Get Updates
Get notified of breaking news, exclusive insights, and must-see stories!

ಸಿಎಂ ಪ್ರೇರಣೆ; ಮೈಸೂರು ಜಿಪಂ ಅಧ್ಯಕ್ಷೆಯಿಂದಲೂ ಗ್ರಾಮ ವಾಸ್ತವ್ಯದ ಚಿಂತನೆ

ಮೈಸೂರು, ಜೂನ್ 27: ಸಿಎಂ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯದಿಂದ ಪ್ರೇರಣೆ ಪಡೆದು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಲು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಮ್ ಮುಂದಾಗಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜನರನ್ನು ನೇರವಾಗಿ ಕಂಡು ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಗ್ರಾಮ ವಾಸ್ತವ್ಯವನ್ನು ನಡೆಸಲು ತೀರ್ಮಾನಿಸಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ನನಗೆ ಪ್ರೇರಣೆ ಎಂದಿದ್ದಾರೆ.

ಈ ಹಿಂದೆ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ ಮಹೇಶ್ ಅವರು ಗ್ರಾಮ ವಾಸ್ತವ್ಯ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದರು. ಸಾ.ರಾ. ಮಹೇಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರ ಮಾರ್ಗದರ್ಶನ ಪಡೆದು ವಾಸ್ತವ್ಯ ಹೂಡಲಿದ್ದೇನೆ ಎಂದು ತಿಳಿಸಿದರು.

Mysuru zilla panchayath president Parimala planning for village stay

ಸಾ.ರಾ ನಂದೀಶ್ ಅವರು ಜಿಲ್ಲಾ ಪಂಚಾಯತ್ ಹಂಗಾಮಿ ಅಧ್ಯಕ್ಷರಾಗಿದ್ದ ವೇಳೆ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದರು. ಇದಕ್ಕೆ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂಬುದನ್ನು ಗಮನಿಸಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+