ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಪೊಲೀಸರು
ಮೈಸೂರು, ಮಾರ್ಚ್ 09: ಹುಟ್ಟುಹಬ್ಬದ ದಿನದಂದೇ ಬರ್ಬರವಾಗಿ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಎಸ್.ಆನಂದ ಅಲಿಯಾಸ್ ವಡ್ಡ ಆನಂದ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.
ಹತ್ಯೆಯ ಪ್ರಮುಖ ಆರೋಪಿ ಬಸವರಾಜು ಶನಿವಾರ ಮೈಸೂರು ನ್ಯಾಯಾಲಯಕ್ಕೆ ಬಂದು ಶರಣಾಗಿದ್ದಾನೆ. ಈಗ ನ್ಯಾಯಾಂಗ ಬಂಧನದಲ್ಲಿದ್ದು, ಇಂದು ಪೊಲೀಸರು ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಿಶೇಷ ತನಿಖಾ ತಂಡ ರಚಿಸಿ ತಲೆಮರೆಸಿಕೊಂಡಿರುವ ಇನ್ನೂ ಐವರು ಹಂತಕರ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ. ಕುವೆಂಪು ನಗರ ಠಾಣೆ ಇನ್ಸ್ ಪೆಕ್ಟರ್ ರಾಜು ನೇತೃತ್ವದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮೈಸೂರಿನ ಕುವೆಂಪು ನಗರದ ಲವ ಕುಶ ಪಾರ್ಕ್ ಬಳಿಯ ಸರ್ವಿಸ್ ಅಪಾರ್ಟ್ಮೆಂಟ್ ನಲ್ಲಿ ಮಾ. 5 ರ ತಡರಾತ್ರಿ ಸ್ನೇಹಿತರಿಂದಲೇ ಬರ್ಬರವಾಗಿ ಬಿಜೆಪಿ ಮುಖಂಡ ಎಸ್.ಆನಂದ್ ಅಲಿಯಾಸ್ ವಡ್ಡ ಆನಂದ ಹತ್ಯೆ ನಡೆದಿತ್ತು.












Click it and Unblock the Notifications