ನೀರಿಗಾಗಿ ಪರಿತಪಿಸುತ್ತಿದ್ದಾರೆ ಮೈಸೂರು ವಿವಿ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೈಸೂರು, ಏಪ್ರಿಲ್ 04: ಈ ಬಾರಿ ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನದಿಗಳೆಲ್ಲಾ ಬರಿದಾಗಿವೆ. ಎಲ್ಲೆಡೆ ನೀರಿನ ಕೊರತೆ ಎದ್ದು ಕಾಣುತ್ತಿದೆ. ಇದಕ್ಕೆ ಮೈಸೂರು ವಿವಿಯು ಹೊರತಾಗಿಲ್ಲ. ಹೌದು, ಮೈಸೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರು ಬಟ್ಟೆ ತೊಳೆಯುವುದಿರಲಿ, ಸ್ನಾನಕ್ಕೆ ನೀರಿಲ್ಲದೆ ಪರಿತಪಿಸುತ್ತಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈ ಸಮಸ್ಯೆ ಆರಂಭವಾಗಿ ಹೆಚ್ಚು ಕಡಿಮೆ ಮೂರು ತಿಂಗಳು ಕಳೆದಿವೆ. ಆದರೂ ನೀರಿಗೆ ಪರದಾಡುವುದು ತಪ್ಪಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಸೋಮವಾರ ರಾತ್ರೋರಾತ್ರಿ ಹಾಸ್ಟೆಲ್ ಆವರಣದಲ್ಲಿ ಪ್ರತಿಭಟನೆ ನಡೆಸಿ, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.
ವಿದ್ಯಾರ್ಥಿನಿಯರು ಹೇಳುವ ಪ್ರಕಾರ ಹಾಸ್ಟೆಲ್ ಆವರಣದಲ್ಲಿರುವ ಬೋರ್ ವೆಲ್ ಗಳಲ್ಲಿ ನೀರಿಲ್ಲ. ಬತ್ತಿ ಹೋಗಿದೆ. ಇದರಿಂದ ನೀರು ಟ್ಯಾಂಕರ್ ಗಳಲ್ಲಿ ಪೂರೈಕೆಯಾಗುತ್ತಿದೆ. ಅದು ವಾರಕ್ಕೆ ಒಂದು ಬಾರಿ ಮಾತ್ರ. ಈ ನೀರಿಗಾಗಿ ವಿದ್ಯಾರ್ಥಿನಿಯರು ಕ್ಯೂ ಹಚ್ಚಿ ನಿಲ್ಲಬೇಕಿದೆ. ಆದರೆ ಈ ನೀರು ಯಾವುದಕ್ಕೂ ಸಾಲುತ್ತಿಲ್ಲ. ಇದರಿಂದ ರೋಸತ್ತಿ ಹೋದ ವಿದ್ಯಾರ್ಥಿನಿಯರು ತಡರಾತ್ರಿ ಪ್ರತಿಭಟನೆ ನಡೆಸಿರುವುದು ತಿಳಿದು ಬಂದಿದೆ.

ಹಾಸ್ಟೆಲ್ ನಲ್ಲಿ ಉಂಟಾಗಿರುವ ನೀರಿನ ಸಮಸ್ಯೆ ಬಗ್ಗೆ ಮಾತನಾಡಿರುವ ಉಪಕುಲಪತಿ ಜಿ.ಹೇಮಂತ ಕುಮಾರ್, ನಗರದಲ್ಲಿ ನೀರಿನ ಕೊರತೆಯಿದೆ. ಜೊತೆಗೆ ಕ್ಯಾಂಪಸ್ ನಲ್ಲಿರುವ ಕೆಲವು ಬೋರ್ ವೆಲ್ ಗಳು ಬತ್ತಿ ಹೋಗಿವೆ. ಈ ಸಮಸ್ಯೆಯ ಕುರಿತು ನಾವು ಮೈಸೂರು ನಗರ ಪಾಲಿಕೆಯವರೊಂದಿಗೆ ಮಾತನಾಡಿದ್ದೇವೆ. ಆದರೆ ಲೋಕಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ನಮ್ಮ ಬೇಡಿಕೆ ಈಡೇರುವುದು ಸ್ವಲ್ಪ ತಡವಾಗಬಹುದು. ಆದ್ದರಿಂದ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಬಳಿ ತೆರಳಿ ಈ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ಭರವಸೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾತನಾಡಿರುವ ವಾರ್ಡನ್ ವಸಂತಿ, ಪವರ್ ಕಟ್ ನಂತಹ ಸಮಸ್ಯೆಯಿಂದಾಗಿ ನೀರಿನ ಸಮಸ್ಯೆ ಮತ್ತಷ್ಟು ತಲೆದೋರಿದೆ. ಶೀಘ್ರದಲ್ಲೇ ಈ ಸಮಸ್ಯೆ ಬಗೆಹರಿಸುತ್ತೇವೆ. ಅದು ಬಿಟ್ಟರೆ ಹಾಸ್ಟೆಲ್ ನಲ್ಲಿ ಮತ್ಯಾವ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕ್ಯಾಂಪಸ್ ಆವರಣದಲ್ಲಿ 40 ಬೋರ್ ವೆಲ್ ಗಳಿದ್ದು, ಅದರಲ್ಲಿ 10 ಬತ್ತಿಹೋಗಿವೆ. ಇಲ್ಲಿರುವ 65 ವಿಭಾಗಗಳ ಮೂರು ಸಾವಿರ ವಿದ್ಯಾರ್ಥಿನಿಯರಿಗೆ ಈ ಬೋರ್ ವೆಲ್ ಗಳೇ ಆಧಾರಸ್ತಂಭ. ಹೀಗೆ ನೀರಿನ ಸಮಸ್ಯೆ ಉಂಟಾಗುವುದರಿಂದ ಬಟ್ಟೆ, ಸ್ನಾನದ ಜೊತೆಗೆ ಶುಚಿತ್ವ ಕಾಪಾಡಲು ಸಾಧ್ಯವಾಗುವುದಿಲ್ಲ ಎಂಬುದು ವಿದ್ಯಾರ್ಥಿನಿಯರ ಅಳಲು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications