Suttur Jatra Mahotsava 2023 : ಜನವರಿ 18ರಿಂದ ಇತಿಹಾಸ ಪ್ರಸಿದ್ಧ ಸುತ್ತೂರು ಜಾತ್ರೆ: ಇಲ್ಲಿದೆ ಕಾರ್ಯಕ್ರಮಗಳ ಮಾಹಿತಿ
ಮೈಸೂರು ಜನವರಿ 16: ವರ್ಷಕ್ಕೊಮ್ಮೆ ಭಕ್ತರು ಕಾಯುವ ಸುತ್ತೂರು ಜಾತ್ರೆ ಜನವರಿ 18ರಿಂದ 23ರವರೆಗೆ 6 ದಿನಗಳ ಕಾಲ ಜರುಗಲಿದೆ. ಇದಕ್ಕಾಗಿ ಅಗತ್ಯ ಸಿದ್ಧತೆ ಭರದಿಂದ ಸಾಗುತ್ತಿದೆ.
ಜಾತ್ರಾ ಮಹೋತ್ಸವ ಜರುಗುವ 6 ದಿನಗಳ ಮಹಾ ದಾಸೋಹ ಅಂಗಳ ಸೇರಿದಂತೆ ಒಟ್ಟು 5 ಪ್ರದೇಶದಲ್ಲಿ ಪ್ರಸಾದ ವಿನಿಯೋಗ ನಡೆಯಲಿದೆ. ಮಹಾದಾಸೋಹ ಆವರಣದಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ಸರತಿ ಸಾಲಿನಲ್ಲಿ ತೆರಳಿ ಪ್ರಸಾದ ಸ್ವೀಕರಿಸಲು ಅನುಕೂಲ ಕಲ್ಪಿಸಲಾಗಿದೆ. ದಾಸೋಹ ಪ್ರಸಾದ ತಯಾರಿಗೆ 500 ಜನ ನುರಿತ ಬಾಣಸಿಗರ ತಂಡ ಸನ್ನದ್ಧವಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುತ್ತೂರು ಜಾತ್ರಾ ಮಹೋತ್ಸವದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್, ಜನವರಿ 19ರಂದು ಸಾಮೂಹಿಕ ವಿವಾಹ, ಹಾಲ್ಹರವಿ ಉತ್ಸವ, 20ರಂದು ರಥೋತ್ಸವ, 21ರಂದು ಶ್ರೀಮಹದೇಶ್ವರ ಕೊಂಡೋತ್ಸವ ಹಾಗೂ ಲಕ್ಷ ದೀಪೋತ್ಸವ, 22ರಂದು ತೆಪ್ಪೋತ್ಸವ ಹಾಗೂ ಕೊಂಡೋತ್ಸವ ಜೊತೆಗೆ ಇನ್ನಿತರ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳನ್ನು ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳು ಜರುಗಲಿವೆ ಎಂದರು.

ಜಾತ್ರೆಯ ಅಂಗವಾಗಿ ಜರುಗುವ 29ನೇ ವರ್ಷದ ರಾಜ್ಯಮಟ್ಟದ ಭಜನಾ ಮೇಳದಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳ 700ಕ್ಕೂ ಹೆಚ್ಚು ಪುರುಷ, ಮಹಿಳಾ ಮತ್ತು ಮಕ್ಕಳ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. 18ರಂದು ಭಜನಾಗೀತೆಗಳನ್ನು ಒಳಗೊಂಡಿರುವ 'ಭಜನಾಂಜಲಿ', 21ರ ಶನಿವಾರ ಸಿರಿಧಾನ್ಯಗಳ ಮಹತ್ವ ಸಾರುವ 'ಸಿರಿಧಾನ್ಯ ಐಸಿರಿ' ಕೃತಿಗಳು ಬಿಡುಗಡೆಯಾಗಲಿದೆ ಎಂದು ಹೇಳಿದರು.
6 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕಿರಣ, ಚಿತ್ರ ಬರೆಯುವ ಸ್ಪರ್ಧೆ, ಚಿತ್ರಸಂತೆ, ಸೋಬಾನೆ ಪದ, ರಂಗೋಲಿ, ಗಾಳಿಪಟ ಸ್ಪರ್ಧೆ, ಕುಸ್ತಿ ಪಂದ್ಯಾವಳಿ, ಕ್ಯಾನ್ಸರ್ ತಪಾಸಣಾ ಶಿಬಿರ, ಆರೋಗ್ಯ ತಪಾಸಣಾ ಶಿಬಿರ, ದೋಣಿವಿಹಾರ, ದೇಸೀ ಆಟಗಳ ಸ್ಪರ್ಧೆ, ಸಾಂಸ್ಕೃತಿಕ ಮೇಳ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, 6 ದಿನಗಳ ವರ್ಣರಂಜಿತ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications