ಸಿದ್ದು ಸಿಟ್ಟು, ಜಮಲಾರ್ ಆವೇಶ, ನಡೆದಿದ್ದೇನು? ತನಿಖೆಗೆ ಆಯೋಗ ಸೂಚನೆ
ಮೈಸೂರು, ಜನವರಿ 28: ಮೈಸೂರಿನ ಟಿ.ನರಸೀಪುರದ ಗರ್ಗೇಶ್ವರ ಗ್ರಾಮದಲ್ಲಿ ಕೆಪಿಟಿಸಿಎಲ್ ಪವರ್ ಎಕ್ಸಚೈಂಜ್ ಕಾಮಗಾರಿ ಶಂಕಸ್ಥಾಪನೆ ವೇಳೆ ನಡೆದ ಘಟನೆ ಬಗ್ಗೆ ಸಂಪೂರ್ಣ ವಿವರ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಜಮಲಾರ್ ನಡುವೆ ನಡೆದ ವಾಗ್ದಾಳಿ ಬಗ್ಗೆ ತನಿಖೆ ನಡೆಸುವಂತೆ ಡಿಜಿಪಿ ನೀಲಮಣಿ ರಾಜು ಅವರಿಗೆ ಮಹಿಳಾ ಆಯೋಗ ನಿರ್ದೇಶನ ನೀಡಿದೆ.
ತಮ್ಮ ಊರಿನ ಸಮಸ್ಯೆ ಕುರಿತು ಜಮಲಾರ್ ಅವರು ವಿವರಿಸುತ್ತಾ ಭಾವನಾತ್ಮಕವಾಗಿ ವರ್ತಿಸಿ, ಸಿದ್ದರಾಮಯ್ಯ ಅವರ ಮುಂದಿದ್ದ ಮೇಜಿಗೆ ಕುಟ್ಟಿದ್ದಾರೆ. ನಿಮ್ಮ ಮಗ ಹಾಗೂ ಎಂಎಲ್ಎ ಯತೀಂದ್ರ ಊರಿಗೆ ಬರುವುದಿಲ್ಲ. ನಮ್ಮ ಸಮಸ್ಯೆ ಕೇಳುವವರಿಲ್ಲ ಎಂದಿದ್ದಾರೆ. ಈ ಸಂದರ್ಭದಲ್ಲಿ ಅವರ ಬಳಿ ಇದ್ದ ಮೈಕನ್ನು ಸಿದ್ದರಾಮಯ್ಯ ಅವರು ಕಸಿದುಕೊಂಡಿದ್ದಾರೆ. ಈ ವೇಳೆ ಜಮಾಲರ ದುಪ್ಪಟ್ಟಾ ಜಾರಿದೆ. ಸಿದ್ದರಾಮಯ್ಯ ಅವರು ಆಕೆಯನ್ನು ಗದರಿದ್ದಾರೆ.
ನಾವೇನೋ ದೇಶಕ್ಕೆ ಅನ್ಯಾಯ ಮಾಡಿರೋರ ಥರ ಮಾತಾಡ್ತಿದ್ದೀಯಾ? ಟೇಬಲ್ ಕುಟ್ಟಿ ಮಾತಾಡ್ತಿಯಾ? ನನ್ನ ಮುಂದೆಯೇ ಟೇಬಲ್ ಕುಟ್ಟಿ ಮಾತನಾಡುತ್ತಿದ್ದೀಯಾ? ಕುತ್ಕೊಳ್ಳಮ್ಮ ಸುಮ್ಮನೆ ಎಂದು ಏರು ಧ್ವನಿಯಲ್ಲೇ ಸಿದ್ದರಾಮಯ್ಯ ಅವಾಜ್ ಹಾಕಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಯತೀಂದ್ರ ಅವರು ಅಲ್ಲೇ ಉಪಸ್ಥಿತರಿದ್ದರು. ಸಿದ್ದರಾಮಯ್ಯ ಹಾಗೂ ಜಮಾಲರ ನಡುವಿನ ಮಾತಿನ ಚಕಮಕಿ ವಿಡಿಯೋ ವೈರಲ್ ಆಗಿದೆ. ಆದರೆ, ಈ ಬಗ್ಗೆ ಜಮಾಲ ಅವರು ಸ್ಪಷ್ಟನೆ ನೀಡಿದ್ದಾರೆ.

ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಜಮಲಾರ್
ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಜಮಲಾರ್ ಅವರು ಘಟನೆ ಬಗ್ಗೆ ಪ್ರತಿಕ್ರಿಯಿಸಿ, ನಾನು ಆವೇಶದಿಂದ ಮಾತನಾಡಿದೆ. ಶಾಸಕರು ಬಂದರೂ ನಮ್ಮ ಜೊತೆ ಮಾತನಾಡಲು ಸಿಗುತ್ತಿಲ್ಲ ಎಂದು ಹೇಳಿದೆ. ಸಿದ್ದರಾಮಯ್ಯ ನಮ್ಮ ನೆಚ್ಚಿನ ಮುಖ್ಯಮಂತ್ರಿ, ನಾನು ಕೋಪದ ಭರದಲ್ಲಿ ಟೇಬಲ್ ಮೇಲೆ ಗುದ್ದಿದೆ. ಮಾತು ನಿಲ್ಲಿಸುವಂತೆ ನನಗೆ ಹೇಳಿ, ಮೈಕ್ ಕಿತ್ತುಕೊಂಡರು ಅಷ್ಟೇ. ನಾನು ತಾಳ್ಮೆಯಿಂದ ವರ್ತಿಸಬೇಕಿತ್ತು ಎಂದಿದ್ದಾರೆ.
| Array |
ಮಾತಿನ ಚಕಮಕಿ ವಿಡಿಯೋ ವೈರಲ್
ಮೈಸೂರಿನ ಟಿ.ನರಸೀಪುರದ ಗರ್ಗೇಶ್ವರ ಗ್ರಾಮದಲ್ಲಿ ಕೆಪಿಟಿಸಿಎಲ್ ಪವರ್ ಎಕ್ಸಚೈಂಜ್ ಕಾಮಗಾರಿ ಶಂಕಸ್ಥಾಪನೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಜಮಲಾರ್ ನಡುವೆ ನಡೆದ ಮಾತಿನ ಚಕಮಕಿ ವಿಡಿಯೋ ವೈರಲ್ ಆಗಿದೆ.
| Array |
ಮಹಿಳಾ ಆಯೋಗದಿಂದ ತನಿಖೆಗೆ ಸೂಚನೆ
ಮೈಸೂರಿನ ಟಿ.ನರಸೀಪುರದ ಗರ್ಗೇಶ್ವರ ಗ್ರಾಮದಲ್ಲಿ ಕೆಪಿಟಿಸಿಎಲ್ ಪವರ್ ಎಕ್ಸಚೈಂಜ್ ಕಾಮಗಾರಿ ಶಂಕಸ್ಥಾಪನೆ ವೇಳೆ ನಡೆದ ಘಟನೆ ಬಗ್ಗೆ ಸಂಪೂರ್ಣ ವಿವರ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚಿಸಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ
ಆಕೆಯನ್ನು ನಾನು 15 ವರ್ಷಗಳಿಂದ ಬಲ್ಲೆ, ಪಕ್ಷದ ಕಾರ್ಯಕರ್ತೆ, ನನ್ನ ತಂಗಿ ಇದ್ದ ಹಾಗೆ, ಅನುಚಿತವಾಗಿ ವರ್ತಿಸಿದೆ ಎಂಬುದು ಸುಳ್ಳು. ಆವೇಶಭರಿತರಾಗಿ ಮಾತನಾಡಿದ್ದು ನಿಜ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications