ಮೈಸೂರಿನಲ್ಲಿ ಸವರನ್ ಗೋಲ್ಡ್ ಬಾಂಡ್ ಯೋಜನೆ ಪ್ರಾರಂಭ
ಮೈಸೂರು,ಅಕ್ಟೋಬರ್.13: ಭಾರತೀಯ ಅಂಚೆ ಇಲಾಖೆ ವತಿಯಿಂದ 2020-2021 ಸಾಲಿನ ಸರಣಿ ಸವರನ್ ಗೋಲ್ಡ್ ಬಾಂಡ್ ಯೋಜನೆಯು ಇದೇ ಅಕ್ಟೋಬರ್ 12 ರಂದು ಪ್ರಾರಂಭವಾಗಿದ್ದು, ಗ್ರಾಹಕರು ಅಕ್ಟೋಬರ್ 16 ರೊಳಗೆ ಸಮೀಪದ ಅಂಚೆ ಕಚೇರಿಯ ಮೂಲಕ ಸವರನ್ ಗೋಲ್ಡ್ ಬಾಂಡ್ ಯೋಜನೆಯಲ್ಲಿ ಹೂಡಿಕೆ ಮಾಡಿಕೊಳ್ಳಬಹುದು.
ಒಂದು ಗ್ರಾಂ ಚಿನ್ನದ ದರವನ್ನು 5,051 ರೂ. ಗೆ ನಿಗದಿಪಡಿಸಲಾಗಿದೆ. ಕನಿಷ್ಠ ಹೂಡಿಕೆ ಒಂದು ಗ್ರಾಂ ಆಗಿದ್ದು, ವ್ಯಕ್ತಿಗಳಿಗೆ ಮತ್ತು ಹಿಂದೂ ಅವಿಭಕ್ತ ಕುಟುಂಬಗಳಿಗೆ 4 ಕೆ.ಜಿ ಹಾಗೂ ಟ್ರಸ್ಟ್ ಮತ್ತು ಇದೇ ರೀತಿಯ ಘಟಕಗಳಿಗೆ 20 ಕೆ.ಜಿ (ಒಂದು ಆರ್ಥಿಕ ವರ್ಷದಲ್ಲಿ) ಗರಿಷ್ಠ ಹೂಡಿಕೆಯಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಸಮೀಪದ ಅಂಚೆ ಕಚೇರಿಯನ್ನು ಸಂಪರ್ಕಿಸುವುದು ಅಥವಾ ದೂರವಾಣಿ ಸಂಖ್ಯೆ 0821-2417308,2017307, 9845107947 ಗೆ ಕರೆ ಮಾಡುವಂತೆ ಅಂಚೆ ಇಲಾಖೆಯ ಮೈಸೂರು ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ಷಿಕ ಶೇ.2.5 ರಷ್ಟು ನಿಶ್ಚಿತ ಬಡ್ಡಿ ಲಭ್ಯ
ಬಾಂಡ್ ಅವಧಿ 8 ವರ್ಷವಾಗಿದ್ದು, ಬಾಂಡ್ ಅವಧಿ ಮುಗಿದಾಗ ಮಾರುಕಟ್ಟೆಯಲ್ಲಿರುವ ಚಿನ್ನದ ದರ ಮೊತ್ತವನ್ನು ನೀಡಲಾಗುವುದು. ವಾರ್ಷಿಕ ಶೇ.2.5 ರಷ್ಟು ನಿಶ್ಚಿತ ಬಡ್ಡಿಯೂ ಲಭ್ಯವಿರುತ್ತದೆ. (ಅರ್ಧವಾರ್ಷಿಕ -ವರ್ಷಕ್ಕೆ ಎರಡು ಬಾರಿ) 5, 6, ಮತ್ತು 7ನೇ ವರ್ಷಗಳಲ್ಲಿಯೂ ಸಹ ನಿರ್ಗಮಿಸುವ ಅವಕಾಶವಿರುತ್ತದೆ. ಜೊತೆಗೆ ಸಾಲಗಳಿಗೆ ಮೇಲಾಧಾರವಾಗಿ ಉಪಯೋಗಿಸಬಹದು. ಈ ಬಾಂಡ್ಗಳನ್ನು ಮಾರಾಟ ಮಾಡಲು ಬಯಸಿದರೆ ನೀವು ಕನಿಷ್ಠ 5 ವರ್ಷಗಳವರೆಗೆ ಕಾಯಬೇಕಾಗುತ್ತದೆ

10 ಗ್ರಾಂಗೆ 51,170 ರೂ. ಎಂದು ನಿಗದಿಪಡಿಸಿದೆ
ಈ ಬಾಂಡ್ ಯೋಜನೆಯಲ್ಲಿ ಸರ್ಕಾರವು ಚಿನ್ನದ ಬೆಲೆಯನ್ನು ಪ್ರತಿ ಗ್ರಾಂಗೆ 5,117 ರೂ. ಅಂದರೆ 10 ಗ್ರಾಂಗೆ 51,170 ರೂ. ಎಂದು ನಿಗದಿಪಡಿಸಿದೆ. ಆದರೆ ನೀವು ಅದನ್ನು ಆನ್ಲೈನ್ನಲ್ಲಿ ಖರೀದಿಸಿದರೆ ಪ್ರತಿ ಗ್ರಾಂಗೆ 50 ರೂಪಾಯಿ ರಿಯಾಯಿತಿ ಸಿಗುತ್ತದೆ. ಈ ಹಿನ್ನೆಲೆಯಲ್ಲಿ ಆನ್ಲೈನ್ನಲ್ಲಿ ಚಿನ್ನದ ಬಾಂಡ್ಗಳನ್ನು ಖರೀದಿಸುವಾಗ 10 ಗ್ರಾಂ ಬೆಲೆ 50,670 ರೂ.

ಕನಿಷ್ಠ ಅನುಮತಿಸುವ ಹೂಡಿಕೆ 1 ಗ್ರಾಂ ಚಿನ್ನ
ಕನಿಷ್ಠ ಅನುಮತಿಸುವ ಹೂಡಿಕೆ 1 ಗ್ರಾಂ ಚಿನ್ನ. ಆರ್ಥಿಕ ವರ್ಷದಲ್ಲಿ ಅರ್ಹ ವ್ಯಕ್ತಿಗಳು ಮತ್ತು ಎಚ್ಯುಎಫ್ಗಳು ಕನಿಷ್ಠ ಒಂದು ಗ್ರಾಂ ಮತ್ತು ಗರಿಷ್ಠ ನಾಲ್ಕು ಕೆಜಿವರೆಗೆ ಚಿನ್ನವನ್ನು ಪಡೆಯಬಹುದು. ಟ್ರಸ್ಟ್ಗಳು ಮತ್ತು ಅಂತಹುದೇ ಘಟಕಗಳು ಹಣಕಾಸು ವರ್ಷದಲ್ಲಿ 20 ಕಿ.ಗ್ರಾಂ ವರೆಗೆ ಖರೀದಿಸಬಹುದು. ಯೋಜನೆಯ ಮುಕ್ತಾಯ ಅವಧಿ 8 ವರ್ಷಗಳು.
Recommended Video

ಅಂಚೆ ಕಚೇರಿಯಲ್ಲದೆ ಇತರೆಡೆಯೂ ಲಭ್ಯ
ನಿಗದಿತ ವಾಣಿಜ್ಯ ಬ್ಯಾಂಕುಗಳಿಂದ (ಸಣ್ಣ ಹಣಕಾಸು ಬ್ಯಾಂಕುಗಳು ಮತ್ತು ಪಾವತಿ ಬ್ಯಾಂಕುಗಳು) ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಚ್ಸಿಐಎಲ್), ಗೊತ್ತುಪಡಿಸಿದ ಅಂಚೆ ಕಚೇರಿಗಳು ಮತ್ತು ಷೇರು ವಿನಿಮಯ ಕೇಂದ್ರಗಳಿಂದ ಬಾಂಡ್ಗಳನ್ನು ಖರೀದಿಸಬಹುದು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications