ಶಬರಿಮಲೆಗೆ ಮಹಿಳೆಯರ ಪ್ರವೇಶ: ಏನಂದ್ರು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ?
ಮೈಸೂರು, ಜನವರಿ 03: ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸಿದ ವಿಚಾರದಲ್ಲಿ ನಡೆಯುತ್ತಿರುವ ಪರ-ವಿರೋಧ ಚರ್ಚೆಗಳು ಒಳ್ಳೆಯ ರೀತಿಯಲ್ಲಿ ಆಗುತ್ತಿಲ್ಲ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗ ಲಕ್ಷ್ಮಿಬಾಯಿ ಆತಂಕ ವ್ಯಕ್ತಪಡಿಸಿದರು.
ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಮಹಿಳಾ ಸಮಾನತೆ ಹೆಸರಿನಲ್ಲಿ ಒಂದು ಧರ್ಮದ ಆಚರಣೆ ಮೇಲೆ ಧಕ್ಕೆ ತರುವಂತಹ ಕೆಲಸಗಳಾಗುತ್ತಿವೆ. ಭಕ್ತಿ ಹೆಸರಿನಲ್ಲಿ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಚರ್ಚೆಯಾಗುವುದು ಬೇಸರ ಸಂಗತಿ.
ಭಾರತ ವಿವಿಧ ಸಂಪ್ರದಾಯ, ಆಚರಣೆಗಳ ದೇಶ. ಈ ಆಚರಣೆ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಧಾರ್ಮಿಕ ಕಟ್ಟುಪಾಡುಗಳನ್ನು ಈಗ ಮುರಿಯುವುದು ತಪ್ಪು. ಮಹಿಳಾ ಸ್ವಾತಂತ್ರ್ಯದ ಹೆಸರಿನಲ್ಲಿ ಒಂದು ಧಾರ್ಮಿಕ ಆಚರಣೆ ಮೇಲೆ ಆಕ್ರಮಣವಾದರೆ, ಅದು ಬೇರೆ ಧರ್ಮದ ಮೇಲೂ ವಿಸ್ತರಣೆಯಾಗುತ್ತದೆ.

ಇಸ್ಲಾಂ ಧರ್ಮದಲ್ಲಿ ಮಹಿಳೆಯರಿಗೆ ಇಂದಿಗೂ ಮಸೀದಿಗಳಿಗೆ ಪ್ರವೇಶವಿಲ್ಲ. ಅದು ಅವರ ಧಾರ್ಮಿಕ ಕಟ್ಟು ಪಾಡು. ಹಾಗೆಂದು ಆ ಧರ್ಮದ ಭಾವನೆಗೆ ಧಕ್ಕೆ ತರುವುದು ಯಾವ ಧರ್ಮ?. ಧರ್ಮದ ವಿಷಯ ಬಲು ಸೂಕ್ಷ್ಮ. ಪದೇ ಪದೆ ಧಾರ್ಮಿಕ ಪ್ರಚೋದನೆ ಸರಿಯಲ್ಲ.
ಪ್ರಜಾಪ್ರಭುತ್ವದಲ್ಲಿ ವ್ಯಕ್ತಿ ಸ್ವಾತಂತ್ರ್ಯ ಎಷ್ಟು ಮುಖ್ಯವೋ, ಅಷ್ಟೇ ಸ್ವಾತಂತ್ರ್ಯ ಧಾರ್ಮಿಕ ಕ್ಷೇತ್ರದಲ್ಲೂ ಇರಬೇಕು. ಅದು ಎಷ್ಟು ಪ್ರಮಾಣದಲ್ಲಿರಬೇಕು ಎಂಬುದನ್ನು ತಜ್ಞರು ನಿರ್ಧರಿಸಬೇಕು. ಮಹಿಳೆಯರಿಗೆ ಸ್ವಾತಂತ್ರ್ಯ ಎನ್ನುವುದನ್ನು ಈ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿ ನೋಡಬಾರದು.
ದಟ್ಟ ದಾರಿದ್ರ್ಯ ಸ್ಥಳದಲ್ಲಿ ವಾಸಿಸುವ ಮಹಿಳೆಗೂ ಸ್ವಾತಂತ್ರ್ಯ ಸಿಗುವ ಹಕ್ಕುಗಳ ಬಗ್ಗೆ ಇದೇ ಧಾಟಿಯಲ್ಲಿ ಮಾತನಾಡಬೇಕು ನಾಗ ಲಕ್ಷ್ಮಿಬಾಯಿ ತಿಳಿಸಿದರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications