ಕೆಪಿಎಲ್ ಕ್ರಿಕೆಟ್ ಪಂದ್ಯಾವಳಿ: ಮೈಸೂರು ವಾರಿಯರ್ಸ್ ನಿಂದ ಟ್ಯಾಲೆಂಟ್ ಹಂಟ್
ಮೈಸೂರು, ಜುಲೈ 13: 2019ರ ಕೆಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಸಲುವಾಗಿ ಈ ಬಾರಿ ಮೈಸೂರಿನ ಎನ್ಆರ್ ಸಮೂಹ ಕ್ರಿಕೆಟ್ ಪ್ರತಿಭಾನ್ವೇಷಣೆಯ ಆರನೇ ಆವೃತ್ತಿಯನ್ನು ಆಯೋಜಿಸಿದೆ. ಬೆಂಗಳೂರಿನಲ್ಲಿ ಜುಲೈ 17 ಹಾಗೂ ಮೈಸೂರಿನಲ್ಲಿ ಜುಲೈ 20ರಂದು ಪ್ರತಿಭಾನ್ವೇಷಣೆ ನಡೆಯಲಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಎನ್ ಆರ್ ಸಮೂಹ, ಬೆಂಗಳೂರಿನ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ ಜುಲೈ 17ರಂದು ಮತ್ತು ಮೈಸೂರಿನ ಎಸ್ ಡಿಎನ್ಆರ್ ಮೈದಾನದಲ್ಲಿ ಜುಲೈ 20ರಂದು ಪ್ರತಿಭಾನ್ವೇಷಣೆ ನಡೆಯಲಿದೆ. ಕರ್ನಾಟಕದ ಯಾವುದೇ ಭಾಗದ ಯುವ, ಪ್ರತಿಭಾವಂತ ಕ್ರಿಕೆಟ್ ಆಟಗಾರರು ಭಾಗವಹಿಸಬಹುದು. ಇಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಆಯ್ಕೆಯಾಗುವ ಆಟಗಾರರು 2019ರ ಕೆಪಿಎಲ್ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಮಾಹಿತಿ ನೀಡಿದೆ.
ಮೈಸೂರು ವಾರಿಯರ್ಸ್ ನಿಂದ ಕಳೆದ ವರ್ಷವೂ ಕ್ರಿಕೆಟ್ ಪ್ರತಿಭಾನ್ವೇಷಣೆ ನಡೆಸಲಾಗಿತ್ತು. ಕಳೆದ ವರ್ಷದ ಆಕಾಂಕ್ಷಿಗಳಲ್ಲಿ ಕಿಶನ್ ಬೆಡಾರೆ ಮತ್ತು ಗೌತಮ್ ಸಾಗರ್ ವಾರಿಯರ್ಸ್ ತಂಡದ ಆಟಗಾರರಾಗಿ ಆಯ್ಕೆಯಾದರು. ಈ ಪ್ರತಿಭಾನ್ವೇಷಣೆಯನ್ನು ಮುಖ್ಯವಾಗಿ ಕರ್ನಾಟಕದ ಕೆಎಸ್ ಸಿಎ (ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್) ನೋಂದಾಯಿತ ಕ್ಲಬ್ ಗಳ ಕೆಎಸ್ ಸಿಎ ನೋಂದಾಯಿತ ಸದಸ್ಯರಿಗಾಗಿ ಆಯೋಜಿಸಲಾಗುತ್ತದೆ. ಯುವ ಪ್ರತಿಭಾವಂತ ಕ್ರಿಕೆಟ್ ಪ್ರತಿಭೆಗಳನ್ನು ಬೆಳೆಸುವ ಜೊತೆಗೆ ಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡಿ ಪೋಷಿಸುವ ಗುರಿಯನ್ನು ಹೊಂದಿದೆ.

ಪ್ರತಿಭಾನ್ವೇಷಣೆಯು ಬೆಂಗಳೂರಿನಲ್ಲಿ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗುತ್ತದೆ ಮತ್ತು ಕೆಎಸ್ ಸಿಎ ಕ್ಲಬ್ ಅಡಿಯಲ್ಲಿ ನೋಂದಾಯಿತ ಕ್ಲಬ್ ಆಟಗಾರರು ಮಾತ್ರ ಆಯ್ಕೆ ಪ್ರಕ್ರಿಯೆಯಲ್ಲಿ ಸ್ಪರ್ಧಿಸಬಹುದು. ಆಟಗಾರರು ಕಳೆದ ಎರಡು ವರ್ಷಗಳ ಕೆಎಸ್ ಸಿಎ ಅಂಕಿಅಂಶಗಳನ್ನು ಮತ್ತು ಕಿಟ್ ಗಳನ್ನು ತಮ್ಮೊಂದಿಗೆ ತರಬೇಕು. ಮೈಸೂರು (ಮಂಡ್ಯ ಮತ್ತು ಚಾಮರಾಜನಗರ) ಸುತ್ತಮುತ್ತಲ ಪ್ರದೇಶಗಳನ್ನು ಹೊರತುಪಡಿಸಿ ಬೇರೆ ಭಾಗಗಳ ಆಟಗಾರರು ಬರಬಹುದು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications