೀಡಿದ ದೂರಿನ ಮೇರೆಗೆ ಶವವನ್ನು ಕೆರೆಯಿಂದ ಹೊರ ತೆಗೆಯುವ ಸಲುವಾಗಿ ಸಾಲಿಗ್ರಾಮ ಪೊಲೀಸ್ ಠಾಣೆಯ ಎ.ಎಸ್.ಐ ತಿಮ್ಮನಾಯಕ ಹಾಗೂ ಸಿಬ್ಬಂದಿ ಮೀನುಗಾರರ ಸಹಾಯಪಡೆದು ಶೋಧಕಾರ್ಯ ನಡೆಸಿದ್ದರು.

ಚಾಮರಾಜ ಎಡದಂಡೆ ನಾಲೆಯ ಬಳಿ ಸ್ಥಳ ಪರಿಶೀಲಿಸಿದರೂ ಶವ ಪತ್ತೆಯಾಗಿರಲಿಲ್ಲ, ಶುಕ್ರವಾರದಿಂದ ನಾಲೆಯಲ್ಲಿ ಹುಡುಕಾಟ ನಡೆಸಿ ಕೊನೆಗೆ ಅಂಕನಹಳ್ಳಿ ಗ್ರಾಮದಲ್ಲಿ ಚಾಮರಾಜ ಎಡದಂಡೆ ನಾಲೆಗೆ ಹೊಂದಿ ಕೊಂಡಿರುವ ಕೆರೆಯಲ್ಲಿ ಪುಟ್ಟಗೌರಮ್ಮಳ ಶವ ಹುಡುಕುವಾಗ ಒಂದಿಷ್ಟು ದೂರದಲ್ಲಿ ಇಬ್ಬರು ಅಪರಿಚಿತ ಪುರುಷರ ಶವ ಪತ್ತೆಯಾಗಿದ್ದು, ಶವಗಳ ಗುರುತು ಪತ್ತೆ ಮಾಡಲಾಗದಷ್ಟು ದೇಹ ಕೊಳೆತು ವಿಕಾರವಾಗಿದೆ. ಇದರೊಂದಿಗೆ ಪುಟ್ಟಗೌರಮ್ಮಳ ಶವವೂ ದೊರೆತಿದೆ. ಇದೀಗ ಒಬ್ಬರ ಶವದೊಂದಿಗೆ ಇನ್ನಿಬ್ಬರು ಪುರುಷರ ಶವ ದೊರೆತಿದ್ದು ಅದು ಯಾರ ಶವ ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.
ಸ್ಥಳಕ್ಕೆ ಗ್ರೇಡ್-2 ತಹಸೀಲ್ದಾರ್ ಹೆಚ್.ಆರ್.ರಂಗರಾಜ್ ತಮ್ಮ ಸಿಬ್ಬಂದ್ದಿಗಳೊಡನೆ ತೆರಳಿ ಸ್ಥಳ ಪರಿಶೀಲಿಸಿ ಮಹಿಳೆ ಪುಟ್ಟಗೌರಮ್ಮಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪರಿಚಿತ ಶವದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications