ಕೊಡಗಿನ ಗಡಿಯಲ್ಲಿ ನಕ್ಸಲರು ಪ್ರತ್ಯಕ್ಷ
ಮೈಸೂರು, ಫೆಬ್ರವರಿ 3 : ತಮಿಳುನಾಡು ಮತ್ತು ಕೇರಳದ ಕಡೆಯಿಂದ ಕರ್ನಾಟಕದತ್ತ ನಕ್ಸಲರು ನುಸುಳಿದ್ದಾರೆ ಎಂಬ ಶಂಕೆ ಹಿನ್ನಲೆಯಲ್ಲಿ ಇತ್ತೀಚೆಗೆ ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ನಡೆಸಲಾಗಿತ್ತು. ಆದರೆ ಇದೀಗ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿರುವುದು ಆತಂಕ ಸೃಷ್ಠಿಸುವಂತೆ ಮಾಡಿದೆ.
ಕೆಲವು ವರ್ಷಗಳ ಹಿಂದೆ ಚಿಕ್ಕಮಗಳೂರು, ಹಾಸನ, ಸುಬ್ರಹ್ಮಣ್ಯ ದಾಟಿ ಕೊಡಗಿನ ಮೂಲಕ ಕೇರಳಕ್ಕೆ ನಕ್ಸಲರು ಹೋಗಿದ್ದಾರೆ ಎಂಬ ಸುದ್ದಿ ಹರಡಿತ್ತು. ಇದಕ್ಕೆ ಕೊಡಗಿನ ಕೆಲವು ಮನೆಗಳಿಗೆ ತೆರಳಿ ಆಹಾರ ಸಾಮಗ್ರಿಗಳನ್ನು ನೀಡುವಂತೆ ಬೆದರಿಕೆ ಹಾಕಿದ್ದು ಸಾಕ್ಷಿಯಾಗಿತ್ತು.
ಆದರೆ ಇದೀಗ ಕೊಡಗು ಮತ್ತು ದಕ್ಷಿಣಕನ್ನಡ ಗಡಿಭಾಗದ ಕೊಯನಾಡು, ಸಂಪಾಜೆ, ಸುಳ್ಯ, ಸುಬ್ರಮಣ್ಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರಿರುವುದು ಪತ್ತೆಯಾಗಿದ್ದು, ಕೆಲವು ಮನೆಗಳಿಗೆ ತೆರಳಿ ಅಗತ್ಯ ವಸ್ತುಗಳನ್ನು ಹೆದರಿಸಿ ಕೇಳಿದ್ದಾರೆ ಅಲ್ಲದೆ ಆಹಾರ ಸಾಮಗ್ರಿಗಳನ್ನು ಪಡೆದು ತೆರಳಿದ್ದಾರೆ ಎನ್ನಲಾಗಿದೆ.

ನಕ್ಸಲರನ್ನು ನೋಡಿದವರು ಎನ್ನಲಾದ ಕೊಯನಾಡಿನ ಗುಡ್ಡಗದ್ದೆಯ ನಿವಾಸಿಗಳಾದ ಕುಡಿಯರ ಸಂಕಪ್ಪ, ನಾರಾಯಣ, ಕೃಷ್ಣಪ್ಪ, ವನಜಾಕ್ಷಿ ಅವರು ಮೂವರು ವ್ಯಕ್ತಿಗಳು ಇದ್ದರಲ್ಲದೆ, ಹಸಿರು ಬಣ್ಣದ ಮಿಲಿಟರಿ ಉಡುಪು ಧರಿಸಿರುವುದರ ಬಗ್ಗೆ ಹೇಳಿದ್ದಾರೆ.
ಇನ್ನು ಸಂಕಪ್ಪ ಅವರ ಮನೆಗೆ ತೆರಳಿದ ಶಸಸ್ತ್ರಧಾರಿಯಾಗಿದ್ದ ನಕ್ಸಲರು ಅಂಗಡಿಯಿಂದ ಸಾಮಾನು ತಂದು ಕೊಡುವಂತೆ ಬೆದರಿಸಿದ್ದು, ಇದರಿಂದ ಭಯಗೊಂಡ ಅವರು, ತಮ್ಮ ಮಕ್ಕಳಾದ ಚಿದಾನಂದ ಹಾಗೂ ಗಣೇಶ್ ಗೆ ರೂ.2 ಸಾವಿರ ನೀಡಿ ಅಂಗಡಿಯಿಂದ ಸಾಮಗ್ರಿ ತರಿಸಿಕೊಟ್ಟಿದ್ದಾರೆ. ಈ ವಿಚಾರ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಹೋದರೆಂದು ಸಂಕಪ್ಪ ತಿಳಿಸಿದ್ದಾರೆ.
ಆ ನಂತರ ಸಂಕಪ್ಪ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಯಾಚರಣೆ ಆರಂಭಗೊಂಡಿದ್ದು, ಕೊಡಗಿನ ಎಸ್ಪಿ ಪಿ.ರಾಜೇಂದ್ರಪ್ರಸಾದ್, ಡಿವೈಎಸ್ಪಿ ಸುಂದರರಾಜ್, ಗ್ರಾಮಾಂತರ ವೃತ್ತ ನಿರೀಕ್ಷಕ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿ ತೆರಳಿ ನಕ್ಸಲ್ ನಿಗ್ರಹ ದಳಕ್ಕೆ ಸಹಕಾರ ನೀಡಿದ್ದಾರೆ. ಸದ್ಯ ಮೂವರು ನಕ್ಸಲರ ಪೈಕಿ ಒಬ್ಬ ವಿಕ್ರಂ ಗೌಡ ಎನ್ನಲಾಗುತ್ತಿದೆ. ಸದ್ಯ ಕಾರ್ಯಾಚರಣೆ ಮುಂದುವರೆದಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications