ಮೈಸೂರು: 11 ದಿನದ ಬಳಿಕ ಸ್ಯಾಂಟ್ರೋ ರವಿ ಬಂಧನ: ಎಡಿಜಿಪಿ ಅಲೋಕ್ ಕುಮಾರ್
ಮೈಸೂರು, ಜನವರಿ, 13: 11 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್ನಲ್ಲಿ ಬಂಧಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮೈಸೂರಿನಲ್ಲಿ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ನ ಅಹಮಬಾದ್ನಲ್ಲಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ಇದಕ್ಕೆ ಗುಜರಾತ್ ಪೊಲೀಸರು ಸಹಕಾರ ನೀಡಿದರು. ಗುಜರಾತ್ನಲ್ಲಿ ನಿತ್ಯ ಒಂದೊಂದು ಜಾಗ ಬದಲಾಯಿಸುತ್ತಿದ್ದ. ಇದಕ್ಕಾಗಿ ನಿತ್ಯ ಸಿಮ್ಗಳನ್ನು ಚೇಂಜ್ ಮಾಡುತ್ತಿದ್ದ. ನಿನ್ನೆಯಷ್ಟೇ ಸ್ಯಾಂಟ್ರೋ ರವಿ ಆಪ್ತನನ್ನು ಮಂತ್ರಾಲಯದಲ್ಲಿ ಬಂಧಿಸಲಾಗಿತ್ತು ಎಂದರು.
ಪೊಲೀಸರು ಸಾಕಷ್ಟು ಶ್ರಮವಹಿಸಿದ್ದಾರೆ
ನಮ್ಮ ಪೊಲೀಸರು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ಬೇರೆ ಬೇರೆ ಜಿಲ್ಲೆಗಳಿಂದ ಎಸ್ಪಿಗಳು ತನಿಖೆಗಾಗಿ ಬಂದಿದ್ದು, ಈತನ ಮೇಲೆ ಸಾಕಷ್ಟು ಪ್ರಕರಣಗಳು ದಾಖಲಾಗಿವೆ. ಇದು ಅವನ ಮೊದಲ ಪ್ರಕರಣ ಅಲ್ಲ. ಪೊಲೀಸ್ ಇಲಾಖೆಯ ಕೆಲವರ ಜೊತೆ ಸ್ಯಾಂಟ್ರೋ ರವಿ ಸಂಕರ್ಪ ಇದೆ. ಈ ಬಗ್ಗೆಯೂ ತನಿಖೆ ನಡೆಸಲಾಗುವುದು. ಸ್ಯಾಂಟ್ರೋ ರವಿ ಬಂಧಿಸಿ ರಾಜ್ಯದ ಪೊಲೀಸರ ಗೌರವ ಉಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡವರಿಗೆ ಬಹುಮಾನ ನೀಡಲಾಗುವುದು. ಸ್ಯಾಂಟ್ರೋ ರವಿ ವಿಮಾನದಲ್ಲಿ ಗುಜರಾತ್ಗೆ ಹಾರಿದ್ದ. ಮೈಸೂರಿನಿಂದ ಮಂಗಳೂರಿಗೆ ತೆರಳಿದ್ದ. ಮಂಗಳೂರಿನಿಂದ ಪೂನಾಗೆ ಹೊರಟು, ಅಲ್ಲಿಂದ ವಿಮಾನದಲ್ಲಿ ಗುಜರಾತ್ಗೆ ತೆರಳಿದ್ದ ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಸ್ಯಾಂಟ್ರೋ ರವಿ ಮೈಸೂರಿಗೆ ಮತ್ತೆ ಆಗಮಿಸಿದ್ದ. ಈ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮೈಸೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ದರು. ಸ್ಯಾಂಟ್ರೋ ರವಿ ಪ್ರಕರಣ ಬೆಳಕಿಗೆ ಬಂದ ನಂತರ ಇದು ಎರಡನೇ ಎಡಿಜಿಪಿ ಸಭೆ ಆಗಿತ್ತು. ಸಭೆಯಲ್ಲಿ ಮೈಸೂರು ಸಿಟಿ ಪೊಲೀಸ್ ಕಮಿಷನರ್ ರಮೇಶ್ ಬಾನೋಟ್, ಮೈಸೂರು ಎಸ್ಪಿ ಸೀಮಾ ಲಟ್ಕರ್, ಮಂಡ್ಯ ಎಸ್ಪಿ ಯತೀಶ್, ರಾಮನಗರ ಎಸ್ಪಿ ಸಂತೋಷ್ ಬಾಬು ಹಾಗೂ ಇವರೊಂದಿಗೆ ಮೈಸೂರಿನ ಡಿಸಿಪಿಗಳೂ ಹಾಜರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications