ನಂಜನಗೂಡು ಉ.ಚು: 'ತೆನೆ' ಬಿಟ್ಟು 'ಕೈ' ಹಿಡಿದ ಕಳಲೆ ಕೇಶವಮೂರ್ತಿ
ಮೈಸೂರು, ಫೆಬ್ರವರಿ 8: ನಿರೀಕ್ಷೆಯಂತೆ ನಂಜನಗೂಡು ಜೆಡಿಎಸ್ ನಾಯಕ ಕಳಲೆ ಎನ್ ಕೇಶವಮೂರ್ತಿ ಜಾತ್ಯಾತೀತ ಜನತಾದಳಕ್ಕೆ ಗುಡ್ ಬೈ ಹೇಳಿದ್ದಾರೆ. 'ತೆನೆ' ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಅಧಿಕೃತ ರಾಜೀನಾಮೆ ನೀಡಿರುವ ಕಳಲೆ 'ಕೈ' ಪಕ್ಷವನ್ನು ಅಪ್ಪಿಕೊಳ್ಳಲು ಹೊರಟಿದ್ದಾರೆ.
ಬುಧವಾರ ಜನತಾದಳದ ಪ್ರಾಥಮಿಕ ಸದಸ್ಯತ್ವ ಹಾಗೂ ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಕಳಲೆ ರಾಜೀನಾಮೆ ಸಲ್ಲಿಸಿದರು. ಮೈಸೂರು ಜಿಲ್ಲಾ ಜೆಡಿಎಸ್ ಗ್ರಾಮಾಂತರ ಅಧ್ಯಕ್ಷ ನರಸಿಂಹಸ್ವಾಮಿ ಅವರಿಗೆ ನಂಜನಗೂಡು ಜೆಡಿಎಸ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ಅವರು ತಮ್ಮ ಮೂರು ದಶಕಕ್ಕೂ ಅಧಿಕ ಕಾಲದ ಜೆಡಿಎಸ್ ಜತೆಗಿನ ಭಾಂದವ್ಯ ಜ್ಞಾಪಿಸಿಕೊಂಡ ಒಂದು ಕ್ಷಣ ಭಾವುಕರಾದರು.[ನಂಜನಗೂಡು ಉ.ಚು: ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಶವಮೂರ್ತಿ ಬಹುತೇಕ ಖಚಿತ]

ಕಳೆದ ಕೆಲವು ದಿನಗಳಿಂದ ಕಳಲೆ ಕೇಶವಮೂರ್ತಿ ಕಾಂಗ್ರೆಸಿಗೆ ಸೇರಲಿದ್ದಾರೆ ಎಂಬ ಸುದ್ದಿ ಓಡಾಡುತ್ತಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಎಚ್.ಸಿ ಮಹದೇವಪ್ಪ ಮನೆಯಲ್ಲಿ ಕಳಲೆ ಏಕಾಏಕಿ ಪ್ರತ್ಯಕ್ಷರಾಗಿದ್ದರು. ಬೆನ್ನಿಗೆ ನಿನ್ನೆ (ಫೆ. 7)ರಂದು ಬೆಂಬಲಿಗರ ಸಭೆ ಕರೆದಿದ್ದ ಕಳಲೆ ಕೇಶವಮೂರ್ತಿ ಜೆಡಿಎಸ್ ಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದರು.[ನಂಜನಗೂಡಲ್ಲಿ ಕಾಂಗ್ರೆಸಿಗೆ ಅಭ್ಯರ್ಥಿಗಳೇ ಇಲ್ವಾ? ಎಚ್.ವಿಶ್ವನಾಥ್ ಪ್ರಶ್ನೆ]
ಇದೀಗ ಅವರು ಅಧಿಕೃತವಾಗಿ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ದಿನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮ್ಮುಖದಲ್ಲಿ ಕಳಲೆ ಕಾಂಗ್ರೆಸಿಗೆ ಸೇರಲಿದ್ದಾರೆ. ಅವರು ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications