ಮೈಸೂರು: ರಾಜು ಹತ್ಯೆ ಆರೋಪಿಗೆ 6 ತಿಂಗಳು ಗಡಿಪಾರು ಶಿಕ್ಷೆ
ಮೈಸೂರು, ಮಾರ್ಚ್ 16: ಆರ್.ಎಸ್.ಎಸ್-ಬಿಜೆಪಿ ಮುಖಂಡ ರಾಜು ಹತ್ಯೆ ಪ್ರಕರಣದ ಆರೋಪಿ ಹಬೀಬ್ ಪಾಷಾ ನನ್ನು ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ. ಮುಂದಿನ 6 ತಿಂಗಳ ಕಾಲ ಮೈಸೂರು, ಮಂಡ್ಯ, ಹುಣಸೂರು, ಮಂಗಳೂರು ಹಾಗೂ ಚಾಮರಾಜನಗರಕ್ಕೆ ಅವರು ಪ್ರವೇಶಿಸದಂತೆ ಆದೇಶಿಸಲಾಗಿದೆ ಎಂದು ಮೈಸೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ವಿಷ್ಣುವರ್ಧನ್ ಆದೇಶಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
2016ರ ಮಾರ್ಚ್ 13ರಂದು ರಾಜು ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಹುಣಸೂರಿನ ಹಬೀಬ್ ಪಾಷಾನನ್ನು ಬಂಧಿಸಲಾಗಿತ್ತಾದರೂ ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಗೊಂಡಿದ್ದರು.
ಕೊಲೆ ಆರೋಪಿಗೆ ಜಾಮೀನು ಸಿಕ್ಕ ದಿನ, ಸೆಲ್ಫಿಗೆ ಮುಗಿಬಿದ್ದ ಜನ!
ಆತನ ವಿರುದ್ಧ 8 ಕೊಲೆ ಆರೋಪಗಳಿದ್ದರೂ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಲ್ಲದೆ, ಬಿಡುಗಡೆಗೊಂಡ ಆತನಿಗೆ ಜನರಿಂದ ಅದ್ಧೂರಿ ಸ್ವಾಗತ ದೊರೆತಿತ್ತು. ಆದರೆ ಆತನಿಂದ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಕಾರಣಕ್ಕೆ ಮಾ.15 ರಂದು ಆತನನ್ನು ಗಡಿಪಾರು ಮಾಡಲಾಗಿದೆ.