ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗಟ್ಟಲು ಶುರುವಾಗಿದೆ ಡ್ರೋನ್ ಬಳಕೆ
ಮೈಸೂರು, ಜನವರಿ 18: ಅಕ್ರಮ ಗಣಿಗಾರಿಕೆ, ಕಟ್ಟಡ ನಿರ್ಮಾಣದ ಕಲ್ಲುಗಳ ಸಾಗಣೆ, ಅತಿಕ್ರಮಣ ಹಾಗೂ ಒತ್ತುವರಿಯನ್ನು ಕಡಿವಾಣ ಹಾಕಲು ಡಿಜಿಟಲ್ ಲೆಕ್ಕಪರಿಶೋಧನೆಗಾಗಿ ಮುಂದಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಈ ಸಂಬಂಧ ದೇಶದಲ್ಲಿ ಇದೇ ಮೊದಲ ಬಾರಿಗೆ ಡ್ರೋನ್ ಮೂಲಕ ರಾಜ್ಯದ ಎಲ್ಲಾ ಕ್ವಾರಿಗಳ ಸಮೀಕ್ಷೆ ನಡೆಸುತ್ತಿದೆ. ಈ ಸರ್ವೇ ಕಾರ್ಯ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ.
ರಾಜ್ಯದಲ್ಲಿರುವ ಉಪ ಖನಿಜಗಳ 2,400 ಕ್ವಾರಿಗಳು ಹಾಗೂ ಸ್ಥಗಿತಗೊಂಡ ಸುಮಾರು 2,300 ಕ್ವಾರಿಗಳನ್ನು ಗುರುತಿಸಿ ಡಿಜಿಪಿಎಎಸ್ ತಂತ್ರಜ್ಞಾನ ಬಳಸಿ ಹಾಗೂ ಡ್ರೋನ್ ಮೂಲಕ ಸಮೀಕ್ಷಾ ಕಾರ್ಯ ಕೈಗೆತ್ತಿಕೊಳ್ಳುತ್ತಿದೆ. ಈಗಾಗಲೇ ಶೇ.60ಷ್ಟು ಸರ್ವೆ ಸಂಪೂರ್ಣಗೊಂಡಿದೆ.
ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಮತ್ತು ಗ್ರಾಮಾಂತರ, ಶಿವಮೊಗ್ಗ ಸೇರಿದಂತೆ ಮುಂತಾದ ಕಡೆ ಈ ಬಹುತೇಕ ಸಮೀಕ್ಷೆ ಸಂಪೂರ್ಣಗೊಂಡಿದೆ. ಇದರೊಟ್ಟಿಗೆ ಉತ್ತರ ಕರ್ನಾಟಕದ ಭಾಗದಲ್ಲಿ ಸಮೀಕ್ಷೆ ಕಾರ್ಯ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.
ಗಣಿ ಮತ್ತು ಭೂಗರ್ಭ ಇಲಾಖೆ ಅಂಕಿ ಅಂಶಗಳ ಪ್ರಕಾರ ಹಾಲಿ 2, 350 ಸಣ್ಣ ಪ್ರಮಾಣದ ಖನಿಜಗಳ ಗಣಿಗಾರಿಕೆ ಮತ್ತು 378 ದೊಡ್ಡ ಪ್ರಮಾಣದ ಖನಿಜಗಳ ಗಣಿಗಾರಿಕೆ ರಾಜ್ಯದಲ್ಲಿ ನಡೆಯುತ್ತಿದೆ. ಇದರಲ್ಲಿ ಬಹುತೇಕ ಕಲ್ಲು ಗಣಿಗಾರಿಕೆಯಾಗಿದೆ.

1000 ಕೋಟಿ ರೂ.ದಂಡ ಸಂಗ್ರಹ
ಗಣಿ ಇಲಾಖೆಯ ಡಿಜಿಟಲೀಕರಣ ಹಾಗೂ ಡ್ರೋನ್ ಸಮೀಕ್ಷೆಯಿಂದ ಮುಂದಿನ ವರ್ಷ 1000 ಕೋಟಿ ರೂ.ದಂಡ ಸಂಗ್ರಹದ ಗುರಿ ಹೊಂದಲಾಗಿದೆ. ಕಳೆದ ವರ್ಷ ದಂಡ ಶುಲ್ಕದ ಪ್ರಮಾಣ ಕೇವಲ 37 ಕೋಟಿಯಾಗಿತ್ತು. ಅಕ್ರಮ ಗಣಿಗಾರಿಕೆಯಿಂದ ಹಾಗೂ ವೈಜ್ಞಾನಿಕ ಸಮೀಕ್ಷೆ ಇಲ್ಲದ ಹಿನ್ನೆಲೆಯಲ್ಲಿ ಸರ್ಕಾರದ ಹಣ ಖೋತಾ ಆಗುತ್ತಿತ್ತು. ಆದರೆ ಈ ಬಾರಿ ಬರೋಬ್ಬರಿ 3000 ರೂ. ಕೋಟಿ ದಂಡದ ಗುರಿ ಹೊಂದಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಸಮೀಕ್ಷೆ ತೃಪ್ತಿಕರವಾಗಿರಲಿಲ್ಲ
ಈ ಮೊದಲು ಕ್ವಾರಿಗಳನ್ನು ಖುದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದರು. ಆದರೆ ಅದು ತೃಪ್ತಿಕರವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಆಧಾರಿತ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಡ್ರೋನ್ ಮೂಲಕ ಕ್ವಾರಿಗಳ ನಡೆದ ಮಟ್ಟವನ್ನು ಹಾಗೂ ಡಿಜಿಪಿಎಸ್ ನಿಂದ ಕ್ವಾರಿ ಗಡಿಗಳನ್ನು ಗುರುತಿಸಲಾಗುವುದು.

ಸರ್ಕಾರಕ್ಕೆ ಹೆಚ್ಚು ಆದಾಯ ಬರಲಿದೆ
ತದನಂತರದಲ್ಲಿ ಉದ್ದೇಶಿತ ಕ್ವಾರಿಗಳಲ್ಲಿ ಎಷ್ಟು ಗಣಿಗಾರಿಕೆ ನಡೆದಿದೆ ಎಂಬುದನ್ನು ಡಿಜಿಟಲ್ ತಂತ್ರಜ್ಞಾನದಿಂದ ಲೆಕ್ಕ ಹಾಕಲಾಗುವುದು. ಈ ಕ್ರಮದಿಂದ ಗುತ್ತಿಗೆದಾರರು ನಿಯಮ ಬಾಹಿರವಾಗಿ ಗಣಿಗಾರಿಕೆ ನಡೆಸಿದರೆ ಸುಲಭವಾಗಿ ಕಂಡುಹಿಡಿಯಬಹುದು. ಆ ಮೂಲಕ ಸರ್ಕಾರಕ್ಕೆ ಹೆಚ್ಚು ಆದಾಯ ಬರಲಿದೆ.

ಪಂಚಾಯಿತಿ ವ್ಯಾಪ್ತಿಯಲ್ಲೂ ಮಾಹಿತಿ ಲಭ್ಯ
ಮುಂದಿನ ದಿನಗಳಲ್ಲಿ ಈ ದತ್ತಾಂಶಗಳನ್ನು ಕ್ರೋಢೀಕರಿಸಿ ಮ್ಯಾಪಿಂಗ್ ಮಾಡಲಾಗುವುದು ಆಗ ಪಂಚಾಯಿತಿ ವ್ಯಾಪ್ತಿಯಲ್ಲೂ ಈ ಮಾಹಿತಿ ಲಭ್ಯವಾಗಲಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications