ಮೈಸೂರು ಮೃಗಾಲಯಕ್ಕೆ ಬಂದ ಚಿಂಪಾಂಜಿ, ಸಿಂಹಗಳು
ಮೈಸೂರು, ಜೂನ್ 28: ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಸಿಂಗಾಪುರ ಮೃಗಾಲಯದಿಂದ ಒಂದು ಹೆಣ್ಣು ಚಿಂಪಾಂಜಿ ಹಾಗೂ ಗುಜರಾತ್ ಮೃಗಾಲಯದಿಂದ ಭಾರತೀಯ ಸಿಂಹಗಳು ಆಗಮಿಸಿವೆ.
ಮೃಗಾಲಯದಲ್ಲಿರುವ ಒಂಟಿ ಪ್ರಾಣಿಗಳ ಜೊತೆಗೂಡಿಸುವಿಕೆ ಹಾಗೂ ಅನುಮೋದಿತ ಪ್ರಾಣಿ ಸಂಗ್ರಹಣಾ ಯೋಜನೆಯನ್ನು ಉತ್ಕೃಷ್ಟಗೊಳಿಸುವ ನಿಟ್ಟಿನಲ್ಲಿ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಹೆಣ್ಣು ಚಿಂಪಾಂಜಿ ಮೈಸೂರು ಮೃಗಾಲಯಕ್ಕೆ ಆಗಮಿಸಿದೆ. ಜೂ.26ರಂದು ಸಿಂಗಾಪುರದಿಂದ 14 ವರ್ಷ ವಯಸ್ಸಿನ ರ್ಹಾ' ಎಂಬ ಹೆಸರಿನ ಹೆಣ್ಣು ಚಿಂಪಾಂಜಿ ಬಂದಿದ್ದು, ಪ್ರಸ್ತುತ ಅದನ್ನು ಬಂಧನದಲ್ಲಿರಿಸಿ ನಿಗಾವಹಿಸಲಾಗಿದೆ.
ಗುಜರಾತಿನ ಸಕ್ಕರ್ ಬಾಗ್ ಮೃಗಾಲಯದಿಂದ ಬಂದಿದ್ದ 2 ಜೊತೆ ಭಾರತೀಯ ಸಿಂಹಗಳ ಪೈಕಿ ಒಂದು ಜೊತೆ ಸಿಂಹಗಳನ್ನು ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ. ಎರಡು ಪ್ರಾಣಿಗಳ ಬದಲಿಯಾಗಿ ಮೈಸೂರು ಮೃಗಾಲಯದಿಂದ ರಾಣಿ ಎಂಬ ಹೆಸರಿನ ಒಂದು ಹೆಣ್ಣು ಸ್ಲಾತ್ ಕರಡಿಯನ್ನು ಜೂ.26ರಂದು ಬೆಂಗಳೂರು ವಿಮಾನ ಮಾರ್ಗದ ಮೂಲಕ ಸಿಂಗಾಪುರ ಮೃಗಾಲಯಕ್ಕೆ ಕಳುಹಿಸಿಕೊಡಲಾಗಿದೆ.

ಮೃಗಾಲಯದ ಪ್ರಾಣಿ ಸಂಗ್ರಹಕ್ಕೆ ಸೇರ್ಪಡೆಗೊಂಡ ಹೆಣ್ಣು ಚಿಂಪಾಂಜಿ ಹಾಗೂ ಎರಡು ಸಿಂಹಗಳು ಮೃಗಾಲಯ ವೀಕ್ಷಣೆಗೆ ಬರುವವರನ್ನು ಆಕರ್ಷಿಸಲಿವೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications