Mysuru: ಮೈಸೂರಿನಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ ಯಶಸ್ವಿ
ಮೈಸೂರು, ಫೆಬ್ರವರಿ 04: ಮೈಸೂರು ಯೋಗ ಒಕ್ಕೂಟ ತನ್ನ 24ನೇ ವಾರ್ಷಿಕೋತ್ಸವ ಹಾಗೂ ರಥಸಪ್ತಮಿ ಅಂಗವಾಗಿ ಅರಮನೆ ಉತ್ತರ ದ್ವಾರದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾಮೂಹಿಕ 108 ಸೂರ್ಯ ನಮಸ್ಕಾರದಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು.
ಈ ಬಗ್ಗೆ ಮೈಸೂರು ಯೋಗ ಒಕ್ಕೂಟದ ಅಧ್ಯಕ್ಷ ಕೆ.ಜಿ. ದೇವರಾಜು ಮಾತನಾಡಿದ್ದು, ಒಕ್ಕೂಟ 2001ರಲ್ಲಿ ಪ್ರಾರಂಭವಾಗಿದ್ದು, ಅನೇಕ ಯೋಗ ಮತ್ತು ಆರೋಗ್ಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಪ್ರತಿವರ್ಷ ರಥಸಪ್ತಮಿ ಅಂಗವಾಗಿ ಅರಮನೆ ಉತ್ತರ ದ್ವಾರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ 108ಸೂರ್ಯ ನಮಸ್ಕಾರಗಳು ಹಾಗೂ ಸೂರ್ಯಯಜ್ಞ ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿದೆ ಎಂದರು.

ಈವರೆಗೆ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ, ಭಗವದ್ಗೀತೆ ಕಂಠಪಾಠ ಸ್ಪರ್ಧೆ, ಯೋಗ ಚಿತ್ರಕಲಾ ಸ್ಪರ್ಧೆ, ಜನಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸರ್ಕಾರಿ ಆಯುರ್ವೇದ ಹಾಗೂ ಜೆಎಸ್ಎಸ್ ಆಯುರ್ವೇದ ಕಾಲೇಜಿನ ಸಹಯೋಗದಲ್ಲಿ ಆರೋಗ್ಯ ಸಪ್ತಾಹ, ಯೋಗ ಕಾರ್ಯಾಗಾರ ನಡೆಸಲಾಗುತ್ತಿದೆ. ಮೈಸೂರು ಯೋಗ ಸಂಸ್ಥೆಗಳ ಜೊತೆಗೂಡಿ ಪ್ರತಿ ವರ್ಷ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಬ್ರಹ್ಮಕುಮಾರಿ ಈಶ್ವರಿಯ ವಿವಿ ಜೊತೆ ಸೇರಿ ಡಿ.21 ರಂದು ವಿಶ್ವ ಧ್ಯಾನ ದಿನಾಚರಣೆ ನಡೆಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕ ಕೆ. ರಘುರಾಂ, ಒಕ್ಕೂಟದ ಮಾಜಿ ಅಧ್ಯಕ್ಷ ಎಸ್.ವಿ. ವೆಂಕಟೇಶಯ್ಯ, ಸ್ವಾಸ್ಥ್ಯ ಮತ್ತು ಆಹಾರ ತಜ್ಞೆ ನಂದಿನಿ ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಹಿರಿಯ ಸಮಾಜ ಸೇವಕ ಕೆ. ರಘುರಾಂ ಮಾತನಾಡಿ, ಮೈಸೂರಿನಲ್ಲಿ ಯೋಗ ಬೆಳವಣಿಗೆಗೆ ಯದುವಂಶದ ಕೊಡುಗೆ ಅಪಾರ. ಅದೇ ರೀತಿ ಹಲವಾರು ಸಾಧಕರು ಯೋಗವನ್ನು ವಿಶ್ವಮಟ್ಟದಲ್ಲಿ ಪ್ರಸಿದ್ಧಿಯಾಗಲು ಕಾರಣರಾಗಿದ್ದಾರೆ ಎಂದರು.

ಮೈಸೂರಿನ ವಿವಿಧ ಯೋಗ ಕೇಂದ್ರಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ವಿದೇಶಿಯರು ಸೇರಿದಂತೆ ಹಲವಾರು ಯೋಗಬಂಧುಗಳು ಭಾಗವಹಿಸಿ, ಅತ್ಯಂತ ಶಿಸ್ತುಬದ್ಧವಾಗಿ ನಾಲ್ಕು ಭಾಗಗಳಲ್ಲಿ 108 ಸೂರ್ಯನಮಸ್ಕಾರಗಳನ್ನು ಸಲ್ಲಿಸಿದರು. ಸೂರ್ಯಯಜ್ಞ ನೆರವೇರಿಸಿದ ಒಕ್ಕೂಟದ ಪದಾಧಿಕಾರಿಗಳು ಎಲ್ಲರಿಗೂ ಪ್ರಸಾದದ ವ್ಯವಸ್ಥೆ ಮಾಡಿದ್ದರು.
ಕಾರ್ಯಕ್ರಮದಲ್ಲಿ ಮೈಸೂರು ಯೋಗ ಒಕ್ಕೂಟದ ಗೌರವಾಧ್ಯಕ್ಷ ಡಾ.ಎ,ಎಸ್. ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮುಖ್ಯ ಅತಿಥಿಯಾಗಿದ್ದರು. ಒಕ್ಕೂಟದ ಗೌರವಾಧ್ಯಕ್ಷ ಟಿ.ಜಲೇಂದ್ರಕುಮಾರ್, ಕಾರ್ಯಾಧ್ಯಕ್ಷರಾದ ಡಾ.ಬಿ.ಪಿ. ಮೂರ್ತಿ, ಶಾಂತರಾಮ್, ಎಂ.ಎಸ್. ಶಿವಪ್ರಕಾಶ್, ಉಪಾಧ್ಯಕ್ಷರಾದ ಎಂ.ಎಸ್.ರಮೇಶ್ಕುಮಾರ್, ಆಶಾ ದೇವಿ, ಪ್ರಧಾನ ಕಾರ್ಯದರ್ಶಿ ಯೋಗ ಕುಮಾರ್, ಖಜಾಂಚಿ ನರಸಿಂಹ, ರಾಜಶೇಖರ್, ಶುಭಲಕ್ಷ್ಮಿ, ಎಸ್.ಪುರುಷೋತ್ತಮ್, ಶಿಲ್ಪಾ ಪ್ರಶಾಂತ್, ಕೆ.ಚಂದ್ರು, ಕುಮುದಾ, ಮಣಿಕಂಠನ್, ಎಂ.ಡಿ. ರಾಜಶೇಖರಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications