ಹಾಡಿ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ನಾದಬ್ರಹ್ಮ ಹಂಸಲೇಖ
ಮಕ್ಕಳೊಂದಿಗೆ ಆಚರಿಸಿಕೊಂಡರು. ಹಾಡಿ ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸವಿದ ಹಂಸಲೇಖ ಸ್ಥಳದಲ್ಲೇ ಆದಿವಾಸಿ ಗಿರಿಜನ 10 ಮಕ್ಕಳನ್ನು ಉಚಿತ ಸಂಗೀತ ಅಭ್ಯಾಸಕ್ಕೆ ಆಯ್ಕೆ ಮಾಡಿದರು. ಸಂಗೀತದ ಬಗ್ಗೆ ಆಸಕ್ತಿ ಹೊಂದಿರುವ ಈ ಮಕ್ಕಳಿಗೆ ಉಚಿತವಾಗಿ ಸಂಗೀತ ಶಿಕ್ಷಣ ಕೊಡಲಾಗುವುದು ಎಂದು ತಿಳಿಸಿದರು.
ಆದಿವಾಸಿಗಳ ಮಕ್ಕಳು ಹುಟ್ಟು ಕಲಾವಿದರು: ಹಂಸಲೇಖ
ಕಳೆದ ವರ್ಷ ತಮ್ಮ 69ನೇ ಹುಟ್ಟುಹಬ್ಬದಲ್ಲಿ 69 ಮಂದಿ ಗಾಯಕರು ಹಾಡಿ ಹಾಡಿ ರಂಜಿಸಿದರು. ಈ ಬಾರಿ ಕಾಂಕ್ರಿಟ್ ನಾಡಿನಲ್ಲಿ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎಂದುಕೊಂಡು ಕಾಡಿನ ನಡುವೆ ಕಾಡು ಮಕ್ಕಳ ನಡುವೆ ಆಚರಿಸಿಕೊಳ್ಳೋಣ ಎಂದು ಇಲ್ಲಿಗೆ ತಮ್ಮ ಪತ್ನಿಯೊಂದಿಗೆ ಬಂದೆ. ಆದರೂ, ಕಾಯಕ್ರಮ ವ್ಯವಸ್ಥಾಪಕರು ಕೇಕ್ ತಂದಿದ್ದಾರೆ ಎಂದು ಖುಷಿ ಪಟ್ಟು ಕೇಕ್ ಕತ್ತರಿಸಿದರು. ಇಂದಿನ ಹುಟ್ಟುಹಬ್ಬ ತಮಗೆ ಮರೆಯಲಾಗದ ದಿನ ಎಂದು ಸ್ಮರಿಸಿದರು.
ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ವದಂತಿ; ಎಚ್ಡಿಕೆ ಸ್ಪಷ್ಟನೆ
''ಈ ಮಕ್ಕಳಿಗೆ ಸಂಗೀತ ಕಲಿಯಲು ಬೇಕಾಗುವ ಸಂಗೀತ ಉಪಕರಣಗಳು ಮತ್ತು ಟ್ಯಾಬ್ಲೆಟ್ ಕೊಡಲಾಗುವುದು. ಆದಿವಾಸಿಗಳ ಮಕ್ಕಳು ಹುಟ್ಟು ಕಲಾವಿದರು. ಅವರಲ್ಲಿರುವ ಆಸಕ್ತಿ ಗಮನಿಸಿ ಇಂದು 10 ಮಕ್ಕಳನ್ನು ಆಯ್ಕೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಮತ್ತಷ್ಟು ಮಕ್ಕಳನ್ನು ಆಯ್ಕೆ ಮಾಡಿಕೊಂಡು ಉಚಿತವಾಗಿ ಸಂಗೀತ ಶಿಕ್ಷಣ ನೀಡಲಾಗುವುದು,'' ಎಂದರು.
ಆನ್ಲೈನ್ ಸಂಗೀತ ಶಿಕ್ಷಣ
ಆಗಸ್ಟ್ 15ರಂದು ಆನ್ಲೈನ್ನಲ್ಲೇ ಉಚಿತ ಸಂಗೀತ ಶಿಕ್ಷಣ ಪ್ರಾರಂಭ ಮಾಡಲಿದ್ದು, ಆಸಕ್ತಿ ಇರುವ ಯಾರೂ ಬೇಕಾದರೂ ಸಂಗೀತವನ್ನು ಉಚಿತವಾಗಿ ಪಡೆಯಬಹುದು. ಅದಕ್ಕೆ ಈ ಯೋಜನೆಗೆ ''ದಯಾ'' ಎಂದು ಹೆಸರಿಡಲಾಗಿದೆ,''ಎಂದರು. ಲತಾ ಹಂಸಲೇಖ, ಬಿರ್ಸಾ ಮುಂಡಾ ಬುಡಕಟ್ಟು ಸಮಾಜಗಳ ಅಭಿವೃದ್ಧಿ ಹಾಗೂ ಸೇವಾಸಂಸ್ಥೆಯ ಅಧ್ಯಕ್ಷ ಶೇಖರ್ ಎಲೆಹುಂಡಿ, ಕಾರ್ಯದರ್ಶಿ ಬಸವನಗಿರಿ ಹಾಡಿಯ ಬಿ.ಎಂ. ನಟರಾಜು, ಸದರಿ ಸಂಘಟನೆಯ ಮಹಾಪೋಷಕ ಜಿ.ಎನ್. ದೇವದತ್ತ, ಬೂದನೂರು ವೆಂಕಟೇಶ್, ಚಕ್ಕೋಡನಹಳ್ಳಿ ಗ್ರಾಪಂ ಅಧ್ಯಕ್ಷ ಕಾಳಿಂಗೇಗೌಡ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾರಾಯಣಪ್ಪ, ಗಿರಿಜನ ಸಮನ್ವಯಾಧಿಕಾರಿ ನಾಗರಾಜು ಮತ್ತಿತತರು ಹಾಜರಿದ್ದರು.
ಮೈಸೂರು ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಹೊಸ ನಿಯಮ