ನಂದಿನಿ ಸಿಹಿ ಉತ್ಸವ: ರಿಯಾಯಿತಿ ಮಾರಾಟ ಆರಂಭ
ಮೈಸೂರು, ಡಿಸೆಂಬರ್ 22: ಕೆಎಂಎಫ್ ಹಾಗೂ ಮೈಮುಲ್ ಗ್ರಾಹಕರಿಗೆ ನಂದಿನಿ ಉತ್ಪನ್ನಗಳನ್ನು ಶೇ. 20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮೇಳವನ್ನು ಆಯೋಜಿಸಿದ್ದು, ಡಿ. 19ರಿಂದ ಜ.19ರವರೆಗೆ ನಂದಿನಿ ಸಿಹಿ ಉತ್ಸವ ನಡೆಯಲಿದೆ.
2023 ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಪ್ರತಿ ಬಾರಿಯಂತೆ ಈ ವರ್ಷವೂ ನಂದಿನಿ ಸಿಹಿ ಉತ್ಸವ ಆರಂಭಿಸಲಾಗಿದ್ದು, ಹಾಲು, ಮೊಸರು, ತುಪ್ಪ ಹೊರತುಪಡಿಸಿ 52 ಬಗೆಯ ನಂದಿನಿ ಸಿಹಿ ಉತ್ಪನ್ನಗಳ ದರದಲ್ಲಿ ಮೈಸೂರಿನಲ್ಲಿ ಶೇ.20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ.
ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಅವರು ಕೆಆರ್ಎಸ್ ರಸ್ತೆಯಲ್ಲಿರುವ ನಂದಿನಿ ಪಾರ್ಲರ್ ನಲ್ಲಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಕೆಎಂಎಫ್ ಹಾಗೂ ಮೈಮುಲ್ ವತಿಯಿಂದ ಕಳೆದ 7 ವರ್ಷದಿಂದ 'ನಂದಿನಿ ಸಿಹಿ ಉತ್ಸವ' ನಡೆಸಿ, ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ನಂದಿನಿ ಉತ್ಪನ್ನಗಳನ್ನು ನೀಡಲಾಗುತ್ತಿದೆ. ಹಿಂದಿನ ವರ್ಷಗಳಲ್ಲಿ ಶೇ.10ರಷ್ಟು ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುತ್ತಿತ್ತು. ಈ ಬಾರಿ ಶೇ.20ರಷ್ಟು ರಿಯಾಯಿತಿ ದರದಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.

ನಂದಿನಿ ಉತ್ಪನ್ನಗಳ ತಯಾರಿಕೆಯಲ್ಲಿ ಯಾವುದೇ ರಾಸಾಯನಿಕ ವಸ್ತುಗಳನ್ನು ಬಳಸುವುದಿಲ್ಲ. ಖಾಸಗಿ ಸಂಸ್ಥೆಗಳ ತಯಾರಿಸುವ ಉತ್ಪನ್ನಗಳಲ್ಲಿ ರಾಸಾಯನಿಕ ವಸ್ತು ಬಳಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ವಿಶ್ವಾಸಾರ್ಹವಾದ ನಂದಿನಿ ಉತ್ಪನ್ನಗಳನ್ನೇ ಬಳಸಬೇಕು. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಾದರೆ, ಅದರಿಂದ ರೈತರಿಗೆ ಲಾಭವಾಗಲಿದೆ. ಆ ನಿಟ್ಟಿನಲ್ಲಿ ನಮ್ಮ ರೈತರ ಹೈನುಗಾರಿಕೆಯಿಂದ ಉತ್ಪತ್ತಿಯಾಗುವ ಶುದ್ಧ ಹಾಲಿನಿಂದ ತಯಾರಾಗುವ ನಂದಿನಿ ಉತ್ಪನ್ನಗಳನ್ನೇ ಹೆಚ್ಚಾಗಿ ಬಳಸುವಂತೆ ಮನವಿ ಮಾಡಿದರು.
ಮಾರುಕಟ್ಟೆಯಲ್ಲಿ ನಂದಿನಿ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದೆ. ಇದರಿಂದ ಕೆಎಂಎಫ್ ವತಿಯಿಂದ ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದೆ. ಈ ಬಾರಿ ನಂದಿನಿ ಸಿಹಿ ಉತ್ಸವದಲ್ಲಿ 52 ಪದಾರ್ಥಗಳನ್ನು ಶೇ.20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈಗಾಗಲೇ ಮೈಮುಲ್ ವತಿಯಿಂದ ಜಿಲ್ಲೆಯಲ್ಲಿ ಮಾರುಕಟ್ಟೆ ಅಭಿವೃದ್ಧಿಪಡಿ ಸಲಾಗಿದೆ. ಗ್ರಾಹಕರಿಗೆ ಸುಲಭವಾಗಿ ನಂದಿನಿ ಉತ್ಪನ್ನ ತಲುಪಿ ಸಲು ಕ್ರಮ ಕೈಗೊಳ್ಳಲಾಗಿದ್ದು, ನಗರ ಪ್ರದೇಶ ಮಾತ್ರವಲ್ಲದೆ ಗ್ರಾಮೀಣ ಭಾಗದಲ್ಲೂ ನಂದಿನಿ ಪಾರ್ಲರ್ ಹಾಗೂ ಗೆಲಾಕ್ಸಿ ತೆರೆಯಲಾಗಿದೆ. ಎಲ್ಲಾ ಕೇಂದ್ರಗಳಲ್ಲೂ ಗ್ರಾಹಕರು ಸಿಹಿ ಉತ್ಸವದ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications