ಗೋ ಹತ್ಯೆ ನಿಷೇಧದಿಂದ ಮೃಗಾಲಯದ ಪ್ರಾಣಿಗಳಿಗೆ ಆಹಾರ ಸಮಸ್ಯೆ ಇಲ್ಲ
ಮೈಸೂರು, ಜನವರಿ 19: ಕರ್ನಾಟಕ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಅದರ ಪ್ರತ್ಯಕ್ಷ ಮತ್ತು ಪರೋಕ್ಷ ಪರಿಣಾಮ ಬಳಕೆದಾರರು, ರೈತರು, ಗೋ ಸಾಕಣೆದಾರರು ಎಲ್ಲರ ಮೇಲಷ್ಟೇ ಅಲ್ಲ, ಮೃಗಾಲಯದಲ್ಲಿರುವ ಪ್ರಾಣಿಗಳ ಮೇಲೂ ಆಗಿದೆ.
ಈ ನೂತನ ಕಾಯ್ದೆಯಿಂದಾಗಿ ಗೋ ಮಾಂಸದ ಕೊರತೆ ಎದುರಾದಲ್ಲಿ ಮೃಗಾಲಯದಲ್ಲಿನ ಮಾಂಸಾಹಾರಿ ಪ್ರಾಣಿಗಳಿಗೆ ಇನ್ನು ಮುಂದೆ ಕೋಳಿ ಮಾಂಸ ನೀಡಲಾಗುತ್ತಿದೆ. ಬ್ರಾಯ್ಲರ್ ಕೋಳಿಗಳನ್ನು ಮನುಷ್ಯನೇ ಸಾಕಾಣಿಕೆ ಮಾಡುವ ಕಾರಣ, ಅದರ ಬೆಳವಣಿಗೆಗೆ ಕೃತಕ ಪ್ರೋಟೀನ್, ಹಾರ್ಮೋನ್ ಬದಲಾವಣೆ ಔಷಧಗಳನ್ನು ನೀಡಲಾಗಿರುತ್ತದೆ. ಹಾಗಾಗಿ ಇದರ ಪರಿಣಾಮ ಝೂನಲ್ಲಿರುವ ಪ್ರಾಣಿಗಳ ಮೇಲೂ ಬೀರುವ ಸಾಧ್ಯತೆಗಳು ಇವೆ.
ಈ ಕುರಿತು ಒನ್ ಇಂಡಿಯಾ ಕನ್ನಡ ಪ್ರತಿನಿಧಿ ಜತೆ ಮಾತನಾಡಿದ ಪಶು ವೈದ್ಯ ಡಾ. ನಾಗರಾಜ್, ಪ್ರಾಣಿಗಳು ಬ್ರಾಯ್ಲರ್ ಚಿಕನ್ ಸೇವನೆ ಮಾಡುವುದಿರಿಂದ ಅದರ ಪರಿಣಾಮವು ದೀರ್ಘಾವಧಿಯಲ್ಲಿ ಗೊತ್ತಾಗಲಿದೆ ಎಂದರು.

ಪ್ರಾಣಿಗಳ ಆಯುಷ್ಯ ಹತ್ತರಿಂದ ಹನ್ನೆರಡು ವರ್ಷಗಳಾಗಿವೆ. ಯಾವುದೇ ಆಹಾರವಾಗಲಿ ಅದರ ಪರಿಣಾಮ ಧನಾತ್ಮಕವಾಗಿದೆಯೋ ಅಥವಾ ಋಣಾತ್ಮಕವಾಗಿದೆಯೋ ಎಂಬುದನ್ನು ತಿಳಿಯಲು ಕನಿಷ್ಠ ಒಂದರಿಂದ ಎರಡು ವರ್ಷ ಬೇಕಾಗುತ್ತದೆ. ಹಾಗಾಗಿ ಗೋಮಾಂಸದ ಬದಲಾಗಿ ಚಿಕನ್ ನೀಡುತ್ತಿರುವುದಿರಿಂದ ಒಳ್ಳೆಯದಾಗಿದೆಯೋ ಅಥವಾ ಕೆಟ್ಟದ್ದಾಗಿದೆಯೋ ಎಂಬುದನ್ನು ಈಗಲೇ ಹೇಳಲು ಬರುವುದಿಲ್ಲ ಎಂದು ಅವರು ಹೇಳಿದರು.
ನಿರ್ವಹಣೆ ಮಾಡಲು ಸಾಧ್ಯವಾಗದ ಗೋವುಗಳು, ಹದಿನಾಲ್ಕು ವರ್ಷ ದಾಟಿದ ಎಮ್ಮೆಗಳು, ಗಂಭೀರವಾಗಿ ಗಾಯಗೊಂಡಿರುವ ರಾಸುಗಳನ್ನು ವಧೆ ಮಾಡಿ, ಅದರ ಮಾಂಸವನ್ನು ಮೃಗಾಲಯದ ಪ್ರಾಣಿಗಳಿಗೆ ಪೂರೈಕೆ ಮಾಡಲು ಅನುಮತಿ ನೀಡಿದರೆ ಉತ್ತಮ ಎಂಬುದು ಪಶು ತಜ್ಞರ ಅಭಿಪ್ರಾಯವಾಗಿದೆ.
ಕುರಿ, ಮೇಕೆ, ಕೋಳಿ, ಹಂದಿ ಇತರೆ ಪ್ರಾಣಿಗಳ ಮಾಂಸಕ್ಕೆ ಹೋಲಿಸಿದರೆ ಗೋಮಾಂಸವು ಒಂದು ಸಮತೋಲನ ಆಹಾರವಾಗಿದೆ. ಇದರಲ್ಲಿ ಕ್ಯಾಲ್ಸಿಯಂ, ಪ್ರೋಟೀನ್ ಅಂಶಗಳು ಹೆಚ್ಚಾಗಿರುತ್ತವೆ. ವೈದ್ಯಕೀಯ ಕ್ಷೇತ್ರದಲ್ಲಿ ಗೋಮಾಂಸವನ್ನು ಬ್ಯಾಲೆನ್ಸ್ಡ್ ಡಯೆಟ್ ಫುಡ್ ಎಂದು ಹೇಳಲಾಗುತ್ತದೆ. ಕುರಿಗಿಂತ ಕಡಿಮೆ ಕೊಬ್ಬು ಗೋಮಾಂಸದಲ್ಲಿರುತ್ತದೆ.

ಈ ಕುರಿತು ಒನ್ ಇಂಡಿಯಾ ಕನ್ನಡ ಜತೆ ಮಾತನಾಡಿದ ಮೃಗಾಲಯದ ನಿರ್ದೇಶಕ ಅಜಿತ್ ಕುಲಕರ್ಣಿ, ನೂತನ ಗೋಹತ್ಯೆ ನಿಷೇಧ ಕಾಯ್ದೆಯಿಂದ ಮೃಗಾಲಯದ ಪ್ರಾಣಿಗಳಿಗೆ ಯಾವುದೇ ಆಹಾರ ಕೊರತೆ ಎದುರಾಗುವುದಿಲ್ಲ ಎಂದು ಹೇಳಿದರು. ಕೋಳಿ ತ್ವರಿತವಾಗಿ ಬೆಳೆಯಲು ಬಳಸಲಾಗುವ ರಸಾಯನಿಕಗಳಿಂದ ಮೃಗಾಲಯದ ಪ್ರಾಣಿಗಳ ಮೇಲೆ ಆಗುವ ಪರಿಣಾಮ ಕುರಿತು ಮಾತನಾಡಿದ ಅವರು ಮೃಗಾಲಯದಲ್ಲಿ ಸುಸಜ್ಜಿತ ಪ್ರಯೋಗಾಲಯವೂ, ವೈದ್ಯರೂ ಇದ್ದಾರೆ. ಸೂಕ್ತವಾಗಿ ಹಂತ ಹಂತದ ಅಮೂಲಾಗ್ರ ಪರೀಕ್ಷೆ ನಡೆಸಿದ ನಂತರವೇ ಕೋಳಿ ಮಾಂಸವನ್ನು ನೀಡಲಾಗುತ್ತದೆ ಎಂದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications