Mysuru Robbery: ರಾಜ್ಯದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ದರೋಡೆ: ಹಾಡಹಗಲೇ ಕಾರು ಅಡ್ಡಗಟ್ಟಿದ ಮುಸುಕುಧಾರಿಗಳು!
ಮೈಸೂರು, ಜನವರಿ 20: ರಾಜ್ಯದಲ್ಲಿ ವಿವಿಧ ಕಡೆಗಳಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರಿದಿದೆ. ಬೀದರ್ ಮತ್ತು ಮಂಗಳೂರು ಬಳಿಕ ಮೈಸೂರಿನಲ್ಲಿ ಸೋಮವಾರ ಮುಸುಕುಧಾರಿ ದರೋಡೆಕೋರರು ಗ್ಯಾಂಗ್ ಹಾಡಹಗಲೇ ಕಾರಿನ ಮೇಲೆ ಅಟ್ಯಾಕ್ ಮಾಡಿ ದರೋಡೆ ಮಾಡಿದೆ. ದರೋಡೆಕೋರರ ಈ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸರಣಿ ದರೋಡೆ ಕೃತ್ಯಗಳು ರಾಜ್ಯದ ಜನರಿಗೆ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಅನುಮಾನ ಹುಟ್ಟುವಂತೆ ಮಾಡಿವೆ.
ಹೌದು, ಸೋಮವಾರ ಬೆಳಗ್ಗೆ ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿ ತೆರಳುತ್ತಿದ್ದ ಕೇರಳ ಮೂಲದ ಉದ್ಯಮಿಯ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಮಾಲೀಕರ ಮೇಲೆ ಹಲ್ಲೆ ಮಾಡಿದ ಮುಸಕುಧಾರಿ ದರೋಡೆಕೋರರು ಹಣ ಕಿತ್ತುಕೊಂಡಿದ್ದಲ್ಲದೇ ಉದ್ಯಮಿ ಕಾರಿನ ಸಮೇತ ಪರಾರಿಯಾಗಿದ್ದಾರೆ.

ಬೇರೆ ಕಾರುಗಳಲ್ಲಿ ಬೆನ್ನಟ್ಟಿ ನಡು ರಸ್ತೆಯಲ್ಲಿ ಹಾಡಹಗಲೇ ಅಡ್ಡಿಗಟ್ಟಿದ ಪಾಪಿಗಳು ಏಕಾಎಕಿ ಉದ್ಯಮಿಯನ್ನು ಹೊರಕ್ಕೆಳೆದು ಹಲ್ಲೆ ಮಾಡಿದೆ. ದರೋಡೆಗೆ ಒಳಗಾದ ಕಾರಿನ ಒಳಕ್ಕೆ ಇಬ್ಬರೆ ಇದ್ದರು ಎಂಬ ಮಾಹಿತಿ ಇದೆ. ನಾಲ್ಕೈದು ಜನರ ದರೋಡೆ ಗುಂಪು ದಿಢೀರ್ ದಾಳಿಗೆ ಉದ್ಯಮಿ ಕಂಗಾಲಾಗಿದ್ದಾರೆ. ನೋಡ ನೋಡುತ್ತಲೇ ಹಲ್ಲೆಗೈದು, ಕಾರು ದೋಚಿ ಕ್ಷಣಮಾತ್ರದಲ್ಲಿ ಪರಾರಿಯಾಗಿದ್ದಾರೆ.
ಬೀದರ್ನಲ್ಲಿ ಎಸ್ಬಿಐ ಸಿಬ್ಬಂದಿಗೆ ಗುಂಡಿಕ್ಕಿದ್ದ ಶಸ್ತ್ರಸಹಿತ ದರೋಡೆಕೋರರು ಸುಮಾರು 94ಲಕ್ಷ ರೂಪಾಯಿ ಹಣ ದೋಚಿ ಬೈಕ್ ಮೇಲೆ ಪರಾರಿಯಾಗಿದ್ದರು. ಇದರ ಬೆನ್ನಲ್ಲೆ ಮಂಗಳೂರಿನಲ್ಲಿ ದರೋಡೆ ನಡೆದಿತ್ತು. ಇವರೆಡು ಸಿನಿಮೀಯ ರೀತಿಯಲ್ಲಿ ನಡೆದು ರಾಜ್ಯ ಜನರಿಗೆ ಅಚ್ಚರಿ ಮೂಡಿಸಿತ್ತು. ಇದು ನಿಜವಾ ಎನ್ನುವಷ್ಟರಲ್ಲಿ ದರೋಡೆಕೋರರ ದಾಳಿಗೆ ಹೆಣಗಳು ಬಿದ್ದಿದ್ದವು.
ಇದೀಗ ಈ ಎರಡು ಘಟನೆಗಳು ಮಾಸುವ ಮೊದಲೇ ಮೈಸೂರಿನಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕಾರಿನ ಮೇಲೆ ದಾಳಿ ನಡೆದಿದೆ. ಇದು ಸಹ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದೆ. ಪೊಲೀಸರು, ಕಾನೂನಿನ ಭಯ ಇಲ್ಲದಂತಾಗಿದೆ. ನಾಗರಿಕರು, ಮಕ್ಕಳು, ಮಹಿಳೆಯರು ಹಗಲು ಹೊತ್ತೆ ಓಡಾಡಲು ಭಯಪಡುವ ವಾತಾವರಣ ನಿರ್ಮಾಣವಾಗುತ್ತಿದೆ.
ಸದ್ಯ ಈ ಉದ್ಯಮಿಗಳ ಮೇಲೆ ನಡೆದ ಕೃತ್ಯ ಯಾವ ಕಾರಣದಿಂದ ನಡೆದಿದೆ?. ಇವು ವೃತ್ತಿಪರ ದರೋಡೆಕೋರರಾ?, ಇಲ್ಲ ಉದ್ಯಮಿ ಜೊತೆಗೆ ಹಳೇ ವೈಷಮ್ಯ ಏನಾದರೂ ಇತ್ತಾ? ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಸ್ಥಳಕ್ಕೆ ಭೇಟಿ ಕೊಟ್ಟ ಎಸ್ಪಿ ಹೇಳಿದ್ದೇನು?
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ವಿಷ್ಣುವರ್ಧನ ಅವರು, ಮಾಹಿತಿ ಕಲೆ ಹಾಕುತ್ತಿದ್ದೇವೆ. ಕೇರಳದ ಮೂಲಕ ಇಬ್ಬರು ಕಾರಿನಲ್ಲಿ ಹೋಗುವಾಗ ಘಟನೆ ಸಂಭವಿಸಿದೆ. ಖದೀಮರನ್ನು ಪೊಲೀಸರ ಪತ್ತೆ ಮಾಡಲಿದ್ದಾರೆ. ಗಡಿ ಭಾಗದಲ್ಲಿ ನಾಕಾ ಬಂಧಿ ಹಾಕಲು ಸಿಬ್ಬಂದಿ ಜೊತೆಗೆ ಮಾತನಾಡಿದ್ದೇನೆ. ದರೋಡೆಕೋರರು ಪರಾರಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಎಲ್ಲಿಯಾದರೂ ಅನುಮಾನಾಸ್ಪದ ಕಾರು, ವ್ಯಕ್ತಿಗಳು, ಒಂಟಿ ಕಾರು ಕಂಡಲ್ಲಿ ಕೂಡಲೇ 112ಗೆ ಕರೆ ಮಾಡುವಂತೆ ಎಸ್ಪಿ ಕೋರಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications