ಮೈಸೂರು ಗ್ಯಾಸ್ ಸೋರಿಕೆ ದುರಂತ: ಒಂದೇ ಕುಟುಂಬದ ನಾಲ್ವರು ಸಾವು; ₹3 ಲಕ್ಷ ಪರಿಹಾರ ಘೋಷಣೆ
ಮೈಸೂರು: ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಕಲುಷಿತ ನೀರು ಕುಡಿದು ಯುವಕನೊಬ್ಬ ಮೃತಪಟ್ಟ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಗ್ಯಾಸ್ ಸೋರಿಕೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಮೈಸೂರಿನ ಯರಗನಹಳ್ಳಿಯ ನಿವಾಸಿ ಕುಮಾರಸ್ವಾಮಿ (45), ಅವರ ಪತ್ನಿ ಮಂಜುಳ (39), ಮಕ್ಕಳಾದ ಅರ್ಚನಾ (19), ಸ್ವಾತಿ (17) ಮೃತರು. ಚಿಕ್ಕಮಗಳೂರಿನ ಕುಮಾರಸ್ವಾಮಿ ಕಳೆದ ಮೂವತ್ತು ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದು, ಗ್ಯಾಸ್ ಬಳಸಿ ಲಾಂಡ್ರಿಯಲ್ಲಿ ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ದುರಂತ ಘಟನೆ
ಕುಮಾರಸ್ವಾಮಿ ಕುಟುಂಬದವರು ಇತ್ತೀಚಿಗೆ ಚಿಕ್ಕಮಗಳೂರಿಗೆ ತೆರಳಿ ಭಾನುವಾರ ಹಿಂದಿರುಗಿದ್ದರು. ಆದರೆ, ಮಂಗಳವಾರ ನೆರೆಹೊರೆಯವರ ಕಣ್ಣಿಗೆ ಕಾಣಿಸಿಕೊಂಡಿರಲಿಲ್ಲ. ಸಂಬಂಧಿಕರು ಕರೆ ಮಾಡಿದರೂ ಯಾರೂ ಸ್ವೀಕರಿಸಿರಲಿಲ್ಲ. ಅನುಮಾನಗೊಂಡ ಸಂಬಂಧಿಕರು ಮನೆಗೆ ಬಂದು ಕಿಟಕಿಯಲ್ಲಿ ನೋಡಿದಾಗ ನಾಲ್ವರು ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ಅನಿಲ ಸೋರಿಕೆಯಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ರಮೇಶ್ ಅವರು, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಸಿಬ್ಬಂದಿ, ಎಫ್ಎಸ್ಐಎಲ್ ತಂಡ ಬಂದು ಪರಿಶೀಲನೆ ನಡೆಸಿದ್ದಾರೆ.
ಮನೆಯಲ್ಲಿ ಮೂರು ಸಿಲಿಂಡರ್ ಇದ್ದು, ಒಂದು ಸಿಲಿಂಡರ್ನಲ್ಲಿ ಗ್ಯಾಸ್ ಲೀಕ್ ಆಗಿತ್ತು. ನಾಲ್ವರ ಮೃತದೇಹಗಳನ್ನೂ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದರು.
ಮೃತ ಕುಮಾರ ಸ್ವಾಮಿ ಅವರ ಸೋದರಿ ಮಂಜುಳಾ ನೀಡಿದ ದೂರಿನ ಮೇರೆಗೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರಲ್ಲದೇ ಸರಕಾರದಿಂದ ತಲಾ ಮೂರು ಲಕ್ಷ ರೂಪಾಯಿ ಪರಿಹಾರ ಧನ ನೀಡುವುದಾಗಿ ಘೋಷಿಸಿದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ












Click it and Unblock the Notifications