ಮೈಸೂರಿನಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್​ ಧರಿಸುವಂತೆ ಪಾಠ ಹೇಳಿದ ಗಣಪ

ಮೈಸೂರು, ಜುಲೈ 18 :ಸಂಚಾರಿ ನಿಯಮ ಉಲ್ಲಂಘನೆ ನಿಯಂತ್ರಣಕ್ಕೆ ಮೈಸೂರು ಪೊಲೀಸರು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಹೆಲ್ಮೆಟ್ ಹಾಕದೆ ಬೈಕ್ ಚಾಲನೆ ಮಾಡುವವರಿಗೆ ಪೊಲೀಸರು 'ಗಣಪನಿಂದ ವಾರ್ನಿಂಗ್' ಎಂಬ ವಿಶೇಷ ಅಭಿಯಾನ ಹಮ್ಮಿಕೊಂಡಿದ್ದಾರೆ.

ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲು, ಬೈಕ್​ ಸವಾರರಿಗೆ ಹೆಲ್ಮೆಟ್​​ ಧರಿಸುವಂತೆ ತಿಳಿಹೇಳಲು ಗಣೇಶ ವೇಷಧಾರಿ ಹೆಲ್ಮೆಟ್​ ಧರಿಸದ ಬೈಕ್​ ಸವಾರರನ್ನು ತಡೆದು ಗುಲಾಬಿ ಹೂ ನೀಡಿ, ಹೆಲ್ಮೆಟ್​ ಧರಿಸುವಂತೆ ಪಾಠ ಹೇಳಿದ್ದಾರೆ.

Mysuru Police have organized a special campaign

ರಸ್ತೆ ಸುರಕ್ಷಿತ ಹಾಗೂ ಸಂಚಾರ ನಿರ್ವಹಣೆ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಭಿನ್ನ ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸರು ಹೆಲ್ಮೆಟ್​​ ಜಾಗೃತಿ ಕುರಿತು ಕಾರ್ಯಕ್ರಮವನ್ನು ನಡೆಸಿದರು. ನಗರದ ರೈಲ್ವೆ ವೃತ್ತದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

Mysuru Police have organized a special campaign

ಅಂದಹಾಗೆ ರಸ್ತೆಯಲ್ಲಿ ಗಣೇಶನನ್ನು ಅಂದರೆ ಗಣೇಶ ವೇಷಧಾರಿ ಕಂಡು ಸಾರ್ವಜನಿಕರು ತಬ್ಬಿಬ್ಬಾದರು. ಇತ್ತೀಚೆಗೆ ಯಮನ ವೇಷಧಾರಿಯಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸಲಾಗಿತ್ತು. ಅಲ್ಲದೇ, ಹೆಲ್ಮೆಟ್​ ಹಾಕದ ಬೈಕ್​ ಸವಾರರಿಗೆ ದಂಡ ಹಾಕುವ ಬದಲು ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+