ಎಚ್.ಡಿ.ಕೋಟೆ; ಜಮೀನಿನ ಜಗಳ ಕೊನೆಯಾಗಿದ್ದು ಅಣ್ಣನ ಕೊಲೆಯಲ್ಲಿ
ಮೈಸೂರು, ಜೂನ್ 20: ಭೂಮಿಗೆ ಸಂಬಂಧಿಸಿದಂತೆ ಅಣ್ಣ ತಮ್ಮಂದಿರ ನಡುವಿನ ಜಗಳ ತಾರಕಕ್ಕೇರಿ ತಮ್ಮನಿಂದಲೇ ಅಣ್ಣ ಕೊಲೆಯಾದ ಘಟನೆ ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ.
ಮಹದೇವೇಗೌಡ (53) ತಮ್ಮನಿಂದ ಕೊಲೆಯಾದವರು. ತಮ್ಮ ಗಂಗಾಧರ್, ಅಣ್ಣ ಮಹದೇವೇಗೌಡ ಮೇಲೆ ಕುಡುಗೋಲುನಿಂದ ಹಲ್ಲೆ ಮಾಡಿ ಇರಿದು ಕೊಲೆ ಮಾಡಿದ್ದಾನೆ. ಮೃತ ಮಹದೇವೇಗೌಡರ ಹೆಸರಿನಲ್ಲಿದ್ದ ಆರು ಎಕರೆ ಜಮೀನನ್ನು ಉಳುಮೆ ಮಾಡುವ ವಿಚಾರದಲ್ಲಿ ಗಲಾಟೆ ಆರಂಭವಾಗಿದೆ. ಜಮೀನಿನಲ್ಲಿ ಮಾತಿಗೆ ಮಾತು ನಡೆದು ಕೊನೆಗೆ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ.

ಘರ್ಷಣೆಯಲ್ಲಿ ಆರೋಪಿ ಗಂಗಾಧರನಿಗೂ ಗಾಯವಾಗಿದೆ. ಪೊಲೀಸರು ಈತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಚ್. ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
More From
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications