ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಚ್.ಡಿ.ಕೋಟೆ; ಜಮೀನಿನ ಜಗಳ ಕೊನೆಯಾಗಿದ್ದು ಅಣ್ಣನ ಕೊಲೆಯಲ್ಲಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 20: ಭೂಮಿಗೆ ಸಂಬಂಧಿಸಿದಂತೆ ಅಣ್ಣ ತಮ್ಮಂದಿರ ನಡುವಿನ ಜಗಳ ತಾರಕಕ್ಕೇರಿ ತಮ್ಮನಿಂದಲೇ ಅಣ್ಣ ಕೊಲೆಯಾದ ಘಟನೆ ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ.

ಮಹದೇವೇಗೌಡ (53) ತಮ್ಮನಿಂದ ಕೊಲೆಯಾದವರು. ತಮ್ಮ ಗಂಗಾಧರ್, ಅಣ್ಣ ಮಹದೇವೇಗೌಡ ಮೇಲೆ ಕುಡುಗೋಲುನಿಂದ ಹಲ್ಲೆ ಮಾಡಿ ಇರಿದು ಕೊಲೆ ಮಾಡಿದ್ದಾನೆ. ಮೃತ ಮಹದೇವೇಗೌಡರ ಹೆಸರಿನಲ್ಲಿದ್ದ ಆರು ಎಕರೆ ಜಮೀನನ್ನು ಉಳುಮೆ ಮಾಡುವ ವಿಚಾರದಲ್ಲಿ ಗಲಾಟೆ ಆರಂಭವಾಗಿದೆ. ಜಮೀನಿನಲ್ಲಿ ಮಾತಿಗೆ ಮಾತು ನಡೆದು ಕೊನೆಗೆ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ.

ಅಕ್ರಮ ಸಂಬಂಧ; ಶ್ರೀರಂಗಪಟ್ಟಣದ ಲಾಡ್ಜ್‌ ನಲ್ಲಿ ಮಹಿಳೆ ಬರ್ಬರ ಹತ್ಯೆಅಕ್ರಮ ಸಂಬಂಧ; ಶ್ರೀರಂಗಪಟ್ಟಣದ ಲಾಡ್ಜ್‌ ನಲ್ಲಿ ಮಹಿಳೆ ಬರ್ಬರ ಹತ್ಯೆ

Person Murdered His Brother For Land Issue In HD Kote Mysuru

ಘರ್ಷಣೆಯಲ್ಲಿ ಆರೋಪಿ ಗಂಗಾಧರನಿಗೂ ಗಾಯವಾಗಿದೆ. ಪೊಲೀಸರು ಈತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಚ್. ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

English summary
The quarrel between brothers regarding land issue ended in murder in hd kote of mysuru district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X