Kuvempu Express: ತಾಳಗುಪ್ಪ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿಗೆ 'ಕುವೆಂಪು ಎಕ್ಸ್ಪ್ರೆಸ್' ಎಂದು ನಾಮಕರಣ
ಮೈಸೂರು ಅಕ್ಟೋಬರ್ 8: ಮೈಸೂರು - ಶಿವಮೊಗ್ಗ ನಡುವೆ ಸಂಚರಿಸುವ ತಾಳಗುಪ್ಪ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿಗೆ ಮಹಾಕವಿ ಕುವೆಂಪು ಅವರ ಹೆಸರು ಬದಲಾಯಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ರೈಲ್ವೆ ಸಚಿವರ ಜೊತೆ ಮಾತನಾಡಿ ತಾಳಗುಪ್ಪ ಇಂಟರ್ ಸಿಟಿ ಎಕ್ಸ್ಪ್ರೆಸ್ ರೈಲಿಗೆ ಮಹಾಕವಿ ಕುವೆಂಪು ಅವರ ಹೆಸರು ಬದಲಾಯಿಸಲು ಒಪ್ಪಿಗೆ ಪಡೆದಿದ್ದಾರೆ. ಹೀಗಾಗಿ ಮೈಸೂರು-ತಾಳಗುಪ್ಪ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿಗೆ ಕುವೆಂಪು ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಲಾಗಿದೆ.
ಫೆಬ್ರವರಿ ತಿಂಗಳಿನಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ, ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಬೇಕೆಂದು ದೆಹಲಿಯಲ್ಲಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದರು. ಈಗಾಗಲೆ ಸಾಕಷ್ಟು ಜನರು ರೈಲಿನ ಹೆಸರನ್ನು ಬದಲಾಯಿಸಲು ಒತ್ತಾಯ ಮಾಡಿದ್ದಾರೆ. ಏಕೆಂದರೆ ಮೈಸೂರಿಗೆ ರೈಲು ಸಂಪರ್ಕ ತರಬೇಕೆಂಬುದು ಮೈಸೂರಿನ ಒಡೆಯರ್ ವಂಶಸ್ಥರ ಕನಸಾಗಿತ್ತು. ಅದಕ್ಕಾಗಿ ಸಾಕಷ್ಟು ಶ್ರಮಿಸಿದ್ದರು. ಹಾಗಾಗಿ ಟಿಪ್ಪು ಎಕ್ಸ್ಪ್ರೆಸ್ ಹೆಸರಿನ ಬದಲು ಒಡೆಯರ್ ಎಕ್ಸ್ಪ್ರೆಸ್ ಎಂದು ಬದಲಾಯಿಸುತ್ತೇವೆ ಎಂದು ತಿಳಿಸಿದ್ದರು.
ಕೆಳಗೆ ವಿವರಿಸಿದಂತೆ 08.10.2022 ರಿಂದ ಜಾರಿಗೆ ಬರುವಂತೆ ಈ ಕೆಳಗಿನ ಎಕ್ಸ್ಪ್ರೆಸ್ ರೈಲುಗಳನ್ನು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ: -

1.ರೈಲು ಸಂಖ್ಯೆ 16221/16222 ತಾಳಗುಪ್ಪ - ಮೈಸೂರು - ತಾಳಗುಪ್ಪ ಎಕ್ಸ್ಪ್ರೆಸ್ ಅನ್ನು ಕುವೆಂಪು ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಲಾಗುತ್ತದೆ.
2. ರೈಲು ಸಂಖ್ಯೆ 12613/12614 ಮೈಸೂರು - ಕೆಎಸ್ಆರ್ ಬೆಂಗಳೂರು - ಮೈಸೂರು ಟಿಪ್ಪು ಎಕ್ಸ್ಪ್ರೆಸ್ ಅನ್ನು ಒಡೆಯರ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಲಾಗುತ್ತದೆ.
ಮೈಸೂರು - ಶಿವಮೊಗ್ಗ - ತಾಳಗುಪ್ಪ ಇಂಟರ್ ಸಿಟಿ ಎಕ್ಸ್ಪ್ರೆಸ್ ರೈಲಿಗೆ ನಮ್ಮ ಮಹಾಕವಿ ಕುವೆಂಪು ಅವರ ಹೆಸರಿಡುವಂತೆ ನನ್ನ ಗೆಳೆಯ ಮತ್ತು ಸಂಸದ @mepratap ಅವರಿಗೆ ಸಲಹೆ ನೀಡಿದ್ದೆ. ಅವರು ರೈಲ್ವೆ ಸಚಿವರ ಜೊತೆ ಮಾತನಾಡಿ ಕುವೆಂಪು ಅವರ ಹೆಸರಿಗೆ ಒಪ್ಪಿಗೆ ಕೊಡಿಸಿದ್ದಾರೆ. ಪ್ರತಾಪ್ ಸಿಂಹ ಅವರಿಗೆ ತುಂಬು ಹೃದಯದ ವಂದನೆಗಳು.
— DP SATISH (@dp_satish) October 7, 2022
ರೈಲ್ವೇ ಇಲಾಖೆ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿದ ಬೆನ್ನಲ್ಲೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮೂಲಕ ರೈಲ್ವೆ ಸಚಿವರಿಗೆ ಧನ್ಯವಾದ ತಿಳಿಸಿದ್ದಾರೆ. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು " ಒಡೆಯರ್ ಎಕ್ಸ್ಪ್ರೆಸ್" ನಿಮಗೆ ಸೇವೆ ನೀಡಲಿದೆ .ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್ '' ಆಗಲಿದೆ. ಥಾಂಕ್ಯೂ ಅಶ್ವಿನಿ ವೈಷ್ಣವ್ ಜಿ ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ ಸರ್" ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ. ಟಿಪ್ಪು ಹೆಸರಿನ ವಿರುದ್ಧ ಬಿಜೆಪಿ ಸಮರ ಸಾರುತ್ತಿರುವುದು ಇದೇ ಮೊದಲೇನಲ್ಲ, ಈಗಾಗಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆರಂಭಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸಿದೆ. ಜೊತೆಗೆ 7 ನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಠ್ಯವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ, ಆದರೆ 6 ಹಾಗೂ 10 ನೇ ತರಗತಿಯಲ್ಲಿ ಟಿಪ್ಪು ಪಠ್ಯವನ್ನು ಉಳಿಸಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications