ದಸರಾ ವೇಳೆಯೇ ಮೈಸೂರು ರಾಜಮನೆತನಕ್ಕೆ ಮತ್ತೊಂದು ಕುಡಿ, ದುಪ್ಪಟ್ಟಾಯ್ತು ಸಂಭ್ರಮ!
ಮೈಸೂರು ರಾಜವಂಶಸ್ಥರಾದ ಒಡೆಯರ್ ಅವರಿಂದಾಗಿ ದಸರಾ ಜಗದ್ವಿಖ್ಯಾತಿಯಾಗಿದೆ. ಹಬ್ಬದ ಸಮಯದಲ್ಲೇ ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿ ಅವರು ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ. ಸದ್ಯ ದಸರಾ ಹೊತ್ತಲ್ಲೇ ಒಡೆಯರ್ ಕುಟುಂಬದಲ್ಲಿ ಡಬಲ್ ಧಮಾಕಾದ ಸಂಭ್ರಮ ಮನೆಮಾಡಿದೆ.
ಯದುವೀರ್ ಹಾಗೂ ಪತ್ನಿ ರಾಣಿ ತ್ರಿಷಿಕಾ ಕುಮಾರಿ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರೂ ಕ್ಷೇಮವಾಗಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರು ದಸರಾ ಆಚರಣೆಯಲ್ಲಿದ್ದ ರಾಜರ ಕುಟುಂಬವು ಸದ್ಯ ಎರಡೆರಡು ಹಬ್ಬದ ಸಂಭ್ರಮದಲ್ಲಿದೆ.

ಈ ವರ್ಷ ಯುವರಾಜ ಯದುವೀರ್ ಒಡೆಯರ್ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಸದ್ಯ ಬಿಜೆಪಿ ಸಂಸದರೂ ಆಗಿದ್ದಾರೆ. ಮತ್ತೊಂದೆಡೆ ದಸರಾ ಸಂಭ್ರಮದ ಜೊತೆಗೆ ಎರಡನೇ ಪುತ್ರನ ಆಗಮನದೊಂದಿಗೆ ಹರುಷದ ಕಡಲಲ್ಲಿ ತೇಲಿದ್ದಾರೆ.
ಮಗುವಿನ ಜನನದ ಬೆನ್ನಲ್ಲೇ ಮೈಸೂರಿಗೆ ಮತ್ತೊಬ್ಬ ಯುವರಾಜನ ಆಗಮನವಾಗಿದೆ ಎಂದು ಸಾಂಸ್ಕೃತಿಕ ನಗರಿಯ ಜನ ಫುಲ್ ಖುಷ್ ಆಗಿದ್ದಾರೆ. ವಿಜಯದಶಮಿಗೆ ಒಂದು ದಿನ ಬಾಕಿಯಿದೆ. ದಸರಾ ಜಂಬೂಸವಾರಿಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಮೈಸೂರಿನ ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ. ಇದೇ ವೇಳೆ ಯುವರಾಜನ ಜನನವು ಸಂಭ್ರಮವನ್ನು ದುಪ್ಪಟ್ಟು ಮಾಡಿದೆ.

ಯದುವೀರ್ ಅವರು ಖಾಸಗಿ ದರ್ಬಾರ್ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ತ್ರಿಷಿಕಾ ಕುಮಾರಿ ಅವರನ್ನು ಗುರುವಾರ (ನಿನ್ನೆ) ರಾತ್ರಿಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮುಂಜಾನೆ ಹೊತ್ತಲ್ಲಿ ಹೆರಿಗೆಯಾಗಿದ್ದು, ಈ ವಿಚಾರ ಅರಮನೆಯಲ್ಲಿದ್ದ ಯದುವೀರ್ ಅವರಿಗೆ ತಲುಪಿತು. ಇಂದು ಆಯುಧಪೂಜೆಯ ಸಂಭ್ರಮದ ವೇಳೆ ತಮಗೆ ಎರಡನೇ ಮಗು ಜನಿಸಿರುವ ವಿಷಯ ಕೇಳಿ ಯದುವೀರ್ ಸಂಭ್ರಮಿಸಿದ್ದಾರೆ.
ಸದ್ಯ ಯದುವೀರ್ ಅವರು ಖಾಸಗಿ ದರ್ಬಾರ್ನಲ್ಲಿ ಇರುವ ಕಾರಣದಿಂದ ಅವರು ಕಂಕಣಧಾರಿಯಾಗಿದ್ದಾರೆ. ಹಾಗಾಗಿ ಯದುವೀರ್ ಅವರು ಮೈಸೂರು ಅರಮನೆಯಿಂದ ಹೊರಗೆ ಹೋಗುವಂತಿಲ್ಲ. ಖಾಸಗಿ ದರ್ಬಾರ್ ಪೂರ್ಣಗೊಂಡ ಬಳಿಕವೇ ಅವರು ಅರಮನೆಯಿಂದ ಹೊರಬಂದು ತಮ್ಮ ಪುತ್ರನನ್ನು ಕಣ್ತುಂಬಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತ್ರಿಷಿಕಾ ಕುಮಾರಿ ಅವರನ್ನು 2016ರಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ಅವರು ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ಆದ್ಯವೀರ್ ಎಂದು ನಾಮಕರಣ ಮಾಡಲಾಗಿದೆ. ಇದೀಗ ಮೈಸೂರು ರಾಜಮನೆತನಕ್ಕೆ ಮತ್ತೊಂದು ಕುಡಿ ಕಾಲಿಟ್ಟಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications