ಮೈಸೂರು ಝೂ ಮಾಹಿತಿ ಕುರಿತಾಗಿ ಮೈ ಝೂ ಅಪ್ಲಿಕೇಷನ್ ಬಿಡುಗಡೆ
ಮೈಸೂರು, ಡಿಸೆಂಬರ್ 19 : ಪ್ರವಾಸಿಗರಿಗೆ ಮೃಗಾಲಯದ ಸಮಗ್ರ ಮಾಹಿತಿಯನ್ನು ತಿಳಿಸುವ ಮೈಜೂ ಅಪ್ಲಿಕೇಷನ್ ಒಂದನ್ನು ಇದೇ ಮೊದಲ ಬಾರಿಗೆ ಬಿಡುಗಡೆ ಮಾಡಲಾಯಿತು.
ಮೂಲತಃ ಮೈಸೂರಿನ ಕೆಸರೆ ನಿವಾಸಿಯಾದ, ಯುನೈಟೆಡ್ ಕಿಂಗ್ಡಂನ ಜೀನಿಯಸ್ ಲೀಡ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ನಿರ್ದೇಶಕರಾಗಿರುವ ದೀಪಕ್ ರಾಯ್ ಈ ಕುರಿತು ಮಾತನಾಡಿ, ಮೃಗಾಲಯದ ನಕ್ಷೆ ಹಾಗೂ ಸ್ಥಳ ವೀಕ್ಷಿಸಲು, ಯಾವ ಕಡೆಗಳಲ್ಲಿ ಯಾವ ಪ್ರಾಣಿ ಇದೆ ಎಂಬುದೂ ಸೇರಿದಂತೆ, ಆ ಪ್ರಾಣಿಯ ಸಮಗ್ರ ಮಾಹಿತಿಯೂ ಆ್ಯಪ್ನಲ್ಲಿ ಲಭ್ಯವಿರುತ್ತದೆ. ಅಲ್ಲದೇ ಮೃಗಾಲಯದಲ್ಲಿನ ಕುಡಿಯುವ ನೀರು, ಶೌಚಾಲಯ, ಊಟೋಪಚಾರ ವ್ಯವಸ್ಥೆ ಬಗ್ಗೆ ಮಾಹಿತಿ ದೊರೆಯಲಿದೆ ಎಂದು ವಿವರಿಸಿದರು.
ಆಪ್ ಮೂಲಕವೇ ಯಾವುದೇ ಬ್ಯಾಂಕ್ನ ಕಾರ್ಡ್ ಬಳಸಿ ಮೃಗಾಲಯ ಪ್ರವೇಶದ ಟಿಕೆಟ್ ಸಹ ಕೊಳ್ಳ ಬಹುದಾಗಿದೆ. ಅಲ್ಲದೆ ಮೊಬೈಲ್ ವಾಲೆಟ್ ಮೂಲಕ ಮೃಗಾಲಯ ದತ್ತು ಸ್ವೀಕಾರ ಯೋಜನೆಗೂ ಒಳಪಡಬಹುದಾಗಿದೆ.

ಜೀನಿಯಸ್ ಲೀಡ್ ಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 3.5 ಲಕ್ಷ ರೂ.ಗಳಲ್ಲಿ 'ಮೈಜೂ' ಆಪ್ ಮೈಸೂರು ಮೃಗಾಲಯಕ್ಕೆ ಆಗಮಿಸುವ ಪ್ರವಾಸಿಗರನ್ನು ದೃಷ್ಟಿಯಲ್ಲಿಟ್ಟುಕೊಂಡು ಅಭಿವೃದ್ಧಿ ಮಾಡಿದೆ. ಇದರ ಬಳಕೆ ಮೂಲಕ ಪ್ರವಾಸಿಗರು ಮೃಗಾಲಯಕ್ಕೆ ಭೇಟಿ ನೀಡಿದ ಸಂದರ್ಭ ಮೃಗಾಲಯದಲ್ಲಿರುವ ಅಗತ್ಯ ಸೌಲಭ್ಯಗಳ ನೆರವು ಪಡೆಯುವ ಜತೆಗೆ ಟಿಕೇಟ್ ಖರೀದಿ, ಮೃಗಾಲಯಕ್ಕೆ ವಂತಿಗೆ ನೀಡಲೂ ಸಾಧ್ಯವಾಗಲಿದೆ.
ಕರ್ನಾಟಕ ಮೃಗಾಲಯ ಪ್ರಾಧಿಕಾರ, ಚಾಮರಾಜೇಂದ್ರ ಮೃಗಾಲಯದ ವತಿಯಿಂದ ಸೋಮವಾರದಿಂದ ಆರಂಭಗೊಂಡ ನಾಲ್ಕು ದಿನಗಳ ಅಖಿಲ ಭಾರತ ಮೃಗಾಲಯ ನಿರ್ದೇಶಕರ ಸಮ್ಮೇಳನದಲ್ಲಿ 'ಮೈಜೂ' ಆ್ಯಪ್ನ್ನು ಬಿಡುಗಡೆ ಮಾಡಲಾಯಿತು. ದೀಪಕ್ ರಾಯ್ ಅವರು ಇದನ್ನು ಅಭಿವೃದ್ಧಿ ಮಾಡಿದ್ದು, ಇದರಲ್ಲಿ ಮೃಗಾಲಯಕ್ಕೆ ಆಗಮಿಸುವ ಪ್ರವಾಸಿಗರಿಗೆ ಮಾರ್ಗದರ್ಶನ ಮಾಡುವ ಪ್ರಯತ್ನ ಮಾಡಲಾಗಿದೆ.
ರಾತ್ರಿ ಸಫಾರಿಗೆ ಚಿಂತನೆ :
ರಾತ್ರಿ ಸಫಾರಿಗೆ ಯಾವುದೇ ಪ್ರಸ್ತಾವನೆ ಬಂದರೆ ಸಾಧಕ-ಬಾಧಕ ಪರಿಶೀಲಿಸಿ ಅನುಮತಿ ನೀಡಲು ಕೇಂದ್ರ ಮೃಗಾಲಯ ಪ್ರಾಧಿಕಾರ ಸಿದ್ಧವಿದೆ. ಈ ಹಿಂದೆ ಬನ್ನೇರುಘಟ್ಟ ಮೃಗಾಲಯಕ್ಕೆ ಅನುಮತಿ ನೀಡಲಾಗಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಇನ್ನೂ ಆನ್ ಜೂ ಮಾದರಿಯಲ್ಲಿ ಮೃಗಾಲಯಗಳ ಅಭಿವೃದ್ಧಿಗೆ ಚಿಂತನೆ ನಡೆದಿದೆ. ಪ್ರಾಣಿಗಳಿಗೆ ಸ್ವಾತಂತ್ರ್ಯ ನೀಡುವ ನಿಟ್ಟಿನಲ್ಲಿ ಆನ್ ಜೂ ಅತ್ಯಗತ್ಯವಾಗಿದೆ ಎನ್ನುತ್ತಾರೆ ಅಧಿಕಾರಿಗಳು. .
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications