Mysuru Riots: ಅಘೋಷಿತ ಬಂದ್ ವಾತಾವರಣ: ಸರ್ಕಾರದ ವಿರುದ್ಧ ಸಂಸದ ಕೆಂಡ
ಬೆಂಗಳೂರು, ಫೆಬ್ರವರಿ 11: ಮೈಸೂರಿನಲ್ಲಿ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೊಮವಾರ (ಫೆಬ್ರವರಿ 10) ರಂದು ರಾತ್ರಿ ನಡೆದ ಗಲಾಟೆಗೆ ಅಪ್ಡೇಟ್ ಸಿಕ್ಕಿದೆ. ಠಾಣೆ ಬಳಿಕ ನಡೆದ ಹೈಡ್ರಾಮಾ, ಗಲಾಟೆ ವೇಳೆ ಕಿಡಿಗೇಡಿಗಳ ಗುಂಪನಿಂದ 14 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಅಷ್ಟೇ ಅಲ್ಲದೇ ಪೊಲೀಸರ ಸುಮಾರು 10 ವಾಹನಗಳಿಗೆ ಹಾನಿ ಉಂಟಾಗಿದೆ. ಇದಕ್ಕೆಲ್ಲವು ಸರ್ಕಾರದ ತುಷ್ಠೀಕರಣ ಕಾರಣವೆಂದು ಬಿಜೆಪಿ ಸಂಸದ ಪಿಸಿ ಮೋಹನ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮುಸ್ಲಿಂ ಸಹೋದರರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕೀಯವು ಈ ಕಾನೂನು ಬಾಹಿರತೆಯನ್ನು ನೇರವಾಗಿ ಉತ್ತೇಜಿಸುತ್ತದೆ. ಕಾನೂನು ಉಲ್ಲಂಘಿಸುವವರನ್ನು ಪ್ರೋತ್ಸಾಹಿಸುತ್ತಿದೆ. ಕಾನೂನು ಜಾರಿಯನ್ನು ದುರ್ಬಲಗೊಳಿಸುತ್ತದೆ. ಕರ್ನಾಟಕಕ್ಕೆ ಉತ್ತಮ ನಾಯಕತ್ವ ಬೇಕಿದೆ ಎಂದು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ಕಿಡಿ ಕಾರಿದ್ದಾರೆ.

ಮೈಸೂರು ಜನತೆಯನ್ನೂ ಈ ಘಟನೆ ಬೆಚ್ಚಿ ಬೀಳಿಸಿದೆ. ಕಾಂಗ್ರೆಸ್ ತುಷ್ಠೀಕರಣ ರಾಜಕೀಯದಿಂದ ಕೆಲವರಿಗೆ ಉತ್ತೇಜನ ಸಿಕ್ಕಂತಾಗುತ್ತಿದೆ ಎಂದು ಹಿಂದಿನಿಂದಲೂ ಬಿಜೆಪಿ ಹೇಳುತ್ತಿತ್ತು. ಇದೀಗ ಅಂಥದ್ದೇ ಆರೋಪಗಳನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಎದುರಿಸುತ್ತಿದೆ.
ಉದಯಗಿರಿ ಠಾಣೆಗೆ RTO ಅಧಿಕಾರಿಗಳು
ತಡರಾತ್ರಿ ನಡೆದ ಗಲಾಟೆಯಿಂದ ಅನೇಕ ವಾಹನಗಳಿಗೆ ಹಾನಿ ಆಗಿಯವೆ. ಈ ಡ್ಯಾಮೇಜ್ ಆದ ವಾಹನ ಮಹಜರು ಮಾಡಲು ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿಗಳು ಇಂದು ಮಂಗಳವಾರ ಮಧ್ಯಾಹ್ನ ಉದಯಗಿರಿ ಠಾಣೆಗೆ ಆಗಮಿಸಿದ್ದಾರೆ. ವಾಹನಗಳ ಮಹಜರು ಮಾಡಿ ಆಗ ಹಾನಿ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ.
ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ಅಘೋಷಿತ ಬಂದ್
ಗಲಾಟೆ ಬಳಿಕ ಠಾಣೆ ವ್ಯಾಪ್ತಿಯಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಮಾಡಲಾಗುತ್ತಿದೆ. ಸ್ಥಳದಲ್ಲಿ ಪೊಲೀಸರ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ. ರಸ್ತೆಯಲ್ಲಿ ಯಾರು ಓಡಾಡದಂತೆ ಪೊಲೀಸರು ಕ್ರಮ ಜರುಗಿಸಿದ್ದಾರೆ. ಸ್ಥಳವು ಉದ್ವಿಘ್ನಗೊಂಡು ತಣ್ಣಗಾದ ಹಿನ್ನೆಲೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತದಿದೆ. ಹೀಗಾಗಿ ಮತ್ತಾವುದೇ ಅಹಿಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
ಘಟನೆ ಹಿನ್ನೆಲೆ, ಆಗಿದ್ದೇನು
ಇತ್ತೀಚೆಗೆ ದಹೆಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸೋತಿದ್ದು, ಬಿಜೆಪಿಗೆ ಬಹುಮತ ಬಂದಿದೆ. ಈ ಕಾರಣಕ್ಕೆ ಯುವಕನೊಬ್ಬ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಮತ್ತು ಅಖಿಲೇಶ್ ಯಾದವ್ ಅವರ ಭಾವಚಿತ್ರ ಹಾಕಿ ಪೋಸ್ಟ್ ಮಾಡಿದ್ದಾನೆ. 3ಈಡಿಯಟ್ಸ್ ಅಂತಲೂ ಬರೆದುಕೊಂಡು ಪೋಸ್ಟ್ ಶೇರ್ ಮಾಡಿಕೊಂಡಿದ್ದಾನೆ. ಈ ಘಟನೆ ಸಂಬಂಧ ನಡೆದ ಮಾತುಕತೆ ಉದ್ವಿಘ್ನ ಸ್ಥಿತಿ ತಲುಪಿತು.
ಪೋಸ್ಟ್ ಹಾಕಿದ ಕಲ್ಯಾಣ ನಗರದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಬಂಧಿಸಿದ್ದೇವೆ ಎಂದು ಹೇಳಿದರೂ ಕೇಳದ ಮುಸ್ಲಿಂ ಯುವಕರ ಗುಂಪು ಚೀಲದಲ್ಲಿ ತಂದಿದ್ದ ಕಲ್ಲನ್ನು ಪೊಲೀಸರತ್ತ ಎಸೆದಿದ್ದಾರೆ. ಸ್ಥಳಕ್ಕೆ ಬಂದ ಡಿಸಿಪಿ ಕಾರಿನ ಮೇಲೂ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರು ಎಷ್ಟೇ ಹರಸಾಹಸ ಪಟ್ಟರು ನಿಯಂತ್ರಸಲು ಆಗದೇ ಹೈಡ್ರಾಮಾವೇ ನಡೆದಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications