ಮೆಲ್ಬರ್ನ್ ನಲ್ಲಿ ಅಪಘಾತ: ಕೋಮಾ ತಲುಪಿದ ಮೈಸೂರಿನ ನೇತ್ರಾ
ಮೈಸೂರು, ಜನವರಿ 24 : ಆಸ್ಟ್ರೇಲಿಯಾದ ಮೆಲ್ಬರ್ನಿನ ಸಾಫ್ಟ್ ವೇರ್ ಉದ್ಯೋಗಿ ಮೈಸೂರಿನ ಮೂಲದ ನೇತ್ರಾ ಕೃಷ್ಣಮೂರ್ತಿ ಈಚೆಗೆ ನಡೆದ ರಸ್ತೆ ಅಪಘಾತದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದು, ಕೋಮಾ ಸ್ಥಿತಿಗೆ ಜಾರಿದ್ದಾರೆ. ತನ್ನ ಎಂಟು ತಿಂಗಳ ಕಂದಮ್ಮ ತಾಯಿಯ ಮೃದುನುಡಿಯನ್ನು ಕೇಳದಾಗಿದೆ.
ಕಳೆದ ಶುಕ್ರವಾರ ಮೆಲ್ಬರ್ನ್ನಲ್ಲಿ ವ್ಯಕ್ತಿಯೊಬ್ಬನ ನಿರ್ಲಕ್ಷ್ಯದಿಂದ ವಾಹನ ಚಾಲಾಯಿಸಿದ್ದರ ಪರಿಣಾಮ ವಾಹನವು ಪಾದಚಾರಿಗಳ ಮೇಲೆ ಮೇಲೇರಗಿತ್ತು ಈ ಅಪಘಾತದಲ್ಲಿ ನೇತ್ರಾ ಅವರ ತಲೆಗೆ, ದೇಹದ ಇತರೆ ಭಾಗಗಳಾದ ಶ್ವಾಸಕೋಶ, ಮೂತ್ರಕೋಶ, ಪಕ್ಕೆಲುಬು ಹಾಗೂ ಇತರೆ ಭಾಗಗಳಿಗೆ ತೀವ್ರ ಗಂಭೀರ ಗಾಯಗಳಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪತಿ ಮೊಹನ್ ಕುಮಾರ್ ತಿಳಿಸಿದ್ದಾರೆ.[ಚಿತ್ರದುರ್ಗ : ಭೀಕರ ಅಪಘಾತ, 7 ವಿದ್ಯಾರ್ಥಿನಿಯರು ಸಾವು]

ನೇತ್ರಾ ಎಂಟು ತಿಂಗಳಿನಿಂದಷ್ಟೇ ತಾಯಿಯಾಗಿದ್ದಾರೆ. ಅವರು ಕಳೆದ ವಾರವಷ್ಟೇ ಹೆರಿಗೆ ರಜೆ ಮುಗಿಸಿ ಉದ್ಯೋಗಕ್ಕೆ ಮರಳಿದ್ದಾರೆ. ಶುಕ್ರವಾರ ಮಧ್ಯಾಹ್ನ ತನ್ನ ಪುಟ್ಟ ಕಂದನಿಗೆ ಹಾಲುಣ್ಣಿಸಿ ಕಚೇರಿಗೆ ತೆರಳುವ ಸಂದರ್ಭದಲ್ಲಿ ಈ ರಸ್ತೆ ಅಪಘಾತ ಸಂಭವಿಸಿದ್ದು, ಸದ್ಯ ತೀವ್ರಾ ನಿಗಾ ಘಟಕದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಈ ಅಪಘಾತದಲ್ಲಿ ಆಸ್ಟ್ರೇಲಿಯಾದ ಐವರು ದುರ್ಮರಣಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಬುದುಕಿ ಉಳಿದಿದ್ದು ನೇತ್ರ ಮಾತ್ರ. ಆದರೆ ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು ಕೋಮಾ ಹಂತ ತಲುಪಿರುವುದು ಪರಿವಾರಕ್ಕೆ ತೀವ್ರ ನೋವನ್ನು ಉಂಟು ಮಾಡಿದೆ.
ಕಲಬುರಗಿ ನೇತ್ರಾ ಅವರ ತವರು ಮನೆಯಾಗಿದ್ದು, ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಎಂಜಿನಿಯರ್ ಮೈಸೂರಿನಲ್ಲಿ ವ್ಯಾಸಂಗ ಮಾಡಿ ಉದ್ಯೋಗಕ್ಕಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications