ನಂಜನಗೂಡು ದೊಡ್ಡ ಜಾತ್ರೆ; ಅರ್ಧಕ್ಕೆ ನಿಂತ ಪಾರ್ವತಿ ದೇವಿ ರಥ
ಮೈಸೂರು, ಮಾರ್ಚ್ 26; ನಂಜನಗೂಡಿನಲ್ಲಿ ಸರಳವಾಗಿ ನಡೆದ ಮಹಾರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಪಾರ್ವತಿ ದೇವಿಯ ರಥ ಅರ್ಧಕ್ಕೆ ನಿಂತ ಘಟನೆ ನಡೆಯಿತು.
ಐತಿಹಾಸಿಕ ಪ್ರವಾಸಿ ತಾಣವಾದ ನಂಜನಗೂಡಿನಲ್ಲಿ ಶುಕ್ರವಾರ ನಡೆದ ನಂಜುಂಡೇಶ್ವರ ಸ್ವಾಮಿಯ ಮಹಾರಥೋತ್ಸವದ ಹಿನ್ನೆಲೆಯಲ್ಲಿ, ಪಾರ್ವತಿದೇವಿ ಅಮ್ಮನವರ ರಥೋತ್ಸವ ಸಹ ನೆರವೇರಿಸಲಾಯಿತು.
ಆದರೆ, ರಥೋತ್ಸವ ಪ್ರಾರಂಭವಾದ ಕೆಲವೇ ಹೊತ್ತಿನಲ್ಲಿ ಪಾರ್ವತಿ ದೇವಿಯನ್ನು ಹೊತ್ತು ಸಾಗುತ್ತಿದ್ದ ರಥದ ಬಲ ಭಾಗದ ಮುಂದಿನ ಚಕ್ರದ ಒಂದು ಭಾಗ ತುಂಡಾಗಿದೆ. ಈ ವೇಳೆ ತುಂಡಾದ ರಥದ ಚಕ್ರದ ಪುಡಿಯನ್ನು ಭಕ್ತರು ಆಚೆ ತೆಗೆದರು, ರಥವನ್ನು ಮುಂದೆ ಎಳೆಯಲಾರದ ಸ್ಥಿತಿ ತಲುಪಿತು.

ಈ ನಡುವೆ ಚಕ್ರ ಪುಡಿಯಾದ ರಥವನ್ನು ಮುಂದೆ ಎಳೆಯಲು ಭಕ್ತರು ಸಾಕಷ್ಟು ಪ್ರಯತ್ನ ನಡೆಸಿದರು ಯಾವುದೇ ಪ್ರಯೋಜನ ಆಗಲಿಲ್ಲ. ಹೀಗಾಗಿ ಪ್ರದಕ್ಷಿಣೆ ಮುಗಿಯುವ ಮುನ್ನವೇ ತೇರಿನಿಂದ ಅಮ್ಮನವರ ವಿಗ್ರಹವನ್ನು ಅರ್ಚಕರು ಕೆಳಗಿಳಿಸಿದರು.
ನಂತರ ಮಂಟಪದ ಮಾದರಿ ಲಾಲ್ಬಾಗ್ ತಂದು ಅದರಲ್ಲಿ ಪಾರ್ವತಿ ದೇವಿಯ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿದ ಅರ್ಚಕರು, ಲಾಲ್ಬಾಗ್ನಲ್ಲೇ ಪಾರ್ವತಿ ಅಮ್ಮನ ಮೆರವಣಿಗೆ ಮುಂದುವರಿಸಿ, ರಥೋತ್ಸವ ಪೂರ್ಣಗೊಳಿಸಿದರು.
ಕೊರೊನಾ ಸೋಂಕಿನ ಆತಂಕದಿಂದಾಗಿ ಮೈಸೂರು ಜಿಲ್ಲಾಡಳಿತ ಗೌತಮ ಮಹಾರಥೋತ್ಸವ ಆಚರಿಸಲು ಸಮ್ಮತಿ ನೀಡಲು ನಿರಾಕರಿಸಿತ್ತು. ಹೀಗಾಗಿ ಚಿಕ್ಕ ತೇರಿನಲ್ಲೇ ಶ್ರೀಕಂಠೇಶ್ವರನ ರಥೋತ್ಸವ ನಡೆಸಲಾಯಿತು.
ಕೋವಿಡ್-19 ಸೋಂಕಿನ ಕಾರಣಕ್ಕೆ ಹೆಚ್ಚಿನ ಭಕ್ತರು ಸೇರುವುದಕ್ಕೂ ಕಡಿವಾಣ ಹಾಕಿದ್ದರ ಪರಿಣಾಮ, ಕಡಿಮೆ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸರಳವಾಗಿ ನೆರವೇರಿತು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications