ನಂಜನಗೂಡು ದೊಡ್ಡ ಜಾತ್ರೆ; ಅರ್ಧಕ್ಕೆ ನಿಂತ ಪಾರ್ವತಿ ದೇವಿ ರಥ
ಮೈಸೂರು, ಮಾರ್ಚ್ 26; ನಂಜನಗೂಡಿನಲ್ಲಿ ಸರಳವಾಗಿ ನಡೆದ ಮಹಾರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಪಾರ್ವತಿ ದೇವಿಯ ರಥ ಅರ್ಧಕ್ಕೆ ನಿಂತ ಘಟನೆ ನಡೆಯಿತು.
ಐತಿಹಾಸಿಕ ಪ್ರವಾಸಿ ತಾಣವಾದ ನಂಜನಗೂಡಿನಲ್ಲಿ ಶುಕ್ರವಾರ ನಡೆದ ನಂಜುಂಡೇಶ್ವರ ಸ್ವಾಮಿಯ ಮಹಾರಥೋತ್ಸವದ ಹಿನ್ನೆಲೆಯಲ್ಲಿ, ಪಾರ್ವತಿದೇವಿ ಅಮ್ಮನವರ ರಥೋತ್ಸವ ಸಹ ನೆರವೇರಿಸಲಾಯಿತು.
ಆದರೆ, ರಥೋತ್ಸವ ಪ್ರಾರಂಭವಾದ ಕೆಲವೇ ಹೊತ್ತಿನಲ್ಲಿ ಪಾರ್ವತಿ ದೇವಿಯನ್ನು ಹೊತ್ತು ಸಾಗುತ್ತಿದ್ದ ರಥದ ಬಲ ಭಾಗದ ಮುಂದಿನ ಚಕ್ರದ ಒಂದು ಭಾಗ ತುಂಡಾಗಿದೆ. ಈ ವೇಳೆ ತುಂಡಾದ ರಥದ ಚಕ್ರದ ಪುಡಿಯನ್ನು ಭಕ್ತರು ಆಚೆ ತೆಗೆದರು, ರಥವನ್ನು ಮುಂದೆ ಎಳೆಯಲಾರದ ಸ್ಥಿತಿ ತಲುಪಿತು.

ಈ ನಡುವೆ ಚಕ್ರ ಪುಡಿಯಾದ ರಥವನ್ನು ಮುಂದೆ ಎಳೆಯಲು ಭಕ್ತರು ಸಾಕಷ್ಟು ಪ್ರಯತ್ನ ನಡೆಸಿದರು ಯಾವುದೇ ಪ್ರಯೋಜನ ಆಗಲಿಲ್ಲ. ಹೀಗಾಗಿ ಪ್ರದಕ್ಷಿಣೆ ಮುಗಿಯುವ ಮುನ್ನವೇ ತೇರಿನಿಂದ ಅಮ್ಮನವರ ವಿಗ್ರಹವನ್ನು ಅರ್ಚಕರು ಕೆಳಗಿಳಿಸಿದರು.
ನಂತರ ಮಂಟಪದ ಮಾದರಿ ಲಾಲ್ಬಾಗ್ ತಂದು ಅದರಲ್ಲಿ ಪಾರ್ವತಿ ದೇವಿಯ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿದ ಅರ್ಚಕರು, ಲಾಲ್ಬಾಗ್ನಲ್ಲೇ ಪಾರ್ವತಿ ಅಮ್ಮನ ಮೆರವಣಿಗೆ ಮುಂದುವರಿಸಿ, ರಥೋತ್ಸವ ಪೂರ್ಣಗೊಳಿಸಿದರು.
ಕೊರೊನಾ ಸೋಂಕಿನ ಆತಂಕದಿಂದಾಗಿ ಮೈಸೂರು ಜಿಲ್ಲಾಡಳಿತ ಗೌತಮ ಮಹಾರಥೋತ್ಸವ ಆಚರಿಸಲು ಸಮ್ಮತಿ ನೀಡಲು ನಿರಾಕರಿಸಿತ್ತು. ಹೀಗಾಗಿ ಚಿಕ್ಕ ತೇರಿನಲ್ಲೇ ಶ್ರೀಕಂಠೇಶ್ವರನ ರಥೋತ್ಸವ ನಡೆಸಲಾಯಿತು.
ಕೋವಿಡ್-19 ಸೋಂಕಿನ ಕಾರಣಕ್ಕೆ ಹೆಚ್ಚಿನ ಭಕ್ತರು ಸೇರುವುದಕ್ಕೂ ಕಡಿವಾಣ ಹಾಕಿದ್ದರ ಪರಿಣಾಮ, ಕಡಿಮೆ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸರಳವಾಗಿ ನೆರವೇರಿತು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications