ಒಂದು ತಿಂಗಳಲ್ಲೇ ಕೋಟ್ಯಾಧೀಶ್ವರನಾದ ನಂಜುಂಡೇಶ್ವರ
ಮೈಸೂರು, ಮಾರ್ಚ್ 3: ಕೊರೊನಾ ಲಾಕ್ ಡೌನ್ ನಂತರ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಆಗಮಿಸುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಭಕ್ತರು ನಂಜುಂಡೇಶ್ವರನಿಗೆ ನೀಡುತ್ತಿರುವ ಕಾಣಿಕೆ ಮೊತ್ತದಲ್ಲೂ ಏರಿಕೆ ದಾಖಲಾಗಿದ್ದು, ಒಟ್ಟು 1,11,64,033 ಕೋಟಿ ರೂಪಾಯಿ ಸಂಗ್ರಹಿಸುವ ಮೂಲಕ ನಂಜುಂಡೇಶ್ವರ ಒಂದೇ ತಿಂಗಳಿನಲ್ಲಿ ಮತ್ತೆ ಕೋಟ್ಯಧಿಪತಿಯಾಗಿದ್ದಾನೆ.
ಮಂಗಳವಾರ (ಮಾ.2) ರಂದು ನಂಜನಗೂಡಿನ ತಹಶೀಲ್ದಾರ್ ಶರ್ಮಿಳಾ ದತ್ತಿ ಅವರ ಸಮ್ಮುಖದಲ್ಲಿ ನಂಜುಂಡೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸಿಬ್ಬಂದಿ, ನಂಜನಗೂಡಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿಗಳು 24 ಹುಂಡಿಗಳಲ್ಲಿನ ಹಣವನ್ನು ಎಣಿಕೆ ಮಾಡಿದ್ದಾರೆ.
ವಿವಿಧ ಮುಖಬೆಲೆಯ 3,24,550 ರೂ.ನಾಣ್ಯ ಸೇರಿದಂತೆ 1,11,64,033 ಕೋಟಿ ರೂಪಾಯಿ, ಅಲ್ಲದೇ 105 ಗ್ರಾಂ ಚಿನ್ನ, 2 ಕೆಜಿ 250 ಗ್ರಾಂ ಬೆಳ್ಳಿ, 6 ವಿದೇಶಿ ಕರೆನ್ಸಿಗಳು, ನಿಷೇಧಿತ ನೋಟುಗಳಾದ 1 ಸಾವಿರ ಮುಖಬೆಲೆಯ 11 ನೋಟು, 500 ಮುಖಬೆಲೆ 87 ನೋಟುಗಳನ್ನು ಭಕ್ತರು ಹಾಕಿದ್ದಾರೆ.

ಕಳೆದು ತಿಂಗಳು ಹುಂಡಿ ಏಣಿಕೆ ಮಾಡಿದಾಗಲೂ ನಂಜುಂಡೇಶ್ವರನ ಹುಂಡಿಯಲ್ಲಿ ಒಂದು ಕೋಟಿಗೂ ಮಿಕ್ಕಿದ ಹಣ ಸಂಗ್ರಹವಾಗಿತ್ತು. ಮುಜರಾಯಿ ಇಲಾಖೆಗೆ ಈ ದೇವಾಲಯ ಒಳಪಟ್ಟಿದೆ. ತಹಶೀಲ್ದಾರ ಅವರ ನೇತೃತ್ವದಲ್ಲಿ ಹುಂಡಿ ಕಾಣಿಕೆ ಎಣಿಕಾ ಮಾಡಲಾಯಿತು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications