ನೋಟು ಅಮಾನ್ಯೀಕರಣದಿಂದ ದಿವಾಳಿ: ದಯಾಮರಣಕ್ಕೆ ಅರ್ಜಿ
ಮೈಸೂರು, ಜೂನ್ 11: ನೋಟು ಅಮಾನ್ಯೀಕರಣದಿಂದ ದಿವಾಳಿತನವಾಗಿದೆ ಹಾಗೂ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್ ಮೈಸೂರು ಶಾಖೆಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿದ್ದೇವೆ ಎಂದು ಕುಟುಂಬವೊಂದು ದಯಾಮರಣಕ್ಕೆ ಅನುಮತಿ ನೀಡಬೇಕೆಂದು ಕೋರಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ. ಹುಣಸೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮದ ಶೇಖರ್ ಕುಟುಂಬವೇ ದಯಾಮರಣಕ್ಕೆ ಮನವಿ ಸಲ್ಲಿಸಿರುವುದು.
ಇದೇ ವೇಳೆ ಮಾತನಾಡಿದ ಶೇಖರ್, ನಾನು 26 ಚದರ ಅಡಿಗೆ ಎರಡು ಅಂತಸ್ತಿನ ವಾಣಿಜ್ಯ ಮಳಿಗೆ ನಿರ್ಮಿಸಲು ದಿವಾನ್ ಹೌಸಿಂಗ್ ಕಾರ್ಪೊರೇಷನ್ ಲಿಮಿಟ್ ಮೈಸೂರು ಶಾಖೆಯಲ್ಲಿ 22 ಲಕ್ಷ ರೂಪಾಯಿಗಳನ್ನು ಪಡೆದಿದ್ದೆ. ನಂತರ ಮಾನಸ ಹೋಂ ಪ್ರಾಡಕ್ಟ್ ಎಂಬ ಚಿಕ್ಕ ಸಂಸ್ಥೆಯೊಂದನ್ನು ರಿಜಿಸ್ಟರ್ ಮಾಡಿಸಿ ದಿನವೊಂದಕ್ಕೆ 10 ಸಾವಿರ ರೂಪಾಯಿ ವ್ಯಾಪಾರ ವಹಿವಾಟು ನಡೆಸುತ್ತಿದ್ದೆ. ಹೆಚ್ಚಿನ ಲಾಭವೂ ಬರುತ್ತಿತ್ತು. ಪ್ರತಿ ತಿಂಗಳಿಗೆ 3-4ಲಕ್ಷ ರೂ ನಾಲ್ಕು ವ್ಯವಹಾರವಿತ್ತು. 40 ಸಾವಿರ ರೂಪಾಯಿವರೆಗೂ ಲಾಭವಿತ್ತು. ಆದರೆ ನೋಟು ಅಮಾನ್ಯೀಕರಣದ ವೇಳೆ ವ್ಯವಹಾರ ಇಳಿಮುಖವಾಯಿತು. ಆರ್ಥಿಕ ಸಂಕಷ್ಟದಿಂದಾಗಿ 2017 ಆಗಸ್ಟ್ ನಿಂದ ಇಲ್ಲಿಯವರೆಗೆ ಬ್ಯಾಂಕಿನಲ್ಲಿ ಪಡೆದ ಸಾಲದ ಕಂತು ಜಮಾ ಮಾಡಲು ಸಾಧ್ಯವಾಗಿಲ್ಲ. ಈಗಲೂ ನಾವು ಪರೋಟಾ ವ್ಯಾಪಾರ ನಡೆಸುತ್ತಿದ್ದೇವೆ. ಈ ನಡುವೆ ಫೈನಾನ್ಸ್ ಕಾರ್ಪೊರೇಷನ್ ಸಿಬ್ಬಂದಿ ಮನೆಗೆ ಬಂದು ನನಗೆ ಹಾಗೂ ನನ್ನ ಪತ್ನಿಯನ್ನು ನಿಂದಿಸಿದ್ದಾರೆ. ನಿನ್ನನ್ನು ಜೈಲಿಗೆ ಕಳಿಸುತ್ತೇವೆ, ಮನೆಯನ್ನು ಹರಾಜು ಹಾಕಿ ಹಣವನ್ನು ಬ್ಯಾಂಕಿಗೆ ಜಮೆ ಮಾಡಿಕೊಳ್ಳುತ್ತೇವೆ ಎಂದು ಬೆದರಿಸುತ್ತಿರುವುದಾಗಿ ಆರೋಪಿಸಿದ್ದಾರೆ.
ಪೊಲೀಸರ ಮೂಲಕ ಕುಟುಂಬವನ್ನು ಅರೆಸ್ಟ್ ಮಾಡಿಸುತ್ತೇವೆ ಎಂದು ಗ್ರಾಮಸ್ಥರ ಸಮ್ಮುಖದಲ್ಲಿ ಬೆದರಿಕೆ ಹಾಕಿದ್ದಾರೆ. 1.70ಲಕ್ಷ ರೂಗಳನ್ನು ಬ್ಯಾಂಕಿಗೆ ಕಟ್ಟಲು ಹೋದಾಗ ಹಣವನ್ನು ಕಟ್ಟಿಸಿಕೊಳ್ಳದೆ ಬೈದು ಕಳುಹಿಸಿದ್ದಾರೆ. ಸಾಲ ತೀರಿಸಲು ಪ್ರಯತ್ನಿಸಿದರೂ ಅವಕಾಶವನ್ನೇ ನೀಡಲಿಲ್ಲ. ನಮಗೆ ಮನೆ ಬಿಟ್ಟು ಬೇರೆ ಯಾವುದೇ ಸ್ಥಿರಾಸ್ತಿ ಇಲ್ಲ ಎಂದು ನುಡಿದಿದ್ದಾರೆ.

ಇರುವ ಮನೆಯನ್ನು ಕಳೆದುಕೊಂಡು ಬೀದಿ ಪಾಲಾಗುವ ಭಯದಿಂದ ಹಾಗೂ ಅಪಮಾನವನ್ನು ತಾಳಲಾರದೇ ಕುಟುಂಬ ಸಮೇತ ಆತ್ಮಹತ್ಯೆಗೆ ನಾವು ತಯಾರಿದ್ದು, ದಯಾಮರಣಕ್ಕೆ ಅನುಮತಿ ನೀಡಬೇಕು, ಹಾಗೆಯೇ ಬ್ಯಾಂಕ್ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ನಮೂದಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications