ಅಕ್ಟೋಬರ್ 1 ರಿಂದ ರಾಷ್ಟ್ರವ್ಯಾಪ್ತಿ ಲಾರಿ, ಟ್ರಕ್ ಮುಷ್ಕರ
ಮೈಸೂರು, ಸೆ. 27: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ವಸೂಲಿ ವಿರೋಧಿಸಿ ರಾಷ್ಟ್ರವ್ಯಾಪ್ತಿ ಲಾರಿ ಹಾಗೂ ಟ್ರಕ್ ಮುಷ್ಕರ ಅಕ್ಟೋಬರ್ 1 ರಿಂದ ಆರಂಭವಾಗಲಿದೆ. ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಸುಮಾರು 93 ಲಕ್ಷಕ್ಕೂ ಸರಕು ಸಾಗಣೆ ವಾಹನಗಳು ಸಂಚಾರ ಸ್ಥಗಿತಗೊಳಿಸಲಿವೆ ಎಂದು ಕರ್ನಾಟಕ ಲಾರಿ ಮಾಲೀಕರು ಹಾಗೂ ಏಜೆಂಟ್ ಗಳ ಸಂಘದ ಅಧ್ಯಕ್ಷ ಜಿ.ಆರ್ ಷಣ್ಮುಗಪ್ಪ ಹೇಳಿದ್ದಾರೆ.
ಆಗಸ್ಟ್ 28 ರಂದು ದೆಹಲಿಯಲ್ಲಿ ನಡೆದ ಅಖಿಲ ಭಾರತ ವಾಹನ ಸಾಗಣೆ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ (ಎಐಎಂಟಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಅಕ್ಟೋಬರ್ 1ರಿಂದ ರಾಷ್ಟ್ರವ್ಯಾಪ್ತಿ ಸರಕು ಸಾಗಣೆ ವಾಹನಗಳ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಗೊಳ್ಳಲಿದೆ ಎಂದರು. [ಮರಳಿನ ಬೆಲೆ ಗಗನಮುಖಿ, ಕಟ್ಟಡ ನಿರ್ಮಾಣಕ್ಕೆ ಬರೆ]
ಟೋಲ್ ಶುಲ್ಕ ಸಂಗ್ರಹ ಪಾರದರ್ಶಕವಾಗಿಲ್ಲ: ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹ ಪಾರದರ್ಶಕವಾಗಿಲ್ಲ. ಇದರಿಂದ ಟ್ರಕ್ ಮಾಲೀಕರಿಗೆ ಭಾರಿ ನಷ್ಟವಾಗುತ್ತಿದೆ. ಸರಿಯಾದ ಸಮಯಕ್ಕೆ ಸರಕು ಸಾಗಣಿಕೆ ಕೂಡಾ ಸಾಧ್ಯವಾಗುತ್ತಿಲ್ಲ. ಪ್ರತಿವರ್ಷ ಟೋಲ್ ಗೇಟ್ ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಗುತ್ತಿಗೆದಾರರಿಗೆ ಮಾತ್ರ ಅನುಕೂಲವಾಗುತ್ತಿದೆ. ವಾರ್ಷಿಕ ಟೋಲ್ ಪರ್ಮಿಟ್ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿ ದಿನಕ್ಕೆ 400 ಕಿ.ಮೀ ದೂರ ಕ್ರಮಿಸುತ್ತಿದ್ದ ಟ್ರಕ್ ಗಳು ಈಗ 250 ಕಿ.ಮೀ ದಾಟುವುದು ಕಷ್ಟವಾಗುತ್ತಿದೆ. ಇಂಧನ ಬಳಕೆ ಕೂಡಾ ಇಲ್ಲಿ ಗಮಿಸಬೇಕಾಗುತ್ತದೆ. ನಿಧಾನಗತಿ ಸಾಗಾಟ, ಇಂಧನ ಬಳಕೆ ವ್ಯಯ ಲೆಕ್ಕ ಹಾಕಿದರೆ 87,000 ಕೋಟಿ ರು ನಷ್ಟವಾಗುತ್ತಿದೆ ಎಂದರು.
ವಾರ್ಷಿಕ ಟೋಲ್ ಸಂಗ್ರಹ ವ್ಯವಸ್ಥೆ: ವಾರ್ಷಿಕ ಟೋಲ್ ಸಂಗ್ರಹ ವ್ಯವಸ್ಥೆ ಸೂಕ್ತವಾಗಿದ್ದು ಇದರಿಂದ ವಾರ್ಷಿಕ 1 ಲಕ್ಷ ಕೋಟಿ ಮೌಲ್ಯದ ಇಂಧನ ಉಳಿತಾಯ ಸಾಧ್ಯ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಸಮೀಕ್ಷೆ ವರದಿಯಿಂದ ತಿಳಿದು ಬಂದಿದೆ.
ಆದರೆ, ಸರ್ಕಾರ ಈ ಬಗ್ಗೆ ಗಮನ ಹರಿಸದೆ ಸ್ಪೀಡ್ ಗವರ್ನರ್ಸ್ ಅಳವಡಿಕೆಗೆ ಬಗ್ಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಹೇಳಿದರು. ದೇಶದಲ್ಲಿ ಸುಮಾರು 373 ಟೋಲ್ ಪ್ಲಾಜಗಳಿದ್ದು, 62 ಟೋಲ್ ಪ್ಲಾಜಗಳು ಹೂಡಿಕೆ (13,415 ಕೋಟಿ ರು) ಗಿಂತ 21,897 ಕೋಟಿ ರು ಅಧಿಕ ಮೊತ್ತವನ್ನು ಈಗಾಗಲೇ ಸಂಗ್ರಹಿಸಿವೆ. ಅದರೂ, ಶೇ 100ರಷ್ಟು ಟೋಲ್ ಶುಲ್ಕ ಸಂಗ್ರಹ ಜಾರಿಯಲ್ಲಿದೆ. ಹೀಗಾಗಿ ವಾರ್ಷಿಕ ಶುಲ್ಕ ಸಂಗ್ರಹ ವ್ಯವಸ್ಥೆಗೆ ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications