ಮೈಸೂರು ವಿವಿಯಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಶುಲ್ಕ ಕಡಿತ
ಮೈಸೂರು, ಮೇ 13: ಮೈಸೂರು ವಿಶ್ವವಿದ್ಯಾಲಯ ವಿದೇಶಿ ವಿದ್ಯಾರ್ಥಿಗಳಿಗಾಗಿ ಹೊಸದೊಂದು ಯೋಜನೆಯನ್ನು ಘೋಷಿಸಲು ಮುಂದಾಗಿದೆ. ನೋಟು ಅಮಾನ್ಯೀಕರಣ ಮತ್ತು ದುಬಾರಿ ಶುಲ್ಕ ಹಿನ್ನೆಲೆಯಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಕುಸಿತ ಕಂಡಿತ್ತು.ಇದರಿಂದ ಚಿಂತೆಗೀಡಾಗಿದ್ದ ವಿವಿ ಈ ಸಾಲಿನಿಂದಲೇ ವಿದೇಶಿ ವಿದ್ಯಾರ್ಥಿಗಳನ್ನು ಸೆಳೆಯಲು ಶೇ.50 ರಷ್ಟು ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಮೈಸೂರು ವಿವಿಯಲ್ಲಿ ಸ್ನಾತಕೋತ್ತರ ಪದವಿಯಲ್ಲಿ 65 ವಿಭಾಗಗಳಿವೆ. ಖಾಸಗಿ ವಿವಿಯಲ್ಲಿ ಕೇವಲ ನಾಲ್ಕೈದು ಪಿಜಿ ವಿಭಾಗವಿರುತ್ತದೆ. ಆದರೆ 65 ವಿಭಾಗ ಹೊಂದಿರುವ ಮೈಸೂರು ವಿವಿ ಮುಂಚೂಣಿಯ ಸ್ಥಾನವನ್ನು ಪಡೆದಿದೆ.
ದೇಶದ ಉನ್ನತ ವಿದ್ಯಾಲಯಗಳಲ್ಲಿ ಮುಂಚೂಣಿ ಸ್ಥಾನ ಪಡೆದಿರುವ ಖ್ಯಾತಿ ಮೈಸೂರು ವಿವಿಗಿರುವ ಹಿನ್ನೆಲೆಯಲ್ಲಿ ವಿದ್ಯಾಭ್ಯಾಸ ಮಾಡುವುದಕ್ಕಾಗಿ ವಿದೇಶಿಗರು ಮುಗಿ ಬೀಳುವ ಕಾಲವೊಂದಿತ್ತು. ಕಳೆದ ನಾಲ್ಕು ವರ್ಷದಿಂದ ಹತ್ತಾರು ರಾಷ್ಟ್ರಗಳ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸವನ್ನು ಸಹ ನಡೆಸುತ್ತಿದ್ದರು.

ಆದರೆ ಅಮಾನ್ಯೀಕರಣ ಮತ್ತು ಹೆಚ್ಚಿನ ಶುಲ್ಕದಿಂದಾಗಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ದಿಢೀರ್ ಕುಸಿತ ಕಂಡಿತ್ತು. ಇದರಿಂದ ಎಚ್ಚೆತ್ತುಕೊಳ್ಳಲು ವಿವಿ ಈ ನಿರ್ಧಾರ ಕೈಗೊಂಡಿದೆ.
ಕಳೆದೆರಡು ವರ್ಷಗಳಿಂದ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಸುಮಾರು 1000 ದಿಂದ 1500 ಕೊರತೆ ಎದ್ದು ಕಂಡಿತು. ಈ ಹಿನ್ನೆಲೆಯಲ್ಲಿ ಈ ವರ್ಷದಿಂದಲೇ ವಿದ್ಯಾರ್ಥಿಗಳನ್ನು ಆಕರ್ಷಿಸಲು ಶೇ.50ರಷ್ಟು ಶುಲ್ಕ ಕಡಿತಗೊಳಿಸಲಾಗಿದೆ.
ಕಳೆದ ತಿಂಗಳು ನಡೆದ ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ವಿದೇಶಿ ವಿದ್ಯಾರ್ಥಿಗಳ ಶುಲ್ಕ ಕಡಿತ ಮಾಡಲು ಒಪ್ಪಿಗೆ ಸೂಚಿಸಲಾಯಿತು. ಈ ಸಾಲಿನಲ್ಲಿ ದಾಖಲಾಗುವ ಪ್ರತಿ ವಿದೇಶಿ ವಿದ್ಯಾರ್ಥಿಗಳು 30 ಸಾವಿರ ಪಾವತಿಸಿದರೆ ಸಾಕು, ಇನ್ನು ಮುಂದೆ ಮೈಸೂರು ವಿವಿಯಲ್ಲಿ ಸುಲಭವಾಗಿ ವಿದ್ಯಾಭ್ಯಾಸ ಪಡೆಯಬಹುದಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications