ಕರ್ನಾಟಕದ ಹೆಮ್ಮೆಯ ಕನ್ನಡಿಗನಿಗೆ ರಷ್ಯಾ ಪ್ರಶಸ್ತಿ
ರಷ್ಯಾದ ಖ್ಯಾತ ಕವಿ ಸೆರ್ಗೈ ಇಸೆನಿನ್ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗೆ ಕನ್ನಡಿಗ ಪ್ರೊ. ಎಚ್.ಎಸ್.ಹರಿಶಂಕರ್ ಭಾಜನರಾಗಿದ್ದಾರೆ. ಈವರೆಗೆ ಈ ಪ್ರಶಸ್ತಿಯನ್ನು ಮಲೆಯಾಳಿ ಸಾಹಿತಿಗಳೇ ಪಡೆಯುತ್ತಿದ್ದರು. ಇದೇ ಮೊದಲ ಬಾರಿಗೆ ಅದು ಕನ್ನಡಿಗರೊಬ್ಬರಿಗೆ ಸಂದಿದೆ.
ರಷ್ಯನ್ ಸಾಹಿತ್ಯವನ್ನು ಭಾರತೀಯ ಭಾಷೆಗಳಿಗೆ ಅನುವಾದ ಮಾಡುವ ಕಾರ್ಯ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ತಿರುವನಂತಪುರದಲ್ಲಿರುವ ರಷ್ಯನ್ ಕಲ್ಚರಲ್ ಸೆಂಟರ್ ಮತ್ತು ಮಾಸ್ಕೊದ ಇಸೆನಿನ್ ಮ್ಯೂಸಿಯಂ ಜಂಟಿಯಾಗಿ ಈ ಪ್ರಶಸ್ತಿ ನೀಡುತ್ತವೆ.[ಭಗವದ್ಗೀತೆಯಲ್ಲಿನ ತಾರತಮ್ಯದ ರೋಗದ ಗಡ್ಡೆ ಬಿಸಾಕಬೇಕಿದೆ]

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಧ್ಯಾಪಕರಾಗಿ ನಿವೃತ್ತರಾಗಿರುವ ಹರಿಶಂಕರ್ ರಷ್ಯಾ ಮತ್ತು ಕನ್ನಡ ಭಾಷೆಯ ಕೊಂಡಿಯಾಗಿ ಕೆಲಸ ಮಾಡಿದ್ದಾರೆ. ಈಗಲೂ ಮಾಡುತ್ತಿದ್ದಾರೆ. ರಷ್ಯಾದ 18 ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ರಷ್ಯಾದ ಟಾಲ್ ಸ್ಟಾಯ್, ಚೆಕಾಫ್, ದಾಸ್ತೊವೊಸ್ಕಿ ಮುಂತಾದ ಪ್ರಸಿದ್ಧರು ಕನ್ನಡಕ್ಕೂ ದಕ್ಕುವಂತೆ ಮಾಡಿದ್ದಾರೆ.
ಚೆಕಾಫ್ ನ ಕತೆಗಳು, ಕಜಾಕರು (ಟಾಲ್ ಸ್ಟಾಯ್ ಕಾದಂಬರಿ), ನರಿ ಮತ್ತು ಮೊಲ (ರಷ್ಯಾ ಜನಪದ ಕತೆಗಳು), 1-2-3 (ಮಕ್ಕಳ ಕವಿತೆಗಳು), ಜೂಶನ್ (ರಷ್ಯಾ ಸೈನಿಕನ ಕತೆ), ನಕ್ಷತ್ರ ಮತ್ತು ಗ್ರಹಗಳ ಕುರಿತು, ಇರುವೆ ಮತ್ತು ಪಾರಿವಾಳ, ನೈಜ ಮಾನವನ ಕತೆ ಮುಂತಾದ ರಷ್ಯಾದ ಕೃತಿಗಳನ್ನು ಕನ್ನಡಕ್ಕೆ ತಂದಿರುವ ಹಿರಿಮೆ ಹರಿಶಂಕರ್ ಅವರದ್ದು.
ಇದಲ್ಲದೆ ಜಾರ್ಜ್ ಡಬ್ಲ್ಯು ಸೌತ್ಗೇಟ್ ಅವರ ಯುರೋಪಿನ ಆಧುನಿಕ ಇತಿಹಾಸ ಕೃತಿಯನ್ನೂ ಕನ್ನಡಕ್ಕೆ ಅನುವಾದಿಸಿದ್ದಾರೆ. 'ಸುಂದರ ಮಾಸ್ಕೊ, ಸುಂದರ ರಷ್ಯಾ' ಎಂಬ ಕೃತಿಯೂ ಸೇರಿದಂತೆ ಕನ್ನಡದಲ್ಲಿಯೂ ಹಲವಾರು ಪುಸ್ತಕಗಳನ್ನು ಅವರು ರಚಿಸಿದ್ದಾರೆ.[ಬಸವನಗುಡಿ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಜ್ಞಾನದ ಊಟ]
ರಷ್ಯನ್ ಕಲಿತ ಹರಿಶಂಕರ್
ಭಾರತ-ಸೋವಿಯತ್ ಮೈತ್ರಿಯ ನಂತರ ಭಾರತದ ಬಹಳಷ್ಟು ವಿಶ್ವವಿದ್ಯಾಲಯಗಳಲ್ಲಿ ರಷ್ಯನ್ ಭಾಷೆ ಕಲಿಸುವ ಕ್ರಿಯೆಗಳು ನಡೆದವು. 1964ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿಯೂ ರಷ್ಯನ್ ಭಾಷೆ ಕಲಿಸುವ ತರಗತಿ ಆರಂಭವಾಯಿತು. ಹರಿಶಂಕರ್ ಅವರು ಆಗ ರಷ್ಯನ್ ಭಾಷೆ ಕಲಿತರು. ರಷ್ಯಾ ಭಾಷೆ ಕಲಿಸಲು ಮಾಸ್ಕೊದಿಂದ ಮೈಸೂರಿಗೆ ಬಂದವರಿಗೆ ಬೇರೆ ಭಾಷೆ ಬರುತ್ತಿರಲಿಲ್ಲ. ಹರಿಶಂಕರ್ ಅವರ ಜೊತೆ ಸ್ನೇಹ ಸಂಪಾದಿಸಿದರು. ತಮ್ಮ ಸ್ಕೂಟರ್ ನಲ್ಲಿ ಅವರನ್ನು ಸುತ್ತಾಡಿಸಿದರು. ಆ ಮೂಲಕ ರಷ್ಯ ಭಾಷೆಯನ್ನು ತಮ್ಮದಾಗಿಸಿಕೊಂಡರು.
ನಂತರ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭವಾದ ವಿದೇಶಿ ಭಾಷಾ ವಿಭಾಗದಲ್ಲಿ 4 ವರ್ಷಗಳ ಕಾಲ ರಷ್ಯನ್ ಭಾಷೆ ಪಾಠವನ್ನೂ ಮಾಡಿದರು.1967ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದಲ್ಲಿ ಸಹಾಯಕ ಅನುವಾದಕರಾಗಿ ವೃತ್ತಿ ಆರಂಭಿಸಿದ ಹರಿಶಂಕರ್ 1970ರಲ್ಲಿ ಅಧ್ಯಾಪಕರಾದರು. 1999ರಲ್ಲಿ ಪ್ರೊಫೆಸರ್ ಆದರು. ಕನ್ನಡ ಮತ್ತು ಅನುವಾದ ವಿಷಯಗಳನ್ನು ಅವರು ಬೋಧಿಸುತ್ತಿದ್ದರು. 1972ರಲ್ಲಿ ರಷ್ಯನ್ ಫೆಲೋಷಿಪ್ ಪಡೆದ ಹರಿಶಂಕರ್ ಅನುವಾದ ತಂತ್ರಗಳು ಮತ್ತು ರಷ್ಯನ್ ಭಾಷೆಯನ್ನು ಮಾಸ್ಕೊ ಸ್ಟೇಟ್ ಯೂನಿವರ್ಸಿಟಿಯಲ್ಲಿ ಒಂದು ವರ್ಷ ಕಲಿತರು.
ರಷ್ಯಾ ಭಾಷೆ ಚೆನ್ನಾಗಿ ಬರುತ್ತಿದ್ದರಿಂದ ಸೋವಿಯತ್ ಯೂನಿಯನ್ ಜೊತೆ ಅವರ ಸಂಪರ್ಕ ಬೆಳೆದಿತ್ತು. ಮಾಸ್ಕೊದ ಪೀಪಲ್ಸ್ ಫ್ರೆಂಡ್ಶಿಪ್ ವಿಶ್ವವಿದ್ಯಾಲಯದ ಆಹ್ವಾನದ ಮೇರೆಗೆ 1975ರಲ್ಲಿ ಮಾಸ್ಕೊಗೆ ತೆರಳಿದ ಹರಿಶಂಕರ್ ಅಲ್ಲಿ 40 ದಿನ ಇದ್ದರು. 'ಕನ್ನಡದ ಮೇಲೆ ರಷ್ಯನ್ ಸಾಹಿತ್ಯದ ಪ್ರಭಾವ' ಕುರಿತು ಉಪನ್ಯಾಸ ನೀಡಿದರು. ನಂತರ 1978ರಲ್ಲಿಯೂ ಇದೇ ವಿಶ್ವವಿದ್ಯಾನಿಲಯದ ಆಹ್ವಾನದ ಮೇರೆಗೆ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಅವರು ಆಗಲೂ 40 ದಿನ ರಷ್ಯಾದಲ್ಲಿದ್ದರು.
1988ರಿಂದ 1990ರವರೆಗೆ ರಷ್ಯಾದಲ್ಲಿಯೇ ಇದ್ದ ಹರಿಶಂಕರ್ ರಷ್ಯಾದ ಸಾಕಷ್ಟು ಕೃತಿಗಳನ್ನು ಕನ್ನಡಕ್ಕೆ ತಂದರು. ರಷ್ಯಾ ಭಾಷೆಯಲ್ಲಿ "ರಾದುಗಾ" ಎಂದರೆ "ಕಾಮನಬಿಲ್ಲು". ಹೆಸರಿಗೆ ತಕ್ಕಂತೆ ಹರಿಶಂಕರ್ ರಷ್ಯಾದ ಬಣ್ಣಬಣ್ಣದ ಸಾಹಿತ್ಯವನ್ನೇ ಕನ್ನಡಕ್ಕಿಳಿಸಿದರು. ಅದೇ ಸಂದರ್ಭದಲ್ಲಿ ರೇಡಿಯೊ ಮಾಸ್ಕೊದಲ್ಲಿ ಉದ್ಘೋಷಕರಾಗಿಯೂ ಅವರು ಕೆಲಸ ನಿರ್ವಹಿಸಿದರು. ಆಗ ರೇಡಿಯೊ ಮಾಸ್ಕೊದಲ್ಲಿ ಪ್ರತಿ ದಿನ ಮಧ್ಯಾಹ್ನ 2ರಿಂದ 2.30ರವರೆಗೆ ಹಾಗೂ ಸಂಜೆ 4.30ರಿಂದ 5 ಗಂಟೆಯವರೆಗೆ ಕನ್ನಡ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿತ್ತು. ಇದರಲ್ಲಿ ರಷ್ಯಾದ ಸುದ್ದಿಗಳನ್ನು ಹರಿಶಂಕರ್ ಕನ್ನಡದಲ್ಲಿ ಓದುತ್ತಿದ್ದರು.
ಹರಿಶಂಕರ್ ಅವರ ತಂದೆ ಎಚ್.ಎಂ.ಶಂಕರನಾರಾಯಣ ಅವರೂ ಪ್ರಸಿದ್ಧ ಸಾಹಿತಿ ಮತ್ತು ಪ್ರಕಾಶಕ. ಶಾರದಾ ಮಂದಿರ ಪ್ರಕಾಶನದ ಮೂಲಕ 300ಕ್ಕೂ ಹೆಚ್ಚು ಕೃತಿಗಳನ್ನು ಅವರು ಪ್ರಕಟಿಸಿದ್ದಾರೆ. ಇದರಿಂದಾಗಿ ಹರಿಶಂಕರ್ ಅವರಿಗೆ ಬಾಲ್ಯದಿಂದಲೇ ಸಾಹಿತಿಗಳ ಸಂಪರ್ಕ ಇತ್ತು.
ಮೈಸೂರಿನಲ್ಲಿಯೇ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಹರಿಶಂಕರ್ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಎಂ.ಎ. ಮಾಡಿದರು. ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಷ್ಯನ್ ಭಾಷೆಯ ಮೇಲೆ ಎಂ.ಎ. ಮಾಡಿದರು. ಅನುವಾದ ವಿಷಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂಫಿಲ್ ಮಾಡಿದ್ದಾರೆ. 4 ವಿದ್ಯಾರ್ಥಿಗಳಿಗೆ ಪಿಎಚ್.ಡಿ ಹಾಗೂ 5 ಎಂಫಿಲ್ ಮಾರ್ಗದರ್ಶಕರಾಗಿದ್ದರು. ಹರಿಶಂಕರ್ ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications