ಮೈಸೂರಿನಲ್ಲಿ ಟ್ರಾಫಿಕ್ ನಿವಾರಣೆಗೆ ಸಚಿವರ ಹೊಸ ಸೂತ್ರ: ಇಲ್ಲಿದೆ ವಿವರ
ಮೈಸೂರು, ನವೆಂಬರ್ 06: ಮೈಸೂರು ನಗರವು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ನಗರದ ಹೊರ ವರ್ತುಲದಲ್ಲಿ ಪೆರಿಪೆರಲ್ ರಿಂಗ್ ರೋಡ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದರು.
ಇಂದು ನಗರದ ಸರಕಾರಿ ಅತಿಥಿ ಗೃಹದಲ್ಲಿ ಮೈಸೂರು ನಗರಾಭಿವದ್ಧಿ ಪ್ರಾಧಿಕಾರದ ವತಿಯಿಂದ ನಗರದ ಹೊರ ವರ್ತುಲ ರಸ್ತೆ ನಿರ್ಮಿಸುವ ಹಾಗೂ ಮೈಸೂರು- ಬೆಂಗಳೂರು ರಸ್ತೆಯ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ಫ್ಲೈ ಓವರ್ ನಿರ್ಮಿಸುವ ಕುರಿತ ವಿಸ್ಕೃತ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಮೈಸೂರು ಹೈವೇನ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ ಅವರಿಂದ ಪ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದ್ದು, ನಿರ್ಮಾಣ ಕಾಮಗಾರಿಯು ವೈಜ್ಞಾನಿಕವಾಗಿ ನಿರ್ಮಾಣವಾಗಬೇಕು. ಮೈಸೂರು ನಗರವು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪೇರಿಪರಲ್ ರಿಂಗ್ ರೋಡ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಪೆರಿಪರಲ್ ರಿಂಗ್ ರೋಡ್ಗೆ ಭೂಮಿ ನೀಡಿದವರಿಗೆ ಆ ಜಾಗದ ಬೆಲೆಯ ಹಣ ಅಥವಾ ಬೇರೆ ಭೂಮಿಯನ್ನು ನೀಡಲು ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಮಾತನಾಡಿ, ಬೆಂಗಳೂರು- ಮೈಸೂರು ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆಯನ್ನು ಸರ್ವೇ ಮೂಲಕ ಗುರುತಿಸಿಕೊಳ್ಳಿ, ಇದರಲ್ಲಿ ಬೆಂಗಳೂರು ಕಡೆಯಿಂದ ಬಂದು ಟಿ.ನರಸೀಪುರ, ಹುಣಸೂರು, ನಂಜನಗೂಡು ಕಡೆಗೆ ಹೋಗುವ ವಾಹನಗಳ ಸಂಖ್ಯೆ ತಿಳಿದರೆ ರಸ್ತೆ ಸೌಲಭ್ಯ, ಸರ್ವಿಸ್ ರಸ್ತೆ ಕಲ್ಪಿಸಲು ಅನುಕೂಲವಾಗುತ್ತದೆ.

ಮೈಸೂರು ಜಿಲ್ಲೆಯು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆಯಾಗಿದೆ. ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ನಿರ್ಮಾಣವಾಗುವ ರಸ್ತೆಗಳು, ಫ್ಲೈ ಓವರ್ಗಳು ಮುಂದಿನ 20 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿ ಇಟ್ಟುಕೊಂಡು ಮಾಡಬೇಕು. ಗುಜರಾತ್, ಮಹಾರಾಷ್ಟ್ರದ ಅಧಿಕಾರಿಗಳು ಮೈಸೂರಿನ ಇನ್ಫ್ರಾಸ್ಟ್ರರ್ಕ್ ಅನ್ನು ಅಧ್ಯಯನ ಮಾಡಲು ಜಿಲ್ಲೆಗೆ ಭೇಟಿ ನೀಡಿ ಇದನ್ನು ತಮ್ಮ ರಾಜ್ಯಗಳಲ್ಲಿ ಅಳವಡಿಸಿಕೊಳ್ಳಲು ವರದಿ ತಯಾರಿಸಿಕೊಳ್ಳುತ್ತಾರೆ. ನಗರದಲ್ಲಿ ಅಗತ್ಯ ಇರುವೆಡೆ ಸ್ಕೈ ವಾಕ್ ಗಳನ್ನು ನಿರ್ಮಿಸಲು ಯೋಜನೆ ತಯಾರಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಕೆ. ಹರೀಶ್ ಗೌಡ, ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್. ಅಜಯ್ ನಾಗಭೂಷಣ್, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications