Mysuru Riots: ಅಘೋಷಿತ ಬಂದ್ ವಾತಾವರಣ: ಸರ್ಕಾರದ ವಿರುದ್ಧ ಸಂಸದ ಕೆಂಡ
ಬೆಂಗಳೂರು, ಫೆಬ್ರವರಿ 11: ಮೈಸೂರಿನಲ್ಲಿ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೊಮವಾರ (ಫೆಬ್ರವರಿ 10) ರಂದು ರಾತ್ರಿ ನಡೆದ ಗಲಾಟೆಗೆ ಅಪ್ಡೇಟ್ ಸಿಕ್ಕಿದೆ. ಠಾಣೆ ಬಳಿಕ ನಡೆದ ಹೈಡ್ರಾಮಾ, ಗಲಾಟೆ ವೇಳೆ ಕಿಡಿಗೇಡಿಗಳ ಗುಂಪನಿಂದ 14 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಅಷ್ಟೇ ಅಲ್ಲದೇ ಪೊಲೀಸರ ಸುಮಾರು 10 ವಾಹನಗಳಿಗೆ ಹಾನಿ ಉಂಟಾಗಿದೆ. ಇದಕ್ಕೆಲ್ಲವು ಸರ್ಕಾರದ ತುಷ್ಠೀಕರಣ ಕಾರಣವೆಂದು ಬಿಜೆಪಿ ಸಂಸದ ಪಿಸಿ ಮೋಹನ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮುಸ್ಲಿಂ ಸಹೋದರರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕೀಯವು ಈ ಕಾನೂನು ಬಾಹಿರತೆಯನ್ನು ನೇರವಾಗಿ ಉತ್ತೇಜಿಸುತ್ತದೆ. ಕಾನೂನು ಉಲ್ಲಂಘಿಸುವವರನ್ನು ಪ್ರೋತ್ಸಾಹಿಸುತ್ತಿದೆ. ಕಾನೂನು ಜಾರಿಯನ್ನು ದುರ್ಬಲಗೊಳಿಸುತ್ತದೆ. ಕರ್ನಾಟಕಕ್ಕೆ ಉತ್ತಮ ನಾಯಕತ್ವ ಬೇಕಿದೆ ಎಂದು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ಕಿಡಿ ಕಾರಿದ್ದಾರೆ.

ಮೈಸೂರು ಜನತೆಯನ್ನೂ ಈ ಘಟನೆ ಬೆಚ್ಚಿ ಬೀಳಿಸಿದೆ. ಕಾಂಗ್ರೆಸ್ ತುಷ್ಠೀಕರಣ ರಾಜಕೀಯದಿಂದ ಕೆಲವರಿಗೆ ಉತ್ತೇಜನ ಸಿಕ್ಕಂತಾಗುತ್ತಿದೆ ಎಂದು ಹಿಂದಿನಿಂದಲೂ ಬಿಜೆಪಿ ಹೇಳುತ್ತಿತ್ತು. ಇದೀಗ ಅಂಥದ್ದೇ ಆರೋಪಗಳನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಎದುರಿಸುತ್ತಿದೆ.
ಉದಯಗಿರಿ ಠಾಣೆಗೆ RTO ಅಧಿಕಾರಿಗಳು
ತಡರಾತ್ರಿ ನಡೆದ ಗಲಾಟೆಯಿಂದ ಅನೇಕ ವಾಹನಗಳಿಗೆ ಹಾನಿ ಆಗಿಯವೆ. ಈ ಡ್ಯಾಮೇಜ್ ಆದ ವಾಹನ ಮಹಜರು ಮಾಡಲು ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿಗಳು ಇಂದು ಮಂಗಳವಾರ ಮಧ್ಯಾಹ್ನ ಉದಯಗಿರಿ ಠಾಣೆಗೆ ಆಗಮಿಸಿದ್ದಾರೆ. ವಾಹನಗಳ ಮಹಜರು ಮಾಡಿ ಆಗ ಹಾನಿ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ.
ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ಅಘೋಷಿತ ಬಂದ್
ಗಲಾಟೆ ಬಳಿಕ ಠಾಣೆ ವ್ಯಾಪ್ತಿಯಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಮಾಡಲಾಗುತ್ತಿದೆ. ಸ್ಥಳದಲ್ಲಿ ಪೊಲೀಸರ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ರಸ್ತೆಯಲ್ಲಿ ಯಾರು ಓಡಾಡದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ. ಸ್ಥಳವು ಉದ್ವಿಘ್ನಗೊಂಡು ತಣ್ಣಗಾದ ಹಿನ್ನೆಲೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತದಿದೆ. ಹೀಗಾಗಿ ಮತ್ತಾವುದೇ ಅಹಿಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
ಘಟನೆ ಹಿನ್ನೆಲೆ, ಆಗಿದ್ದೇನು
ಇತ್ತೀಚೆಗೆ ದಹೆಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸೋತಿದ್ದು, ಬಿಜೆಪಿಗೆ ಬಹುಮತ ಬಂದಿದೆ. ಈ ಕಾರಣಕ್ಕೆ ಯುವಕನೊಬ್ಬ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಮತ್ತು ಅಖಿಲೇಶ್ ಯಾದವ್ ಅವರ ಭಾವಚಿತ್ರ ಹಾಕಿ ಪೋಸ್ಟ್ ಮಾಡಿದ್ದಾನೆ. 3ಈಡಿಯಟ್ಸ್ ಅಂತಲೂ ಬರೆದುಕೊಂಡು ಪೋಸ್ಟ್ ಶೇರ್ ಮಾಡಿಕೊಂಡಿದ್ದಾನೆ. ಈ ಘಟನೆ ಸಂಬಂಧ ನಡೆದ ಮಾತುಕತೆ ಉದ್ವಿಘ್ನ ಸ್ಥಿತಿ ತಲುಪಿತು.
ಪೋಸ್ಟ್ ಹಾಕಿದ ಕಲ್ಯಾಣ ನಗರದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಬಂಧಿಸಿದ್ದೇವೆ ಎಂದು ಹೇಳಿದರೂ ಕೇಳದ ಮುಸ್ಲಿಂ ಯುವಕರ ಗುಂಪು ಚೀಲದಲ್ಲಿ ತಂದಿದ್ದ ಕಲ್ಲನ್ನು ಪೊಲೀಸರತ್ತ ಎಸೆದಿದ್ದಾರೆ. ಸ್ಥಳಕ್ಕೆ ಬಂದ ಡಿಸಿಪಿ ಕಾರಿನ ಮೇಲೂ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರು ಎಷ್ಟೇ ಹರಸಾಹಸ ಪಟ್ಟರು ನಿಯಂತ್ರಸಲು ಆಗದೇ ಹೈಡ್ರಾಮಾವೇ ನಡೆದಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications