ಸಾರಾ ಸಭಾಂಗಣ ಕುರಿತು ಸಮಗ್ರ ತನಿಖೆ ಮಾಡಿ ಎಂದ ರೋಹಿಣಿ ಸಿಂಧೂರಿ
ಮೈಸೂರು, ಜೂನ್ 10: "ಮೈಸೂರು ನಗರದ ವಿವಾದಿತ ಸ್ಥಳದಲ್ಲಿ ನಿರ್ಮಾಣವಾಗಿರುವ ಶಾಸಕ ಸಾ.ರಾ ಮಹೇಶ್ ಒಡೆತನದ ಕಲ್ಯಾಣ ಮಂಟಪಕ್ಕೆ ಸಂಬಂಧಿಸಿದಂತೆ 'ಸಮಗ್ರ ತನಿಖೆ' ನಡೆಸುವಂತೆ" ಪ್ರಾದೇಶಿಕ ಆಯುಕ್ತರಿಗೆ, ಮೈಸೂರಿನ ವರ್ಗಾಯಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.
ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ರೋಹಿಣಿ ಸಿಂಧೂರಿ, "ಕಲ್ಯಾಣ ಮಂಟಪಕ್ಕೆ ಸಂಬಂಧಿಸಿದಂತೆ ಅನೇಕ ಅಕ್ರಮಗಳಿವೆ. ಸರ್ವೆ ಸಂಖ್ಯೆ 123ರಲ್ಲಿ ಕಲ್ಯಾಣ ಮಂಟಪ ನಿರ್ಮಾಣವಾಗಿದೆ. ಆದರೆ, ಈ ಜಾಗ ಸರ್ಕಾರಿ ಗೋಮಾಳ ಭೂಮಿ. ಆದ್ದರಿಂದ ಅದು ಹೇಗೆ ಖಾಸಗಿಯಾಗುತ್ತದೆ" ಎಂದು ಪ್ರಶ್ನಿಸಿದ್ದಾರೆ.

"ಈ ಕುರಿತಾದ ಅನುದಾನದ ಸರಿಯಾದ ದಾಖಲೆಗಳು ಲಭ್ಯವಿಲ್ಲ. ಭೂ ಪರಿವರ್ತನೆಯನ್ನು ಸುಳ್ಳಿನಿಂದ ತೆಗೆದುಕೊಳ್ಳಲಾಗಿದೆ ಮತ್ತು ಮಾಸ್ಟರ್ ಪ್ಲ್ಯಾನ್ಗೆ ವಿರುದ್ಧವಾಗಿದೆ ಎಂದು ದೂರಿದ್ದಾರೆ. ವಿಚಾರಣೆಯು ಒಂದು ವಿಷಯಕ್ಕೆ (ರಾಜಕಾಲುವೆ) ಮಾತ್ರ ಆರಿಸುವುದು ಮತ್ತು ಆಯ್ಕೆ ಮಾಡಿರುವುದು. ಲಿಂಗಾಂಬುದಿ ಕೆರೆ ಸಮೀಪದ ಭೂಮಿಯ ಅತಿಕ್ರಮಣ ನಡೆದಿದೆ. ಇದನ್ನು ವಿಚಾರಣೆಗೆ ಒಳಪಡಿಸುವಂತೆ" ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕೋರಿದ್ದಾರೆ.
ಶಾಸಕ ಸಾ.ರಾ ಮಹೇಶ್ ಅವರ ಆಯ್ಕೆಯ ಪ್ರಕಾರ, ಕೇವಲ ಒಂದು ಆಯ್ದ ವಿಷಯಕ್ಕೆ ಮಾತ್ರ ವಿಚಾರಣೆ ನಡೆಸದೆ, ಎಲ್ಲಾ ಅಂಶಗಳ ಬಗ್ಗೆ ಸಮಗ್ರ ಮತ್ತು ಸರಿಯಾದ ವಿಚಾರಣೆ ನಡೆಸಿ ಎಂದು ಮನವಿ ಮಾಡಿದ್ದಾರೆ.

-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications