ಜಗ್ಗೇಶ್ ಪ್ರಚಾರಕ್ಕೂ ಮೊದಲು ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ
ನಂಜನಗೂಡು, ಮಾರ್ಚ್ 31: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯ ಕಣ ರಂಗೇರಿದೆ. ಇದರ ಮಧ್ಯೆ ಇಂದು ರಾಜೂರಿನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲುತೂರಾಟ ನಡೆದಿದೆ.
ಈ ನಡುವೆ ನಂಜನಗೂಡಿನಲ್ಲಿ ಉಪಚುನಾವಣೆ ಹಿನ್ನಲೆಯಲ್ಲಿ ಪ್ರಚಾರದ ಅಬ್ಬರದ ನಡುವೆ[ಉಪಚುನಾವಣೆ ರಾಜಕೀಯ: ಧರ್ಮ ಸಂಕಟದಲ್ಲಿ ಸಿಲುಕಿದರೇ ಸುತ್ತೂರು ಶ್ರೀಗಳು]

ಉಭಯ ಕಾರ್ಯಕರ್ತರ ನಡುವಿನ ಕಲ್ಲುತೂರಾಟದಲ್ಲಿ ಬಸವರಾಜು ಹಾಗೂ ಚಿನ್ನಮ್ಮ ಎಂಬ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ನಂಜನಗೂಡು ಆಸ್ಪತ್ರೆಗೆ ದಾಖಲಿಸಲಾಗಿದೆ.[ಮೈಸೂರಿನಲ್ಲಿ ಮುಖ್ಯಮಂತ್ರಿ: ಉಪಚುನಾವಣಾ ಕಣಕ್ಕೆ ಬಂತು ಕಳೆ]
ಇಲ್ಲಿ ನಟ ಜಗ್ಗೇಶ್ ಚುನಾವಣಾ ಪ್ರಚಾರ ಸಭೆ ನಡೆಸಬೇಕಾಗಿತ್ತು. ಜಗ್ಗೇಶ್ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಕೆಲ ಸಮಯದ ಮೊದಲು ಹಿಂಸಾಚಾರ ಸಂಭವಿಸಿದೆ.
ಘಟನೆಗೆ ಸಂಬಂಧಿಸಿದಂತೆ ಹುಲ್ಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications