ಮೆಲ್ಬರ್ನ್ ನಲ್ಲಿ ಅಪಘಾತ: ಕೋಮಾ ತಲುಪಿದ ಮೈಸೂರಿನ ನೇತ್ರಾ
ಮೈಸೂರು, ಜನವರಿ 24 : ಆಸ್ಟ್ರೇಲಿಯಾದ ಮೆಲ್ಬರ್ನಿನ ಸಾಫ್ಟ್ ವೇರ್ ಉದ್ಯೋಗಿ ಮೈಸೂರಿನ ಮೂಲದ ನೇತ್ರಾ ಕೃಷ್ಣಮೂರ್ತಿ ಈಚೆಗೆ ನಡೆದ ರಸ್ತೆ ಅಪಘಾತದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದು, ಕೋಮಾ ಸ್ಥಿತಿಗೆ ಜಾರಿದ್ದಾರೆ. ತನ್ನ ಎಂಟು ತಿಂಗಳ ಕಂದಮ್ಮ ತಾಯಿಯ ಮೃದುನುಡಿಯನ್ನು ಕೇಳದಾಗಿದೆ.
ಕಳೆದ ಶುಕ್ರವಾರ ಮೆಲ್ಬರ್ನ್ನಲ್ಲಿ ವ್ಯಕ್ತಿಯೊಬ್ಬನ ನಿರ್ಲಕ್ಷ್ಯದಿಂದ ವಾಹನ ಚಾಲಾಯಿಸಿದ್ದರ ಪರಿಣಾಮ ವಾಹನವು ಪಾದಚಾರಿಗಳ ಮೇಲೆ ಮೇಲೇರಗಿತ್ತು ಈ ಅಪಘಾತದಲ್ಲಿ ನೇತ್ರಾ ಅವರ ತಲೆಗೆ, ದೇಹದ ಇತರೆ ಭಾಗಗಳಾದ ಶ್ವಾಸಕೋಶ, ಮೂತ್ರಕೋಶ, ಪಕ್ಕೆಲುಬು ಹಾಗೂ ಇತರೆ ಭಾಗಗಳಿಗೆ ತೀವ್ರ ಗಂಭೀರ ಗಾಯಗಳಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪತಿ ಮೊಹನ್ ಕುಮಾರ್ ತಿಳಿಸಿದ್ದಾರೆ.[ಚಿತ್ರದುರ್ಗ : ಭೀಕರ ಅಪಘಾತ, 7 ವಿದ್ಯಾರ್ಥಿನಿಯರು ಸಾವು]

ನೇತ್ರಾ ಎಂಟು ತಿಂಗಳಿನಿಂದಷ್ಟೇ ತಾಯಿಯಾಗಿದ್ದಾರೆ. ಅವರು ಕಳೆದ ವಾರವಷ್ಟೇ ಹೆರಿಗೆ ರಜೆ ಮುಗಿಸಿ ಉದ್ಯೋಗಕ್ಕೆ ಮರಳಿದ್ದಾರೆ. ಶುಕ್ರವಾರ ಮಧ್ಯಾಹ್ನ ತನ್ನ ಪುಟ್ಟ ಕಂದನಿಗೆ ಹಾಲುಣ್ಣಿಸಿ ಕಚೇರಿಗೆ ತೆರಳುವ ಸಂದರ್ಭದಲ್ಲಿ ಈ ರಸ್ತೆ ಅಪಘಾತ ಸಂಭವಿಸಿದ್ದು, ಸದ್ಯ ತೀವ್ರಾ ನಿಗಾ ಘಟಕದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಈ ಅಪಘಾತದಲ್ಲಿ ಆಸ್ಟ್ರೇಲಿಯಾದ ಐವರು ದುರ್ಮರಣಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಬುದುಕಿ ಉಳಿದಿದ್ದು ನೇತ್ರ ಮಾತ್ರ. ಆದರೆ ಆಕೆಯ ಸ್ಥಿತಿ ಚಿಂತಾಜನಕವಾಗಿದ್ದು ಕೋಮಾ ಹಂತ ತಲುಪಿರುವುದು ಪರಿವಾರಕ್ಕೆ ತೀವ್ರ ನೋವನ್ನು ಉಂಟು ಮಾಡಿದೆ.
ಕಲಬುರಗಿ ನೇತ್ರಾ ಅವರ ತವರು ಮನೆಯಾಗಿದ್ದು, ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಎಂಜಿನಿಯರ್ ಮೈಸೂರಿನಲ್ಲಿ ವ್ಯಾಸಂಗ ಮಾಡಿ ಉದ್ಯೋಗಕ್ಕಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications