ಮೈಸೂರಿನಲ್ಲಿ ಎನ್ ಐಇ ವಿಶ್ವವಿದ್ಯಾಲಯ ಸ್ಥಾಪನೆ:ಡಿಎ ಪ್ರಸನ್ನ ನೂತನ ಕುಲಪತಿ
ಮೈಸೂರು, ಮಾರ್ಚ್ 11: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ (ಎನ್ ಐಇ) ಸಂಸ್ಥೆಯು ಎನ್ಐಇ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದು, ಸಂಸ್ಥಾಪಕ ಕುಲಪತಿಯನ್ನಾಗಿ ಡಿ.ಎ.ಪ್ರಸನ್ನ ಅವರನ್ನು ನೇಮಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಶ್ರೀನಾಥ್ ಬಾಟ್ನಿ ತಿಳಿಸಿದರು.
ಮೈಸೂರಿನಲ್ಲಿ ಭಾನುವಾರ (ಮಾರ್ಚ್.10) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರನ್ನು ಕೇಂದ್ರವಾಗಿಟ್ಟುಕೊಂಡು ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುತ್ತಿದೆ. ನಂಜನಗೂಡು ತಾಲ್ಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿನ ಅಡಕನಹಳ್ಳಿ ಗ್ರಾಮದ ಬಳಿ 50 ಎಕರೆ ಪ್ರದೇಶದಲ್ಲಿ ವಿ.ವಿ ತಲೆಎತ್ತಲಿದೆ. ಒಟ್ಟು 200 ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ನಡೆಯಲಿದ್ದು, ಭೂಮಿ ಖರೀದಿಗಾಗಿ 45 ಕೋಟಿ ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಡಿ.ಎ.ಪ್ರಸನ್ನ ಅವರು ಎನ್ಐಇ ಕಾಲೇಜಿನ ಹಿರಿಯ ವಿದ್ಯಾರ್ಥಿ. ಇವರು 1968ರಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಬಳಿಕ ವಿಪ್ರೊ ಉಪಾಧ್ಯಕ್ಷರಾಗಿ, ಮಣಿ ಪಾಲ್ ವಿಶ್ವವಿದ್ಯಾಲಯದ ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ವಿಭಾಗದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸನ್ನ ಯಶಸ್ವಿ ಉದ್ಯಮಿಯೂ ಆಗಿದ್ದು, ನಮ್ಮ ವಿಶ್ವವಿದ್ಯಾಲಯವನ್ನು ಸಮರ್ಥವಾಗಿ ನಡೆಸಿಕೊಂಡು ಹೋಗಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.

ನಂತರ ಪ್ರಸನ್ನ ಅವರು ಮಾತನಾಡಿ, ವಿ.ವಿ.ಯ ಕಾಮಗಾರಿಗಳು 3 ವರ್ಷದೊಳಗೆ ಮುಗಿಯಲಿವೆ. ಈಗಾಗಲೇ ಎನ್ಐಇಯಲ್ಲಿ 400ಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ. ಸರ್ಕಾರದ ನಿಯಮಾವಳಿಗಳಿಗೆ ತಕ್ಕಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಭರ್ತಿ ಮಾಡಲಾಗುವುದು. ಅಂತೆಯೇ, ನಮ್ಮ ವಿ.ವಿ.ಯು ಬೋಧನೆ, ಸಂಶೋಧನೆ ಹಾಗೂ ಪ್ರಕಟಣೆಗೆ ಹೆಚ್ಚಿನ ಆದ್ಯತೆ ನೀಡಲಿದೆ. ಸದ್ಯಕ್ಕೆ ಎಂಜಿನಿಯರಿಂಗ್ ಹಾಗೂ ವಿಜ್ಞಾನ ಸಂಬಂಧಿತ ಕೋರ್ಸುಗಳು ಶುರುವಾಗಲಿವೆ. ಬಳಿಕ ವಾಣಿಜ್ಯ ಹಾಗೂ ಮಾನವಿಕ ವಿಷಯಗಳನ್ನೂ ಪರಿಚಯಿಸುವ ಚಿಂತನೆಯಿದೆ ಎಂದು ಮಾಹಿತಿ ನೀಡಿದರು.

ಮುಂದಿನ 10 ವರ್ಷಗಳಲ್ಲಿ ಎನ್ಐಇ ವಿ.ವಿ.ಯನ್ನು ದೇಶದ ಮುಂಚೂಣಿ ವಿ.ವಿ.ಗಳ ಸಾಲಿಗೆ ಸೇರಿಸಬೇಕು ಎಂಬುದು ನಮ್ಮ ಗುರಿ. ಇದಕ್ಕಾಗಿ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುವುದು ಎಂದು ಪ್ರಸನ್ನ ಅವರು ತಿಳಿಸಿದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications