ಕೊಡಗು ಸಂತ್ರಸ್ತರಿಗೆ 50 ಮನೆ ಕಟ್ಟಿಕೊಡಲು ರೋಟರಿ ತಂಡ ಸನ್ನದ್ಧ
ಮೈಸೂರು, ನವೆಂಬರ್ 28 : ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಕೊಡಗು ನಿರಾಶ್ರಿತರಿಗೆ ರೋಟರಿ ಸಂಸ್ಥೆ ವತಿಯಿಂದ 50 ಮನೆಗಳನ್ನು ನಿರ್ಮಿಸಿ ಕೊಡುವ ಮೂಲಕ ಸಹಾಯಹಸ್ತ ಚಾಚಲಾಗುವುದು ಎಂದು ರೋಟರಿ ಜಿಲ್ಲಾ ಗವರ್ನರ್ ಪಿ.ರೋಹಿನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ನಿರಾಶ್ರಿತರಾದವರಿಗೆ ಪ್ರತಿ ಮನೆಯನ್ನು 5 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ರೋಟರಿ ಸಂಸ್ಥೆ ಚರ್ಚಿಸಿದೆ.
50 ಮನೆಗಳಲ್ಲಿ 10 ಮನೆಗಳನ್ನು ಅಂತಾರಾಷ್ಟ್ರೀಯ ರೋಟರಿ ನಿರ್ದೇಶಕ ಸಿ.ಭಾಸ್ಕರ್ ಅವರೊಬ್ಬರೇ ನಿರ್ಮಿಸಿ ಕೊಡಲು ಒಪ್ಪಿದ್ದಾರೆ ಎಂದು ತಿಳಿಸಿದರು.

ಸದ್ಯಕ್ಕೆ ರೋಟರಿ ಸಂಸ್ಥೆಯೂ ಅಂಗನವಾಡಿಗಳಲ್ಲಿನ ಕುಂದು-ಕೊರತೆಗಳನ್ನು ನಿವಾರಿಸಲು ಯೋಚಿಸುತ್ತಿದೆ. ಜಿಲ್ಲಾರೋಟರಿ ವ್ಯಾಪ್ತಿಯಲ್ಲಿ ಅಂಗನವಾಡಿಗಳ ಸಮೀಕ್ಷೆ ಮಾಡಲಾಗಿದ್ದು, ಅವುಗಳು ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳ ಕಡೆಗೆ ಗಮನಹರಿಸಲಾಗಿದೆ ಎಂದರು.
ಅಂತಾರಾಷ್ಟ್ರೀಯ ರೋಟರಿ ನಿರ್ದೇಶಕ ಸಿ.ಭಾಸ್ಕರ್ ಮಾತನಾಡಿ, ರೋಟರಿಸಂಸ್ಥೆಯಲ್ಲಿ 35 ಸಾವಿರಕ್ಕಿಂತಲೂ ಹೆಚ್ಚು ರೋಟರಿ ಕ್ಲಬ್ ಗಳ ಮೂಲಕ 200 ಕ್ಕಿಂತಲೂ ಹೆಚ್ಚು ದೇಶಗಳಲ್ಲಿ, ದುರ್ಬಲವರ್ಗದವರ ಏಳಿಗೆಗಾಗಿ ದುಡಿಯುತ್ತಿದೆ. ಇದು12 ಲಕ್ಷ ಸ್ವಯಂ ಸೇವಕರನ್ನು ಹೊಂದಿರುವ ಜಾಗತಿಕ ಸೇವಾ ಸಂಸ್ಥೆಯಾಗಿದೆ ಎಂದು ಹೇಳಿದರು.
ರಾಜ್ಯದ ಮೈಸೂರು, ಚಾಮರಾಜನಗರ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 75 ಕ್ಲಬ್ ಗಳಲ್ಲಿ 5 ಸಾವಿರ ರೋಟರಿಯನ್ನರು ಶಕ್ತಿ ಮೀರಿ ಸಾರ್ವಜನಿಕರಿಗೆ ಸ್ವಯಂಪ್ರೇರಿತ ಸೇವೆಗಳನ್ನು ನೀಡುತ್ತಿದ್ದಾರೆ. ನಮ್ಮ ಸಮಾಜಮುಖಿ ಕೆಲಸಗಳಿಗೆ ಮಾಧ್ಯಮಗಳ ಸಹಕಾರವೂ ದೊರಕುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications