ಭಾರತಕ್ಕೆ ಬರದಂತೆ 18 ಚೀನಾ ವಿದ್ಯಾರ್ಥಿಗಳಿಗೆ ಸೂಚಿಸಿದ ಮೈಸೂರು ವಿವಿ
ಮೈಸೂರು, ಜನವರಿ 30: ರಜೆಯ ಮೇಲೆ ಚೀನಾಗೆ ತೆರಳಿರುವ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸದ್ಯಕ್ಕೆ ಭಾರತಕ್ಕೆ ವಾಪಾಸ್ ಆಗದಂತೆ ಮೈಸೂರು ವಿಶ್ವವಿದ್ಯಾನಿಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಚೀನಾದಲ್ಲಿ ಕಂಡುಬಂದಿರುವ ಮಾರಣಾಂತಿಕ ಕೊರೋನ್ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರು ವಿವಿ ಈ ನಿರ್ಧಾರ ತೆಗೆದುಕೊಂಡಿದೆ.
ರಾಜ್ಯದ ಇತರೆ ವಿಶ್ವವಿದ್ಯಾಲಯಗಳಿಗೆ ಹೋಲಿಸಿದಲ್ಲಿ ಪ್ರತಿಷ್ಠಿತ ಮೈಸೂರು ವಿವಿಯಲ್ಲಿ ಚೀನಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹಿನ್ನೆಲೆಯಲ್ಲಿ ವಿವಿಯು ಮುಂಜಾಗ್ರತ ಕ್ರಮ ಜರುಗಿಸಿದೆ.
ಈ ತನಕ ಕೊರೋನಾ ವೈರಸ್ ಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ 170ಕ್ಕೆ ಏರಿದ್ದು, ಜತೆಗೆ 7,700 ಮಂದಿಗೆ ಸೋಂಕು ತಗುಲಿರುವುದು ಖಚಿತಗೊಂಡಿದೆ. ಈ ನಡುವೆ ಚೀನಾದಲ್ಲಿ ಕಂಡುಬಂದಿರುವ ಮಾರಣಾಂತಿಕ ಕೊರೋನ್ ವೈರಸ್ ಇದೀಗ ಭಾರತದಲ್ಲೂ ಕಾಣಿಸಿಕೊಂಡಿದ್ದು, ಕೇರಳದಲ್ಲಿ ಒರ್ವ ವಿದ್ಯಾರ್ಥಿಯಲ್ಲಿ ಈ ವೈರಸ್ ಪತ್ತೆಯಾಗಿರುವುದು ಆತಂಕಕ್ಕೆ ಎಡೆ ಮಾಡಿದೆ.

ಮೈಸೂರು ವಿಶ್ವವಿದ್ಯಾಲಯದಲ್ಲಿ ಚೀನಾ ಮೂಲದ ಒಟ್ಟು 120 ವಿದ್ಯಾರ್ಥಿಗಳು ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ದಾಖಲಾಗಿ ವ್ಯಾಸಂಗ ಮಾಡುತ್ತಿದ್ದಾರೆ. ಇವರೆಲ್ಲಾ ಕಂಪ್ಯೂಟರ್ ಸೈನ್ಸ್ ವಿಭಾಗದ ಬಿ.ಟೆಕ್ ಹಾಗೂ ಎಂ.ಎಸ್.ಪ್ರೋಗ್ರಾಮಿಂಗ್ ನ ಇನ್ಫಾರ್ಮೇಷನ್ ಟೆಕ್ನಾಲಜಿ ಹಾಗೂ ಸಾಫ್ಟ್ ವೇರ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. 120 ವಿದ್ಯಾರ್ಥಿಗಳ ಪೈಕಿ 18 ವಿದ್ಯಾರ್ಥಿಗಳು ಚೀನಾಗೆ ತೆರಳಿದ್ದು, ಅವರನ್ನು ಸದ್ಯಕ್ಕೆ ಅಲ್ಲಿಂದ ಹಿಂದಿರುಗದಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಚೀನಾದಲ್ಲಿ ಹೊಸ ವರ್ಷ ಆಚರಣೆ ಬಹು ದೊಡ್ಡದು. ಈ ಹಿನ್ನೆಲೆಯಲ್ಲಿ ಮೈಸೂರು ವಿವಿಯಲ್ಲಿ ಅಧ್ಯಯನ ನಡೆಸುತ್ತಿದ್ದವರ ಪೈಕಿ 18ವಿದ್ಯಾರ್ಥಿಗಳು ಜನವರಿ 15 ರಂದು ಚೀನಾಗೆ ತೆರಳಿದರು. ಜನವರಿ 25 ರಂದು ಚೀನಾದಲ್ಲಿ ಹೊಸ ವರ್ಷಾಚರಣೆ ಮಾಡುತ್ತಾರೆ. ಇದನ್ನು ಮುಗಿಸಿಕೊಂಡು ಅವರು ಈಗಾಗಲೇ ವಾಪಸ್ ಆಗಬೇಕಿತ್ತು.
ಆದರೆ ಅಷ್ಟರಲ್ಲಿ ಚೀನಾದಲ್ಲಿ ಕಾಣಿಸಿಕೊಂಡ ಕರೋನಾ ವೈರಸ್ ಕಾರಣದಿಂದ ಅವರನ್ನು ಸದ್ಯಕ್ಕೆ ಹಿಂದಿರುಗದಂತೆ ಸೂಚಿಸಲಾಗಿದೆ. ಅವರೆಲ್ಲಾ ಚೀನಾದ ಝೂಮೇಡಿಯನ್ (zhumadian) ಪ್ರಾವೆನ್ಸಿಸ್ ನ ಹೊಂಗೈ ( Huanghai) ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications