ಸಲ್ಲದ ಆರೋಪಕ್ಕೆ ಬೆದರಿ ಹಿಂದೆ ಸರಿಯಲ್ಲ: ಹಿರೇಮಠ

ಮೈಸೂರು, ಜೂ. 13: ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ ತಮ್ಮ ಮೇಲೆ ಸಲ್ಲದ ಆರೋಪ ಮಾಡುತ್ತಿರುವವರನ್ನು ತರಾಟೆಗೆ ರತೆಗೆದುಕೊಂಡಿದ್ದಾರೆ. ವಿದೇಶದಿಂದ ಹಣ ತಂದು ಹಿರೇಮಠ ಐಷರಾಮಿ ಬದುಕು ನಡೆಸುತ್ತಿದ್ದಾರೆ ಎಂಬ ರಾಜ್ಯ ಸರ್ಕಾರದ ಸಚಿವರ ಆರೋಪಕ್ಕೆ ಮಾಹಿತಿ ಹಕ್ಕು ಹೋರಾಟಗಾರ ಖಾರವಾಗಿ ಉತ್ತರಿಸಿದ್ದಾರೆ.

ರಾಜ್ಯ ಸರ್ಕಾರ ಮತ್ತು ವಿವಿಧ ರಾಜಕಾರಣಿಗಳ ಹಗರಣಗಳನ್ನು ಬಯಲು ಮಾಡುತ್ತಿರುವುದರಿಂದ ನನ್ನ ತೇಯೋವಧೆ ಮಾಡಲು ಆರೋಪ ಮಾಡಲಾಗುತ್ತಿದೆ. ನಾನು ಸಮಾಜದ ಒಳಿತಿನ ಕೆಲಸಕ್ಕೆ ದೇಣಿಗೆ ಪಡೆಯುತ್ತಿದ್ದೇನೆ ವಿನಃ ಅದನ್ನು ನನ್ನ ಸ್ವಂತ ಬಳಕೆಗೆ ಉಪಯೋಗ ಮಾಡಿಕೊಳ್ಳುತ್ತಿಲ್ಲ ಎಂದು ಮೈಸೂರಿನ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು.[ಕೆಜೆ ಜಾರ್ಜ್ ವಿರುದ್ಧ ಹಿರೇಮಠ್ ಕೊಟ್ಟ ದಾಖಲೆಗಳೇನು?]

sr hiremath

ನಾನು 12ರಿಂದ 14 ವರ್ಷಗಳ ಕಾಲ ವಿದೇಶದಲ್ಲಿದ್ದೆ. ಹೀಗಾಗಿ ಅವರು ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಹಾಗಂತ ನಾನು ಆ ದುಡ್ಡಿನಲ್ಲಿ ಐಷಾರಾಮಿಯಾದ ಜೀವನ ಮಾಡುತ್ತಿಲ್ಲ. ಇನ್ನು ಆಟೋ, ರೈಲಿನಲ್ಲೇ ಓಡಾಡುತ್ತಿದ್ದೇನೆ ಎಂದು ಹೇಳಿದರು.[ಒನ್ಇಂಡಿಯಾಕ್ಕೆ ಹಿರೇಮಠ ನೀಡಿದ್ದ ಸಂದರ್ಶನದ ಪೂರ್ಣಪಾಠ]

ಭ್ರಷ್ಟರ ವಿರುದ್ಧ ಸಾರಿರುವ ಸಮರವನ್ನು ಯಾವ ಕಾರಣಕ್ಕೂ ಹಿಂದಕ್ಕೆ ಪಡೆಯುವುದಿಲ್ಲ. ನಮ್ಮ ಹೋರಾಟ ನ್ಯಾಉಸಮ್ಮತವಾಗಿದ್ದು ಇಂಥ ವಾಮಮಾರ್ಗ ಮತ್ತು ಒತ್ತಡಗಳಿಂದ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+