ಮಲೇಷ್ಯಾದಲ್ಲಿ ಶವವಾಗಿ ಸಿಕ್ಕಿದ ಮೈಸೂರು ಯುವಕ; ಮೃತದೇಹಕ್ಕೆ ಕುಟುಂಬಸ್ಥರ ಪರದಾಟ
ಮೈಸೂರು, ಡಿಸೆಂಬರ್ 20: ಮಲೇಷ್ಯಾದಲ್ಲಿ ಖಾಸಗಿ ಕಂಪನಿಯ ಗೂಡ್ಸ್ ಹಡಗಿನಲ್ಲಿ ಕೆಲಸ ಮಾಡುತ್ತಿದ್ದ ಮೈಸೂರು ಮೂಲದ ಯುವಕ ಸಾವನ್ನಪ್ಪಿದ್ದು, ಸರಿಯಾದ ಮಾಹಿತಿ ಸಿಗದೆ ಕುಟುಂಬಸ್ಥರು ಪರದಾಡುತ್ತಿದ್ದಾರೆ.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಾನ್ವೆಂಟ್ ರಸ್ತೆಯ ನಿವಾಸಿಗಳಾದ ವೆಂಕಟೇಶ್ ಹಾಗೂ ಶೋಭಾ ದಂಪತಿಯ ಮಗ ಸುಮಂತ್ (22) ಎಂಬ ಯುವಕ ಮಲೇಷ್ಯಾದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಸುಮಂತ್ ಕಳೆದ 9 ತಿಂಗಳಿನಿಂದ ಮಲೇಷ್ಯಾದಲ್ಲಿ ಖಾಸಗಿ ಕಂಪನಿಯ ಗೂಡ್ಸ್ ಶಿಪ್ನಲ್ಲಿ ಕೆಲಸ ಮಾಡುತ್ತಿದ್ದರು.

ಮಲೇಷ್ಯಾ ಪತ್ರಿಕೆಯಲ್ಲಿ ಸುಮಂತ್ ಸಾವಿನ ವರದಿ
ನಿನ್ನೆ ಬೆಳಿಗ್ಗೆ ಅಲ್ಲಿನ ಅಧಿಕಾರಿಗಳು ಸುಮಂತ್ ಪೋಷಕರಿಗೆ ನಿಮ್ಮ ಮಗ ಕಾಣೆಯಾಗಿದ್ದಾನೆ ಎಂದು ಹೇಳಿದ್ದಾರೆ. ಅಲ್ಲಿನ ಸ್ಥಳೀಯ ಪೊಲೀಸ್ ಠಾಣೆಗೆ ಮಲೇಷ್ಯಾ ಭಾಷೆಯಲ್ಲಿ ದೂರು ನೀಡಿದ್ದ ಪ್ರತಿ ಕಳುಹಿಸಿದ್ದು, ಸ್ಥಳೀಯ ಪತ್ರಿಕೆಗಳಲ್ಲಿ ಕರ್ನಾಟಕದ ಸುಮಂತ್ ಎಂಬ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮೃತದೇಹದ ಶೋಧ ಕಾರ್ಯ ನಡೆಸುತ್ತಿರುವ ಕುರಿತ ವರದಿಯ ಪ್ರತಿಯನ್ನೂ ಕಳುಹಿಸಿದ್ದರು.
ಈ ಸುದ್ದಿಯಿಂದ ಆಘಾತಕ್ಕೊಳಗಾದ ಸುಮಂತ್ ಪೋಷಕರು ಇಲ್ಲಿನ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಒಂಬತ್ತು ತಿಂಗಳ ಹಿಂದೆ ಮಲೇಷ್ಯಾಗೆ ಹೋಗಿದ್ದ ಯುವಕ
ಮೊದಲು ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದ ಸುಮಂತ್ ಮಲೇಷ್ಯಾದಲ್ಲಿ 70 ಸಾವಿರ ರೂಪಾಯಿ ಸಂಬಳ ಪಡೆಯುವ ಆಸೆಯಿಂದ ಗೋವಾದ ಮನೀಶ್ ಪಟೇಲ್ ಎಂಬ ಏಜೆಂಟ್ ಮೂಲಕ ಮುಂಬೈನಲ್ಲಿ ಮರ್ಚೆಂಟ್ ನೇವಿ ತರಬೇತಿ ಪಡೆದಿದ್ದರು. ಏಜೆಂಟ್ ನೀಡಿದ ಭರವಸೆಯ ಮೇರೆಗೆ ತರಬೇತಿ ಹಾಗೂ ಉದ್ಯೋಗಕ್ಕಾಗಿ ಆತನಿಗೆ 3.35 ಲಕ್ಷ ರೂಪಾಯಿಗಳನ್ನು ನೀಡಲಾಗಿತ್ತು ಎಂದು ಶೋಭಾ ಆರೋಪಿಸಿದರು.

ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬ
ಆದರೆ ಕೆಲಸಕ್ಕೆ ಮಲೇಷ್ಯಾಕ್ಕೆ ತೆರಳಿದ ಬಳಿಕ ತಿಂಗಳಿಗೆ ಕೇವಲ 18 ಸಾವಿರ ರೂಪಾಯಿ ನೀಡುತಿದ್ದುದಲ್ಲದೆ ಉದ್ಯೋಗದಾತರು ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ. ಅಲ್ಲದೆ ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿರಲಿಲ್ಲ. ಇದನ್ನು ತಾಯಿಗೆ ಫೋನ್ ಮೂಲಕ ತಿಳಿಸಿದ್ದ ಸುಮಂತ್, ತಾನು ವಾಪಾಸ್ ಬರುವುದಾಗಿಯೂ ಹೇಳಿದ್ದ ಎಂದು ತಾಯಿ ಶೋಭಾ ಕಣ್ಣೀರಾದರು. ಸುಮಂತ್ ಜತೆ ತೆರಳಿದ ಕರ್ನಾಟಕದ ಇತರ ಯುವಕರನ್ನೂ ಬೇರೆ ಬೇರೆ ಕಡೆ ಕೆಲಸಕ್ಕೆ ಹಾಕಲಾಗಿದೆ. ಆತನ ಕಂಪೆನಿಯ ಮೇಲಧಿಕಾರಿಗಳು ಸಂಪರ್ಕಕ್ಕೂ ಸಿಗುತ್ತಿಲ್ಲ, ತನ್ನ ಅಣ್ಣ ಕೊಲೆ ಆಗಿರುವ ಶಂಕೆ ಇದೆ ಎಂದು ಸಹೋದರ ಹೇಮಂತ್ ಹೇಳಿದರು.

ಸಂಸದ ಪ್ರತಾಪ ಸಿಂಹ ಭೇಟಿಯಾದ ಕುಟುಂಬಸ್ಥರು
ಮಲೇಷ್ಯಾದಲ್ಲಿ ಕೆಲಸಕ್ಕೆ ಹೋದ ನನ್ನ ಮಗ ಸುಮಂತನ ಮೃತದೇಹವನ್ನು ಕೊಡಿಸಿ ಹಾಗೂ ಆತನ ಮಗನ ಹೇಗಾಯಿತು ಎಂಬುದನ್ನು ತನಿಖೆ ಮಾಡಿಸಿ ಎಂದು ಸಂಸದ ಪ್ರತಾಪ್ ಸಿಂಹರನ್ನು ಕುಟುಂಬಸ್ಥರು ಭೇಟಿಯಾಗಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸದ, ಎಲ್ಲಾ ರೀತಿಯ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications