ಮೈಸೂರು ವಿ.ವಿಯಿಂದ ಅಜೀಂ ಪ್ರೇಂಜಿಗೆ ಗೌರವ ಡಾಕ್ಟರೇಟ್
ಮೈಸೂರು, ಮಾರ್ಚ್ 21: ಮೈಸೂರು ವಿಶ್ವ ವಿದ್ಯಾಲಯದಿಂದ ವಿಪ್ರೋ ಟೆಕ್ನಾಲಿಜಿಸ್ ಅಧ್ಯಕ್ಷ ಅಜೀಂ ಪ್ರೇಮ್ಜಿ ಅವರಿಗೆ ಮಾರ್ಚ್ 22ರಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ಇದೇ ಸಂದರ್ಭದಲ್ಲಿ ಪ್ರೇಂಜಿ ಅವರು 'ಶಿಕ್ಷಣದ ವ್ಯವಸ್ಥೆ' ಬಗ್ಗೆ ಭಾಷಣ ಮಾಡಲಿದ್ದಾರೆ.[ದೇಶದ ದಾನಿಗಳ ಪೈಕಿ ಪ್ರೇಮ್ ಜೀ ನಂ.1]
ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರು ಕಾರ್ಯಕ್ರಮದ ಬಗ್ಗೆ ವಿವರಿಸಿ, ಪ್ರೇಮ್ ಜೀ ಅವರು ಶತಮಾನೋತ್ಸವ ಉಪನ್ಯಾಸ ಸರಣಿಯಲ್ಲಿ ಭಾರತದಲ್ಲಿ ಶಾಲಾ ಶಿಕ್ಷಣವನ್ನು ಉತ್ತಮಗೊಳಿಸುವ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಅಂಚೆ ಇಲಾಖೆ ಹೊರತಂದಿರುವ 5 ಮುಖಬೆಲೆಯ ಅಂಚೆ ಲಕೋಟೆಯನ್ನು ಮಾ.22ರಂದು ಬೆಳಗ್ಗೆ 11 ಗಂಟೆಗೆ ಕ್ರಾಫರ್ಡ್ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದರು. ['ಲರ್ನ್ ಟು ಸರ್ವ್,ಸರ್ವ್ ಟು ಲರ್ನ್' ಆರಂಭಿಸಿದ ಮೈಸೂರು ವಿವಿ]

ಮೈಸೂರು ವಿವಿಯ ಶತಮಾನೋತ್ಸವ ಸಮಾರಂಭ ಈ ವರ್ಷದ ಇದೇ 27ರಂದು ಮುಕ್ತಾಯ ಸಮಾರಂಭ ನಡೆಯಲಿದ್ದು, ಉಪರಾಷ್ಟ್ರಪತಿ ಅಮೀದ್ ಅನ್ಸಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟಿನ ಮಾಜಿ ಮುಖ್ಯ ನ್ಯಾ ಯಾಧೀಶರಾದ ಬಿ.ಎ ಖಾನ್ ಅವರು ಪ್ರೇಂಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.[ಮೈಸೂರು ಪ್ರತಿದಿನ ನೆನೆಯಬೇಕಾದ ವೆಂಕಟಸುಬ್ಬ ಸೆಟ್ಟಿ]
ಸಾಫ್ಟ್ ವೇರ್ ಹಾಗೂ ಹಾರ್ಡ್ ವೇರ್ ಉದ್ಯಮವಲ್ಲದೆ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಜೀಂ ಪ್ರೇಂಜಿ ಅವರು ಅಪಾರ ಕೊಡುಗೆ ನೀಡಿದ್ದಾರೆ. ವಿಶ್ವದ ಮಹಾನ್ ದಾನಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೇಂಜಿ ಅವರ ಜೊತೆಗೆ ಜನಪ್ರಿಯ ಕಾದಂಬರಿಕಾರ ಎಸ್ ಎಲ್ ಭೈರಪ್ಪ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಕಳೆದ ವರ್ಷವೇ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications