Mysuru: ಕುಕ್ಕರಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ
ಮೈಸೂರು: ಸೃಜನಶೀಲರಿಗೆ ಸ್ಫೂರ್ತಿಯ ಸೆಲೆ ಎಂದೇ ಹೆಸರಾದ ಮಾನಸಗಂಗೋತ್ರಿಯ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಹೆಚ್ಚಾಗಿ ಹರಿದ ಪರಿಣಾಮ ನೂರಾರು ಮೀನುಗಳು ಮೃತಪಟ್ಟಿವೆ.
ಕೆರೆಯ ಸುತ್ತ ವಾಯುವಿಹಾರಕ್ಕೆ ತೆರಳಿದವರಿಗೆ ಕೆರೆ ದಂಡೆಯಲ್ಲಿ ಮೀನುಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ. ವಿಷದ ಹೊಂಡವಾಗುತ್ತಿರುವ ಕುಕ್ಕರಹಳ್ಳಿಕೆರೆ ಬಗ್ಗೆ ಅಧ್ಯಯನ ನಡೆಸಿ ಕೆರೆಯನ್ನು ಸಂರಕ್ಷಿಸಲು ಕ್ರಮ ಕೈಗೊಳ್ಳಬೇಕೆಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ.

ಭಾನುವಾರ ಕೆರೆ ಆವರಣಕ್ಕೆ ಬಂದ ವಾಯುವಿಹಾರಿಗಳು, ಕೆರೆ ನೀರಿನಲ್ಲಿ ತೇಲುತ್ತಿದ್ದ ಮೀನುಗಳನ್ನು ಗಮನಿಸಿ ಮೈಸೂರು ವಿವಿ ತೋಟಗಾರಿಕಾ ವಿಭಾಗದ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ತೋಟಗಾರಿಕಾ ಅಧಿಕಾರಿಗಳು ಹಾಗೂ ಸಿಬ್ಬಂದಿ, ಮೀನುಗಾರರ ನೆರವಿನಿಂದ ಮೃತಪಟ್ಟ ಮೀನುಗಳನ್ನು ತೆರವುಗೊಳಿಸಿದ್ದಾರೆ.
''ಮೈಸೂರು ವಿಶ್ವವಿದ್ಯಾಲಯ ಸೆನೆಟ್ ಹಾಲ್ ಮುಂಭಾಗದ ಚರಂಡಿಯಿಂದಲೂ ವಿದ್ಯಾರ್ಥಿನಿಲಯದ ಒಳಚರಂಡಿ ನೀರು, ಪ್ಲಾಸ್ಟಿಕ್ ಪೇಪರ್ ಸೇರಿದಂತೆ ತ್ಯಾಜ್ಯಗಳು ಕೆರೆಗೆ ಸೇರುತ್ತಿರುವುದು ಸಮಸ್ಯೆ ಬಿಗಡಾಯಿಸಲು ಕಾರಣವಾಗಿದೆ. ಇದು ಇದೇ ಮೊದಲೇನು ಅಲ್ಲ. ಪದೇ ಪದೇ ರೀತಿ ಆಗುತ್ತಿದೆ. ಕೂಡಲೇ 300 ಮೀಮೀ ಒಳಚರಂಡಿ ಪೈಪ್ ಅಳವಡಿಸಬೇಕು,'' ಎಂದು ಪರಿಸರಪ್ರೇಮಿಗಳು ಆಗ್ರಹಿಸಿದ್ದಾರೆ.
ಹೆಚ್ಚಾದ ತಾಪಮಾನ
ಕುಕ್ಕರಹಳ್ಳಿ ಕೆರೆಯ ಮೈಸೂರು-ಹುಣಸೂರು ರಸ್ತೆಯ ಭಾಗದಿಂದಲೂ ಕೊಳಚೆ ನೀರು ಕೆರೆಗೆ ಹರಿಯುತ್ತಿದೆ. ದಿನೇದಿನೇ ಈ ರೀತಿ ಕೊಳಚೆ ನೀರು ಸೇರುತ್ತಿರುವುದರಿಂದಲೇ ಕೆರೆಯ ನೀರಿನಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ಕೆರೆಗೆ ಶುದ್ಧ ನೀರು ಸೇರುವಂತೆ ಮಾಡಬೇಕು ಎಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ.
ಈ ಬಾರಿ ಬಿಸಿಲಿನ ತೀವ್ರತೆ ಹೆಚ್ಚಿದೆ. ಹೀಗಾಗಿ ಕೆರೆಯ ವಾತಾವರಣದಲ್ಲಿ ನೀರು ಬಿಸಿಯಾಗುತ್ತಿದೆ. ಪ್ರತಿ ಬೇಸಿಗೆ ಕಾಲದಲ್ಲಿ ಬಿಸಿಲಿನ ಝಳದಿಂದ ಮೀನುಗಳು ಸಾಯುತ್ತವೆ. ಈಗಾಗಲೇ ತಜ್ಞರನ್ನು ಕರೆಸಿ ತಪಾಸಣೆ ಮಾಡಿಸಲಾಗಿದೆ. ಮೀನುಗಳ ಸಾವಿಗೆ ಕಾರಣಗಳೇನು? ಎಂಬುದನ್ನು ತಿಳಿದುಕೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮೈಸೂರು ವಿವಿ ತೀರ್ಮಾನಿಸಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications