ರಾಹುಲ್ಗೆ ಜೆಡಿಎಸ್, ರಾಜ್ಯದ ಜನರ ಮೇಲೆ ನಂಬಿಕೆ ಇಲ್ಲ : ಮೋದಿ
ಮೈಸೂರು, ಏಪ್ರಿಲ್ 09 : 'ರಾಹುಲ್ ಗಾಂಧಿ ಅವರಿಗೆ ಕರ್ನಾಟಕದ ಜನರು ಮತ್ತು ಜೆಡಿಎಸ್ ಪಕ್ಷದ ಮೇಲೆ ನಂಬಿಕೆ ಇಲ್ಲ. ಆದ್ದರಿಂದ, ರಾಜ್ಯದಲ್ಲಿ ಅವರದ್ದೇ ಸರ್ಕಾರವಿದ್ದರೂ ಕೇರಳದಲ್ಲಿ ಹೋಗಿ ಚುನಾವಣೆಗೆ ನಿಂತಿದ್ದಾರೆ' ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದರು.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಉದ್ದೇಶಿಸಿ ಮಾತನಾಡಿದರು. 'ಕರ್ನಾಟಕದ ಮೈತ್ರಿ ಸರ್ಕಾರ ರೈತರ ಸಾಲಮನ್ನಾ ಹೆಸರಿನಲ್ಲಿ ಹಣ ಲೂಟಿ ಮಾಡುತ್ತಿದೆ' ಎಂದು ಆರೋಪಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಪ್ರವಾಸದಲ್ಲಿದ್ದಾರೆ. ಮಂಗಳವಾರ ಅವರು ಚಿತ್ರದುರ್ಗದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಬಳಿಕ ವಿಶೇಷ ವಿಮಾಣದ ಮೂಲಕ ಮೈಸೂರಿಗೆ ಆಗಮಿಸಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡರು.
ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?
ಮೈಸೂರು-ಕೊಡಗು, ಚಾಮರಾಜನಗರ, ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿದರು. ಮೈಸೂರು-ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹ, ಚಾಮರಾಜನಗರ ಕ್ಷೇತ್ರದಿಂದ ವಿ.ಶ್ರೀನಿವಾಸ ಪ್ರಸಾದ್, ಹಾಸನ ಕ್ಷೇತ್ರದಿಂದ ಎ.ಮಂಜು ಬಿಜೆಪಿ ಅಭ್ಯರ್ಥಿಗಳು....