ಚಿತ್ರಗಳು : ಮೈಸೂರು ವಿವಿ ಶತಮಾನದ ಸಂಭ್ರಮಕ್ಕೆ ತೆರೆ
ಮೈಸೂರು, ಜುಲೈ 23 : ಮೈಸೂರು ವಿಶ್ವ ವಿದ್ಯಾಲಯವು ಶತಮಾನದ ಸಂಭ್ರಮದಲ್ಲಿ ಕಳೆದೊಂದು ವರ್ಷದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಶುಕ್ರವಾರ ಸಂಜೆ ಶತಮಾನೋತ್ಸವದ ಸಂಭ್ರಮಕ್ಕೆ ತೆರೆ ಎಳೆಯಲಾಯಿತು.
ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಪಾಲ ವಾಜುಭಾಯಿ ರುಢಾಭಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು.[ಮೈಸೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳೆಲ್ಲ ಒಂದಾಗಿ ಬನ್ನಿ]

ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ, ಶತಮಾನೋತ್ಸವ ಕಂಡಿರುವ ಹಾಗೂ ಕರ್ನಾಟಕದ ಮೊದಲ ಹಾಗೂ ದೇಶದ 4 ವಿಶ್ವವಿದ್ಯಾಲಯವಾಗಿರುವ ಮೈಸೂರು ವಿಶ್ವ ವಿದ್ಯಾಲಯದ ಶತಮಾನದ ಸಂಭ್ರಮದ ಸಮಾರೋಪ ಸಮಾರಂಭ ಮಾನಸ ಗಂಗೋತ್ರಿಯ ಆ್ಯಂಫಿ ಥಿಯೇಟರ್ (ಬಯಲು ರಂಗಮಂದಿರ) ನಲ್ಲಿ ನಡೆಯಿತು. [ಮೈಸೂರು ಪ್ರತಿದಿನ ನೆನೆಯಬೇಕಾದ ವೆಂಕಟಸುಬ್ಬ ಸೆಟ್ಟಿ]

ಕಾರ್ಯಕ್ರಮದಲ್ಲಿ ಮಾತನಾಡಿದ 'ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು, ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾಲಯ ಶತಮಾನ ಪೂರೈಸಿರುವುದು ಮೈಲುಗಲ್ಲೇ ಸರಿ. ಮಹಿಳೆ, ಪುರುಷರೆನ್ನದೆ ಜ್ಞಾನದ ಬೆಳಕನ್ನು ನೀಡುತ್ತಿರುವ ವಿವಿ ದೇಶಕ್ಕೆ ಉತ್ತಮ ಮಾನವ ಸಂಪನ್ಮೂಲವನ್ನು ನೀಡುತ್ತಿದೆ' ಎಂದರು.['ಲರ್ನ್ ಟು ಸರ್ವ್,ಸರ್ವ್ ಟು ಲರ್ನ್' ಆರಂಭಿಸಿದ ಮೈಸೂರು ವಿವಿ]

'ಮೈಸೂರು ವಿವಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದರ್ಶಿತ್ವದ ಪ್ರತೀಕ. ಅಲ್ಲದೆ ಬ್ರಿಟಿಷ್ ಆಡಳಿತಕ್ಕೆ ಒಳಪಡದೆ ಸ್ಥಾಪನೆಯಾದ ಮೊದಲ ವಿವಿಯೂ ಹೌದು. ಇಂದು ದೇಶದ ದೊಡ್ಡ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಯನ್ನು ಗಳಿಸಿದ್ದು, 85 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ' ಎಂದು ಶ್ಲಾಘಿಸಿದರು.

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿವಿ ಕುಲಪತಿ ಪ್ರೊ.ರಂಗಪ್ಪ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications